ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ, ಎಎಪಿ ಸಂಸದರ ನಿವಾಸದ ಮೇಲೆ ದಾಳಿ: ಇ.ಡಿ ವಿರುದ್ಧ ಆಪ್ ಆಕ್ರೋಶ

Date:

Advertisements

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ, ಎಎಪಿ ರಾಜ್ಯಸಭಾ ಸದಸ್ಯ ಹಾಗೂ ಮತ್ತಿತ್ತರರ ನಾಯಕರ ನಿವಾಸಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಇ.ಡಿ ಅಧಿಕಾರಿಗಳು ದೆಹಲಿ, ಚಂಡೀಗಡ ಹಾಗೂ ವಾರಣಾಸಿಯ 12 ಸ್ಥಳಗಳ ಮೇಲೆ ಪರಿಶೋಧನೆ ನಡೆಸಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಬವ್ ಕುಮಾರ್, ರಾಜ್ಯಸಭಾ ಸದಸ್ಯ ಎನ್ ಡಿ ಗುಪ್ತ, ದೆಹಲಿಯ ಮಾಜಿ ಜಲಮಂಡಳಿಯ ಸದಸ್ಯ ಶಲಾಭ್ ಕುಮಾರ್ ದಾಳಿಗೊಳಗಾದ ನಾಯಕರು.

Advertisements

ದಾಳಿಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಶಿಕ್ಷಣ ಸಚಿವೆ ಆತಿಶಿ,”ನಾವು ಎದರುವುದಿಲ್ಲ. ಅಕ್ರಮಗಳ ಬಗ್ಗೆ ಯಾವುದೇ ಪುರಾವೆಗಳು ದೊರಕಿಲ್ಲ. ತನಿಖಾ ಸಂಸ್ಥೆಯು ಅಬಕಾರಿ ನೀತಿ ಪ್ರಕರಣದ ತನಿಖೆಯಲ್ಲಿ ಕೆಲವೊಂದು ಪ್ರಕರಣಗಳಲ್ಲಿ ಸಾಕ್ಷಿಗಳ ಹೇಳಿಕೆಯ ಆಡಿಯೋ ದಾಖಲೆಗಳನ್ನು ಅಳಿಸಿಹಾಕಿದೆ. ಪ್ರಕರಣದ ಸಾಕ್ಷಿಗಳಲ್ಲಿ ಕೂಡ ಮೋಸ ನಡೆದಿರುವುದು ಕೂಡ ಬೆಳಕಿಗೆ ಬಂದಿದೆ. ತನಿಖಾ ಸಂಸ್ಥೆಯು ಸಿಸಿ ವಿಡಿಯೋಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಪ್ರಶ್ನಿಸುವುದಾಗಿ” ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

“ಎರಡು ವರ್ಷಗಳ ತನಿಖೆಯಲ್ಲಿ ಒಂದು ರೂಪಾಯಿಯನ್ನು ಕೂಡ ವಶಪಡಿಸಿಕೊಂಡಿಲ್ಲ. ಸಣ್ಣ ಪ್ರಮಾಣದ ಪುರಾವೆ ಕೂಡ ಇ.ಡಿಗೆ ದೊರಕಿಲ್ಲ. ಇವರ ಪೂರ್ಣ ತನಿಖೆ ಹೇಳಿಕೆಗಳ ಮೇಲೆ ಮಾತ್ರ ನಿಂತಿದ್ದು, ಪ್ರಕರಣದ ಸಾಕ್ಷಿಗಳಲ್ಲೂ ಕೂಡ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ವಂಚನೆಯನ್ನು ಮುಚ್ಚಿಡುವ ಸಲುವಾಗಿ ಇ.ಡಿ ಸಿಸಿ ಟಿವಿಯ ದಾಖಲೆಗಳನ್ನು ಅಳಿಸಿಹಾಕುತ್ತಿದೆ”ಎಂದು ಆತಿಶಿ ಹೇಳಿದರು.

“ಕಳೆದ 2 ವರ್ಷಗಳಲ್ಲಿ ಎಎಪಿ ನಾಯಕರನ್ನು ಬೆದರಿಸಲಾಗುತ್ತಿದೆ. ಅಬಕಾರಿ ಹಗರಣದಲ್ಲಿ ಕೆಲವೊಬ್ಬರು ಮನೆಗಳ ಮೇಲೆ ದಾಳಿ ನಡೆದಿದೆ. ಮತ್ತೂ ಕೆಲವರನ್ನು ಬಂಧಿಸಲಾಗಿದೆ.ಎರಡು ವರ್ಷಗಳ ದಾಳಿಯಲ್ಲಿ ಇ.ಡಿ ಒಂದು ರೂಪಾಯಿಯನ್ನು ವಶಪಡಿಸಿಕೊಂಡಿಲ್ಲ. ಸ್ಪಷ್ಟವಾದ ಸಾಕ್ಷ್ಯಗಳು ದೊರಕಿಲ್ಲ.ನ್ಯಾಯಾಲಯ ಕೂಡ  ಸಾಕ್ಷಿ, ಪುರಾವೆ ಒದಗಿಸಿ ಎಂದು ಇ.ಡಿಗೆ ಒತ್ತಾಯಿಸುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X