ಯುವತಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಪಿಎಸ್‌ಐ; ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

Date:

Advertisements

ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ವೊಬ್ಬ ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸಗಿ, ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಅತ್ಯಾಚಾರಗೈದು ಓಡಿಹೋಗಲು ಯತ್ನಿಸಿದ ಪಿಎಸ್‌ಐನನ್ನು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಹಿಡಿದು, ಕಂಬಕ್ಕೆ ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನನ್ನು ಬಂಧಿಸಲಾಗಿದ್ದು, ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಗೆ ನುಗ್ಗಿದ್ದ ಕಾಮುಕ ಪಿಎಸ್‌ಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ, ಆಕೆಯ ತಂದೆ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಾಗಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಯುವತಿಯ ಚೀರಾಟ ಕೇಳಿ ಮನೆಗೆ ಧಾವಿಸಿದ ಗ್ರಾಮಸ್ಥರು ಆರೋಪಿಯನ್ನು ಹಿಡಿದು, ಕಂಬಕ್ಕೆ ಕಟ್ಟಿ, ಥಳಿಸಿದ್ದಾರೆ.

ಪೊಲೀಸ್‌ ಸಮವಸ್ತ್ರದಲ್ಲಿರುವ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ, ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರೋಪಿಯು ಆಗ್ರಾದ ಪಿಎಸ್‌ಐ ಸಂದೀಪ್‌ ಕುಮಾರ್ (34) ಎಂದು ತಿಳಿದುಬಂದಿದೆ. ವಿಡಿಯೋ ಆಧರಿಸಿ ಆತನನ್ನು ಅಮಾನತುಗೊಳಿಸಿ ಪೊಲೀಸ್‌ ಆಯುಕ್ತ ಪ್ರೀತೀಂದರ್ ಸಿಂಗ್‌ ಆದೇಶಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿ ಪಿಎಸ್‌ಐ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 452ರ ಅನ್ವಯ ಎಫ್‍ಐಆರ್ ದಾಖಲಿಸಲಾಗಿದೆ.

Advertisements

ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ಪಿಎಸ್‍ಐ ಹಾಗೂ ಒಬ್ಬ ಪೊಲೀಸ್ ಯುವತಿಯ ಮನೆಗೆ ಬಂದು ಬಾಗಿಲು ಬಡಿದಿದ್ದಾರೆ. ನಾವು ವಿಚಾರಣೆಗೆ ಬಂದಿದ್ದೇವೆಂದು ಹೇಳಿದ್ದಾರೆ. ಆದರೆ, ಈ ಹಿಂದೆಯೂ ಆತ ಕಿರುಕುಳ ನೀಡಿದ್ದರಿಂದ ಬಾಗಿಲು ತೆರೆಯಲು ಯುವತಿ ನಿರಾಕರಿಸಿದ್ದಾಳೆ. ಆಗ ಸಂದೀಪ್ ಛಾವಣಿಯ ಮೂಲಕ ಜಿಗಿದು ಮನೆಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

”ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಗಿದೆ. ಸಂದೀಪ್ ವಿರುದ್ಧ ಇಲಾಖಾ ತನಿಖೆಗೂ ಆದೇಶ ನೀಡಲಾಗಿದೆ” ಎಂದು ಡಿಸಿಪಿ ಸೋನಮ್ ಕುಮಾರ್ ತಿಳಿಸಿದ್ದಾರೆ.

”ಗಸ್ತು ತಿರುಗುವ ನೆಪದಲ್ಲಿ ಗ್ರಾಮಕ್ಕೆ ಭೇಟಿ ನೀಡುತ್ತಿದ್ದ ಸಂದೀಪ್, ಎರಡು ತಿಂಗಳಿಂದ ಯುವತಿಗೆ ಕಿರುಕುಳ ನೀಡುತ್ತಿದ್ದ. ನಾವು ಆತನನ್ನು ಹಿಡಿದಾಗ ಆತ ಪಾನಮತ್ತನಾಗಿದ್ದ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X