ಪುಣೆ| 13 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ತಂದೆ, ಚಿಕ್ಕಪ್ಪ, ಸೋದರ ಸಂಬಂಧಿ

Date:

Advertisements

ಪುಣೆಯ 13 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ, ಚಿಕ್ಕಪ್ಪ ಮತ್ತು ಸೋದರ ಸಂಬಂಧಿಯೇ ನಿರಂತರ ಅತ್ಯಾಚಾರ ಎಸಗಿದ್ದು, ಪುಣೆ ಪೊಲೀಸರು ಬಂಧಿಸಿದ್ದಾರೆ.

ಶಾಲೆಯಲ್ಲಿ ‘ಗುಡ್ ಟಚ್ ಮತ್ತು ಬ್ಯಾಡ್ ಟಚ್’ ಬಗ್ಗೆ ಸೆಷನ್‌ ನಡೆಯುತ್ತಿದ್ದಾಗ ಈ ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರವು ಬೆಳಕಿಗೆ ಬಂದಿದೆ. ಈ ಬಾಲಕಿ ಈ ಸೆಷನ್‌ನಲ್ಲಿ ತನ್ನೆಲ್ಲ ಕಷ್ಟವನ್ನು ಹಂಚಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಪೋಲೀಸರ ಪ್ರಕಾರ, ಸಂತ್ರಸ್ತೆಯ ಸೋದರಸಂಬಂಧಿ 2023ರ ಜುಲೈ ತಿಂಗಳಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನ ಮೇಲೆ ಕೆಟ್ಟ ಪರಿಣಾಮ ಬೀರುವುದಾಗಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ತಂದೆ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ಬೀದರ್‌ | ಬಾಲಕಿ ಮೇಲೆ ಅತ್ಯಾಚಾರ; 60 ವರ್ಷದ ಕಾಮುಕನ ಬಂಧನ

2024ರ ಜನವರಿ ತಿಂಗಳಲ್ಲಿ ಆಕೆಯ ಚಿಕ್ಕಪ್ಪ ಆಕೆಯನ್ನು ಲೈಂಗಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. “ಬಾಲಕಿ ಚಿಕ್ಕಪ್ಪನ ನಡೆಯನ್ನು ವಿರೋಧಿಸಿದಾಗ, ಕಿರುಚಲು ಪ್ರಯತ್ನಿಸಿದಾಗ, ಅವನು ಬಾಲಕಿಯ ಬಾಯಿಯನ್ನು ಬಿಗಿ ಹಿಡಿದು ಥಳಿಸಿದ್ದಾನೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕೆಯ ತಂದೆ ಮತ್ತು ಚಿಕ್ಕಪ್ಪ 40 ವರ್ಷದವರಾಗಿದ್ದು ಆಕೆಯ ಸೋದರ ಸಂಬಂಧಿ 20 ವರ್ಷದವನಾಗಿದ್ದಾನೆ. ‘ಗುಡ್ ಟಚ್ ಮತ್ತು ಬ್ಯಾಡ್ ಟಚ್’ ಕುರಿತು ತನ್ನ ಶಾಲೆಯಲ್ಲಿ ಕೌನ್ಸೆಲಿಂಗ್ ಸಮಯದಲ್ಲಿ ಬಾಲಕಿ ಈ ಮಾಹಿತಿ ಹೇಳಿದ್ದಾಳೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿ ತಿಳಿಸಿದರು.

ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅತ್ಯಾಚಾರ ಆರೋಪದಡಿ ಮೂವರನ್ನು ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X