ಪಂಜಾಬ್‌ | ಪ್ರವಾಹ ಪೀಡಿತ ಪ್ರದೇಶದ ಜನರನ್ನು ಭೇಟಿಯಾದ ರಾಹುಲ್‌ ಗಾಂಧಿ

Date:

Advertisements

ಕೃಷಿ ಪ್ರಧಾನ ರಾಜ್ಯವಾಗಿರುವ ಪಂಜಾಬ್​ ರಾಜ್ಯದಲ್ಲಿ ಈ ಬಾರಿಯ ಭೀಕರ ಮಳೆ ಪ್ರವಾಹಕ್ಕೆ ಅಕ್ಷರಶಃ ನಲುಗಿದೆ. ಈವರೆಗೆ 2300ಕ್ಕೂ ಹೆಚ್ಚು ಗ್ರಾಮಗಳಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದ್ದರೆ, 55ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ ಮತ್ತು ನಾಲ್ವರು ಕಣ್ಮರೆಯಾಗಿದ್ದಾರೆ.

ಅಮೃತಸರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ಅಮೃತಸರದ ಅಜ್ವಾಲಾದ ಫೋನೆವಾಲ ಗ್ರಾಮಕ್ಕೆ ತೆರಳಿದ ಅವರು, ಪ್ರವಾಹ ಪೀಡಿತ ಜನರನ್ನು ಭೇಟಿಯಾಗಿ ಹಾನಿಯ ಬಗ್ಗೆ ವಿಚಾರಿಸಿದರು.

ರಾಹುಲ್‌ ಗಾಂಧಿ ಅವರೊಂದಿಗೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಪಂಜಾಬ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಜ್ಜಾ, ಅಮೃತಸರ ಸಂಸದ ಗುರ್ಜೀತ್ ಸಿಂಗ್ ಔಜ್ಞಾ ಮತ್ತು ಪಕ್ಷದ ಇತರ ನಾಯಕರು ಇದ್ದರು.

ಪಂಜಾಬ್‌ನ 15 ಜಿಲ್ಲೆಗಳಲ್ಲಿ ಇಲ್ಲಿಯವರೆಗೆ ಪ್ರವಾಹದಿಂದಾಗಿ 56 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಜಿಲ್ಲಾವಾರು ಮಾಹಿತಿಯನ್ನು ನೋಡುವುದಾದರೆ: ಅಮೃತಸರ-7, ಬರ್ನಾಲಾ 5, ಬಟಿಂಡಾ-4, ಹೋಶಿಯಾರ್‌ಪುರ್- 7, ಗುರುದಾಸ್ಪುರ್- 2, ಫಜಿಲ್ಕಾ- 3, ಲುಧಿಯಾನ- 5, ಮಾನ್ಸಾ -5, ಪಠಾಣ್‌ಕೋಟ್- 6, ಪಟಿಯಾಲ-2, ರೂಪನಗರ -2, ಮೊಹಾಲಿ -2 ಮತ್ತು ಸಂಗ್ರೂರ್ -1 ಸಾವು ವರದಿಯಾಗಿದೆ. ಇದಲ್ಲದೆ, ಪಠಾಣ್‌ಕೋಟ್‌ನಲ್ಲಿ 3 ಜನರು ಕಾಣೆಯಾಗಿದ್ದಾರೆ ಮತ್ತು ಜಲಂಧರ್‌ನಲ್ಲಿ ಓರ್ವ ವ್ಯಕ್ತಿ ಕಾಣೆಯಾಗಿದ್ದಾರೆ.

ಮಾಧ್ಯಮ ಪ್ರಕಟಣೆ ಮಾಹಿತಿ ಪ್ರಕಾರ, ಪಂಜಾಬ್‌ನ 23 ಜಿಲ್ಲೆಗಳ 2384 ಗ್ರಾಮಗಳು ಪ್ರವಾಹದಿಂದ ಸಂಕಷ್ಟ ಅನುಭವಿಸಿವೆ. ಅಮೃತಸರದಲ್ಲಿ 196 ಗ್ರಾಮಗಳು, ಬರ್ನಾಲಾದಲ್ಲಿ 121 ಗ್ರಾಮಗಳು, ಬಟಿಂಡಾದಲ್ಲಿ 21 ಗ್ರಾಮಗಳು, ಫರೀದ್‌ಕೋಟ್‌ನಲ್ಲಿ 15 ಗ್ರಾಮಗಳು, ಫಜಿಲ್ಕಾದಲ್ಲಿ 111 ಗ್ರಾಮಗಳು, ಫಿರೋಜ್‌ಪುರದಲ್ಲಿ 108, ಗುರುದಾಸ್ಪುರದಲ್ಲಿ 343, ಹೋಶಿಯಾರ್‌ಪುರದಲ್ಲಿ 329, ಜಲಂಧರ್‌ನಲ್ಲಿ 93, ಕಪುರ್ತಲಾದಲ್ಲಿ 149, ಲುಧಿಯಾನದಲ್ಲಿ 114, ಮಲೇರ್ಕೋಟ್ಲಾದಲ್ಲಿ 12, ಮಾನ್ಸಾದಲ್ಲಿ 95, ಮೋಗಾದಲ್ಲಿ 78, ಪಠಾಣ್‌ಕೋಟ್‌ನಲ್ಲಿ 88, ಪಟಿಯಾಲಾದಲ್ಲಿ 140, ರೂಪನಗರದಲ್ಲಿ 93, ಮೊಹಾಲಿಯಲ್ಲಿ 15, ನವನ್‌ಶಹರ್‌ನಲ್ಲಿ 28, ಸಂಗ್ರೂರ್‌ನಲ್ಲಿ 107, ಶ್ರೀ ಮುಕ್ತ್ಸರ್ ಸಾಹಿಬ್‌ನಲ್ಲಿ 58 ಮತ್ತು ತರಣ್ ತರಣ್‌ ಜಿಲ್ಲೆಯಲ್ಲಿ 70 ಗ್ರಾಮಗಳು ಪ್ರವಾಹ ಸಂಕಷ್ಟಕ್ಕೆ ಸಿಲುಕಿವೆ.

ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಸಟ್ಲಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಹ ಉಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X