ಪಂಜಾಬ್ ಪ್ರವಾಹ: 41 ಸಾವು, 1600 ಕ್ಕೂ ಹೆಚ್ಚು ಮಂದಿ ಪರಿಹಾರ ಶಿಬಿರಗಳಲ್ಲಿ ವಾಸ

Date:

Advertisements

ಇತ್ತೀಚೆಗೆ ಪಂಜಾಬ್‌ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ನಂತರ 41 ಮಂದಿ ಸಾವನ್ನಪ್ಪಿದ್ದು, 1,616 ಜನರು 173 ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಿರೋಜ್‌ಪುರ್, ಫರೀದ್‌ಕೋಟ್, ರೂಪನಗರ, ಪಟಿಯಾಲ, ಜಲಂಧರ್‌ ಸೇರಿದಂತೆ ಹತ್ತೊಂಬತ್ತು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಸರ್ಕಾರ ಮತ್ತು ವಿಪತ್ತು ನಿರ್ವಹಣಾ ಸಂಸ್ಥೆಗಳು 27,286 ಜನರನ್ನು ಜಲಾವೃತ ಪ್ರದೇಶಗಳಿಂದ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಂದಾಯ ಇಲಾಖೆ ವರದಿ ಪ್ರಕಾರ ಪ್ರವಾಹದಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್ ಮತ್ತು ಹರಿಯಾಣದ ಹಲವಾರು ಜಿಲ್ಲೆಗಳು ಇತ್ತೀಚಿಗೆ ಭಾರೀ ಮಳೆಯಿಂದ ಜರ್ಜರಿತವಾಗಿದ್ದು, ಇದು ದೈನಂದಿನ ಜೀವನವನ್ನು ಅಸ್ತವ್ಯಸ್ಥಗೊಳಿಸಿದೆ. ಅಲ್ಲದೆ ಅಪಾರ ಪ್ರಮಾಣದ ವಸತಿ ಮತ್ತು ಕೃಷಿ ಭೂಮಿ ಜಲಾವೃತಗೊಂಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಇಡಿ, ಸಿಬಿಐ, ಐಟಿ ಇಲಾಖೆಗಳೇ ಎನ್‌ಡಿಎ ನಿಜವಾದ ಶಕ್ತಿ: ಉದ್ಧವ್ ಠಾಕ್ರೆ ವಾಗ್ದಾಳಿ

ಪ್ರವಾಹದಿಂದ ಹಾನಿಗೊಳಗಾದ ಎಲ್ಲ 595 ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲಾಗಿದೆ. ಪ್ರವಾಹವು ಪಂಜಾಬ್‌ನ ವಿದ್ಯುತ್‌ ನಿಗಮ ಸಂಸ್ಥೆಯ ಆಸ್ತಿಗಳಿಗೂ ಗಮನಾರ್ಹ ಹಾನಿಯನ್ನುಂಟು ಮಾಡಿದೆ ಎಂದು ಪಂಜಾಬ್ ವಿದ್ಯುತ್ ಸಚಿವ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಪ್ರವಾಹದಿಂದಾಗಿ ಸುಮಾರು 16 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಹಾನಿಯಲ್ಲಿ ವಿದ್ಯುತ್‌ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳ ಉಪಕೇಂದ್ರಗಳು ಸೇರಿವೆ.

“ಮೂಲಸೌಕರ್ಯಗಳ ನಷ್ಟದಿಂದ ಪ್ರವಾಹ ಪೀಡಿತ ಪ್ರದೇಶಗಳ ವಿದ್ಯುತ್ ಸರಬರಾಜಿನ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಜಲಾವೃತ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲು ಪಂಜಾಬ್‌ ವಿದ್ಯುತ್ ನಿಗಮ ಹಗಲಿರುಳು ಕೆಲಸ ಮಾಡುತ್ತಿದೆ” ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X