ತರಗತಿಯಲ್ಲೇ ವಿದ್ಯಾರ್ಥಿಯನ್ನು ವಿವಾಹವಾದ ಪ್ರಾಧ್ಯಾಪಕಿ; ತನಿಖೆಗೆ ಆದೇಶ

Date:

Advertisements

ಪ್ರಾಧ್ಯಾಪಕಿಯೊಬ್ಬರು ಕಾಲೇಜಿನ ತರಗತಿಯಲ್ಲಿಯೇ ತನ್ನ ವಿದ್ಯಾರ್ಥಿಯನ್ನು ವಿವಾಹವಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪಶ್ಚಿಮ ಬಂಗಾಳದ ನಾಡಿಯಾ ಪಟ್ಟಣದಲ್ಲಿರುವ ಹರಿಂಗತಾ ಕಾಲೇಜಿನಲ್ಲಿ ವಿದ್ಯಾರ್ಥಿಯನ್ನು ಪ್ರಾಧ್ಯಾಪಕಿ ತರಗತಿಯಲ್ಲೇ ಮದುವೆಯಾಗಿದ್ದಾರೆ ಎಂದು ವರದಿಗಳು ಪ್ರಕಟವಾಗಿವೆ. ಆದರೆ, ಇದು ನಿಜವಾದ ವಿವಾಹವಲ್ಲ ಎಂದು ಕಾಲೇಜು ಸ್ಪಷ್ಟಪಡಿಸಿದೆ. ಆದಾಗ್ಯೂ, ಘಟನೆಯ ಬಗ್ಗೆ ತನಿಖೆ ನಡೆಸಲು ಮೌಲಾನಾ ಅಬುಲ್ ಕಲಾಂ ಆಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯ ಆದೇಶಿಸಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಪಾಯಲ್ ಬ್ಯಾನರ್ಜಿ ಎಂದು ಹೇಳಲಾಗಿರುವ ಪ್ರಾಧ್ಯಾಪಕಿ ವಧುವಿನ ರೀತಿ ಉಡುಗೆಗಳನ್ನು ತೊಟ್ಟಿದ್ದು, ವಿದ್ಯಾರ್ಥಿಯೊಂದಿಗೆ ಹಾರ ಬದಲಿಸಿಕೊಂಡಿರುವುದು ಕಂಡುಬಂದಿದೆ. ಅಲ್ಲದೆ, ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿ ಪರಸ್ಪರ ಸಂಗಾತಿಗಳಾಗಿ ಒಪ್ಪಿಕೊಂಡು ಸಹಿ ಹಾಕಿರುವ ಕಾಲೇಜಿನ ಲೆಟರ್‌ಹೆಡ್‌ ಕೂಡ ವೈರಲ್ ಆಗಿದೆ.

ಆದರೆ, ಇದು ನಿಜವಾದ ಮದುವೆಯಲ್ಲ. ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ, ಆಂತರಿಕ ಬಳಕೆಗಾಗಿ ನಡೆಸಲಾದ ನಾಟಕದ ಚಿತ್ರೀಕರಣವಾಗಿದೆ ಎಂದು ಕಾಲೇಜು ಆಡಳಿತ ತಿಳಿಸಿದೆ.

Advertisements

ಹಲವು ವರ್ಷಗಳಿಂದ ಕಾಲೇಜಿನಲ್ಲಿ ಮನೋವಿಜ್ಞಾನ ಬೋಧನೆ ಮಾಡುತ್ತಿರುವ ಪಾಯಲ್ ಬ್ಯಾನರ್ಜಿ, “ಇದು ತಮ್ಮ ತರಗತಿಯಲ್ಲಿ ವಿವಾಹ ಪರಿಕಲ್ಪನೆಗಳ ಬಗ್ಗೆ ವಿವರಿಸಲು ರಚಿಸಲಾಗಿದ್ದ ‘ಮಾನಸಿಕ ನಾಟಕ’ವಾಗಿದೆ. ಆದರೆ, ಆ ವಿಡಿಯೋವನ್ನು ಹೊರಗೆ ಹರಿಬಿಟ್ಟು, ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

ಆದಾಗ್ಯೂ, ತನಿಖೆಗೆ ಆದೇಶಿಸಿದ ಬಳಿಕ ಪ್ರಾಧ್ಯಾಪಕಿಯನ್ನು ರಜೆಯ ಮೇಲೆ ಕಳುಹಿಸಲಾಗಿದೆ. ಸರಿಯಾದ ತನಿಖೆ ನಡೆದು, ವರದಿ ಬಾರದೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X