ವಿವಾದಾತ್ಮಕ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಬಂಧನ

Date:

ಪಿಸ್ತೂಲ್‌ ಹಿಡಿದು ರೈತರಿಗೆ ಬೆದರಿಸಿದ ಆರೋಪದ ಮೇಲೆ ವಿವಾದಾತ್ಮಕ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಪಿಸ್ತೂಲ್‌ ಹಿಡಿದು ಬೆದರಿಸಿದ ಹಳೆಯ ವಿಡಿಯೋ ಅಧಾರದ ಮೇಲೆ ಬಂಧನವಾಗಿದೆ.

ವಿಡಿಯೋ ವೈರಲ್‌ ಆದ ನಂತರ ಮನೋರಮಾ ಅವರು ನಾಪತ್ತೆಯಾಗಿದ್ದರು. ಆರೋಪಿ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಿತ್ತು.

ವಿಡಿಯೋ ವೈರಲ್‌ ಆದ ನಂತರ ರೈತರೊಬ್ಬರು ಮನೋರಮಾ ಖೇಡ್ಕರ್ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು.

ವೈರಲ್‌ ಆದ ವಿಡಿಯೋದಲ್ಲಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಹಾಗೂ ಆಕೆಯ ಪತಿ ದಿಲೀಪ್‌ ಖಾಂಡೇಕರ್‌ ಅವರು ಭೂ ವ್ಯಜ್ಯದ ಹಿನ್ನೆಲೆಯಲ್ಲಿ ಪುಣೆಯ ಮುಲ್ಷಿ ತೆಷಿಲ್‌ ಪಟ್ಟಣದಲ್ಲಿ ತಮ್ಮ ಬೆಂಬಲಿಗರೊಂದಿಗೆ ರೈತರಿಗೆ ಬೆದರಿಕೆಯೊಡ್ಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ಯೋಜನೆಗಳಿಗೆ ಮೀಸಲು ನಿಧಿ ಬಳಕೆಯನ್ನು ತಕ್ಷಣ ತಡೆಯಬೇಕು 

ದಿಲೀಪ್‌ ಖೇಡ್ಕರ್ ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದು,ಮುಲ್ಷಿ ತೆಷಿಲ್‌ನಲ್ಲಿ 25 ಎಕರೆ ಭೂಮಿ ಖರೀದಿಸಿದ್ದರು. ವಿಡಿಯೋ ವೈರಲ್‌ ಆದ ನಂತರ ದಿಲೀಪ್‌ ವಿರುದ್ಧ ಲುಕ್‌ಔಟ್‌ ನೋಟಿಸ್ ಹೊರಡಿಸಲಾಗಿತ್ತು. ಮೂಲಗಳ ಪ್ರಕಾರ 2022ರಲ್ಲಿ ಬೆದರಿಸಿದ ವಿಡಿಯೋ ಎನ್ನಲಾಗಿದೆ.

2023ರ ಸಾಲಿನ ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್ ಅವರು ತಮ್ಮ ಪ್ರೊಬೇಷನ್‌ ಅವಧಿಯಲ್ಲಿ ಲಂಚ ಸೇರಿದಂತೆ ಮತ್ತಿತ್ತರ ಬೇಡಿಕೆಗಳಿಗಾಗಿ ದೂರು ಬಂದ ಹಿನ್ನೆಲೆಯಲ್ಲಿ ಪುಣೆಯಿಂದ ವಾಸೀಮ್‌ ಪಟ್ಟಣಕ್ಕೆ ವರ್ಗಾವಣೆಗೊಳಿಸಲಾಗಿತ್ತು.

ಇದಲ್ಲದೆ ಪ್ರಮಾಣಪತ್ರವನ್ನು ತಿರುಚಿದ ಆರೋಪ ಕೂಡ ಈ ಅಧಿಕಾರಿಯ ಮೇಲಿದೆ. ಕೇಂದ್ರ ಸರ್ಕಾರ ಆಕೆಯ ನಡತೆ ಹಾಗೂ ಆಯ್ಕೆ ಪ್ರಕ್ರಿಯೆಯ ಬಗ್ಗೆ ಏಕ ಸದಸ್ಯ ಸಮಿತಿಯನ್ನು ರಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯ ಮಲ್ಯ- ಕಳ್ಳನೋ, ಸುಳ್ಳನೋ, ವಂಚಕನೋ ಅಥವಾ ಸಂತನೋ?

ವಿಜಯ ಮಲ್ಯ ಮೇಲಿರುವುದು ಸಾಲ ತೀರಿಸದ ಆರೋಪವೊಂದೇ ಅಲ್ಲ. ಅವರ ಮೇಲೆ...

ವಿಚಿತ್ರ-ವಿಕೃತ ಘಟನೆ: ವರದಕ್ಷಿಣೆಯಾಗಿ ‘ಕಿಡ್ನಿ’ ಕೊಡುವಂತೆ ಸೊಸೆಗೆ ಅತ್ತೆ-ಮಾವ ಕಿರುಕುಳ

ಭಾರತದಲ್ಲಿ ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಅತ್ಯಾಚಾರ, ಬಾಲ್ಯವಿವಾಹ ಹಾಗೂ...

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ರಾಕೆಟ್‌ನಲ್ಲಿ ಆಮ್ಲಜನಕ ಸೋರಿಕೆ, ಭಾರತದ ಶುಭಾಂಶು ಇರುವ ಅಂತರಿಕ್ಷಯಾನ ಮುಂದೂಡಿಕೆ

ತಾಂತ್ರಿಕ ದೋಷದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ತಂಡ ತೆರಳಬೇಕಿದ್ದ...

Download Eedina App Android / iOS

X