ಪುಣೆ ಬಸ್‌ನಲ್ಲಿ ಅತ್ಯಾಚಾರ ಪ್ರಕರಣ | ಆರೋಪಿಯ ಚಿತ್ರ ಬಿಡುಗಡೆ, ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನ

Date:

Advertisements

ಮಹಾರಾಷ್ಟ್ರದ ಪುಣೆಯ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್ಸಿನೊಳಗೆ ಯುವತಿಯ ಅತ್ಯಾಚಾರ ನಡೆಸಿದ ಆರೋಪಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹಾಗೆಯೇ ಆರೋಪಿಯ ಸುಳಿವು ನೀಡಿದವರಿಗೆ ಪೊಲೀಸರು ಒಂದು ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಅತಿದೊಡ್ಡ ಬಸ್ ಜಂಕ್ಷನ್‌ಗಳಲ್ಲಿ ಸ್ವರ್ಗೇಟ್ ಒಂದಾಗಿದೆ. ಈ ಬಸ್ ನಿಲ್ದಾದಣದಲ್ಲಿ 26 ವರ್ಷದ ಯುವತಿ ಬಸ್‌ಗಾಗಿ ಕಾಯುತ್ತಿದ್ದಾಗ ಆರೋಪಿ ಬಂದು ಯುವತಿ ಕಾಯುವ ಬಸ್‌ ಬೇರೆ ಪ್ಲಾಟ್‌ಫಾರ್ಮ್‌ನಲ್ಲಿದೆ ಎಂದು ಸುಳ್ಳು ಹೇಳಿ ಕರೆದೊಯ್ದು ಬಸ್‌ನಲ್ಲಿ ಅತ್ಯಾಚಾರ ಎಸಗಿದ್ದನು. ಆರೋಪಿಯನ್ನು ದತ್ತಾತ್ರಯ ರಾಮದಾಸ್ ಗಡೆ (36) ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಈಗಾಗಲೇ ಕಳ್ಳತನಕ್ಕೆ ಸಂಬಂಧಿಸಿ ಎರಡು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಪುಣೆ | ಜನನಿಬಿಡ ಪ್ರದೇಶದಲ್ಲಿ ಬಸ್‌ನೊಳಗೆ ಯುವತಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

Advertisements

ಆರೋಪಿಯು ಜನನಿಬಿಡ ಪ್ರದೇಶದಲ್ಲಿಯೇ ಯುವತಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದು, ಯುವತಿ ತನ್ನ ಸ್ನೇಹಿತನ ಸಲಹೆ ಮೇರೆಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಸಿಸಿಟಿವಿಯಲ್ಲಿ ಆರೋಪಿ ಯುವತಿಯನ್ನು ಕರೆದೊಯ್ಯುತ್ತಿರುವುದು ಕಂಡುಬಂದಿದ್ದು, ಸದ್ಯ ಆರೋಪಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಹಾಗೆಯೇ ಆತನ ಬಂಧನಕ್ಕೆ ಸಹಾಯ ಮಾಡಿದವರಿಗೆ ಅಥವಾ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನವನ್ನು ಪೊಲೀಸರು ಘೋಷಿಸಿದ್ದಾರೆ.

ಈಗಾಗಲೇ ಪೊಲೀಸರು ಆರೋಪಿಯ ಪತ್ತೆಗಾಗಿ ಸುಮಾರು 13 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಈ ಪೈಕಿ ಎಂಟು ತಂಡಗಳು ಅಪರಾಧ ವಿಭಾಗದ ಅಧಿಕಾರಿಗಳನ್ನು ಒಳಗೊಂಡಿದೆ. ಆರೋಪಿಯ ಕುಟುಂಬಸ್ಥರು ಮತ್ತು ಸಹೋದರನ ವಿಚಾರಣೆ ನಡೆಸಿದ್ದಾರೆ.

ಜನನಿಬಿಡ ಪ್ರದೇಶದಲ್ಲಿಯೇ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದಾದರೆ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಎಲ್ಲಿದೆ? ಮಹಿಳೆಯರು ತಮ್ಮ ಮನೆಯಲ್ಲಿಯೇ ಸುರಕ್ಷಿತವಾಗಿಲ್ಲ. ಇನ್ನು ಬಸ್, ರೈಲು, ಇತರೆ ಸಾರ್ವಜನಿಕ ಪ್ರದೇಶದಲ್ಲಿ ಹೇಗೆ ಸುರಕ್ಷಿತವಾಗಿರಲು ಸಾಧ್ಯ. ಈ ಕಾಮಾಂಧರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X