ಡ್ರಗ್ಸ್ ದಂಧೆಯಲ್ಲಿ ಶಾಮೀಲು, ದಂಧೆಗೆ ಆ್ಯಂಬುಲೆನ್ಸ್ ಬಳಕೆ: ಪಂಜಾಬ್ ಮಹಿಳಾ ಪೊಲೀಸ್ ಬಂಧನ

Date:

Advertisements

ಡ್ರಗ್ಸ್‌ ದಂಯಲ್ಲಿ ಶಾಮೀಲಾಗಿದ್ದಾರೆ. ಮಾತ್ರವಲ್ಲದೆ, ಮಾದಕ ವಸ್ತುಗಳನ್ನು ಸಾಗಿಸಲು ಆ್ಯಂಬುಲೆನ್ಸ್‌ ಬಳಸಿದ್ದಾರೆ ಎಂಬ ಆರೋಪದ ಮೇಲೆ ಪಂಜಾಬ್‌ನ ಹಿರಿಯ ಪೊಲೀಸ್‌ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಪಂಜಾಬ್‌ನ ಹಿರಿಯ ಮಹಿಳಾ ಕಾನ್‌ಸ್ಟೇಬಲ್‌ ಅಮನ್‌ದೀಪ್‌ ಕೌರ್‌ ಅವರನ್ನು ಪಂಜಾಬ್‌ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಬಂಧಿಸಿದೆ. ಕೌರ್‌ ಅವರು 17.71 ಕೆ.ಜಿ ಹೆರಾಯಿನ್ಅನ್ನು ಸಾಗಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಪಂಜಾಬ್‌ ಸರ್ಕಾರವು ಮಾದಕ ದ್ರವ್ಯಗಳ ಮಾರಟ ಮತ್ತು ಬಳಕೆ ವಿರುದ್ಧ ‘ಯುದ್ಧ್ ನಶೇಯನ್ ವಿರುಧ್’ ಅಭಿಯಾನ ನಡೆಸುತ್ತಿದೆ. ಅದಕ್ಕಾಗಿ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆಯನ್ನು ರಚಿಸಿದೆ. ಭಟಿಂಡಾ ಸಮೀಪದ ಬಾದಲ್ ಫ್ಲೈಓವರ್ ಬಳಿ ಕಾರ್ಯಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 17.71 ಕೆ.ಜಿ ಹೆರಾಯಿನ್‌ಅನ್ನು ವಶಕ್ಕೆ ಪಡೆಯಲಾಗಿದೆ. ಹೆರಾಯಿನ್‌ಅನ್ನು ಸಾಗಿಸುತ್ತಿದ್ದ ವಾಹನವು ಕೌರ್‌ ಅವರಿಗೆ ಸಂಬಂಧಿಸಿದ್ದಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

Advertisements

“ವಾಹನದ ಮಾಲೀಕರ ಗುರುತ ಪತ್ತೆ ಮಾಡಿದ ಬಳಿಕ, ಕೌರ್‌ ಅವರನ್ನು ಬಂಧಿಸಲಾಗಿದೆ. ಅವರ ಎಸ್‌ಯುವಿ, ಮಹೀಂದ್ರಾ ಥಾರ್ ಅನ್ನು ಕಾರ್ಯಪಡೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಹರ್ಬನ್ಸ್ ಸಿಂಗ್ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಸುಪ್ರೀಂ ಕೋರ್ಟ್‌ ತೀರ್ಪು ಮತ್ತು ‘ಬುಲ್ಡೋಜರ್ ನ್ಯಾಯ’: ದಂಡನೆಯ ಹೆಸರಿನಲ್ಲಿ ದ್ವೇಷ ಸಾಧನೆ

ಕಾನ್‌ಸ್ಟೆಬಲ್ ಕೌರ್‌ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕೌರ್‌ ವಿರುದ್ಧ ಗುರ್ಮೀತ್ ಕೌರ್ ಎಂಬ ಮಹಿಳೆ ಹಲವು ಆರೋಪಗಳನ್ನು ಮಾಡಿದ್ದಾರೆ. “ಅಮನ್‌ದೀಪ್ ಕೌರ್ ಅವರು ತನ್ನ ಪತಿ ಬಲ್ವಿಂದರ್‌ ಸಿಂಗ್‌ ಅವರೊಂದಿಗೆ ಲಿವ್‌-ಇನ್‌ ಸಂಬಂಧ ಹೊಂದಿದ್ದಾರೆ. ತಮ್ಮ ಪತಿ ಆ್ಯಂಬುಲೆನ್ಸ್‌ ಚಾಲಕನಾಗಿದ್ದು, ಆ ಆ್ಯಂಬುಲೆನ್ಸ್‌ಅನ್ನು ಹೆರಾಯಿನ್ ಸಾಗಾಟಕ್ಕೆ ಬಳುತ್ತಾರೆ. ಕಾನ್ಸ್‌ಟೇಬರ್‌ ಆಗಿರುವ ಅಮನ್‌ದೀಪ್ ಕೌರ್ ಅವರು 2 ಕೋಟಿ ರೂ. ಮೌಲ್ಯದ ಮನೆ, ಕಾರುಗಳು ಮತ್ತು ಒಂದು ಲಕ್ಷ ಮೌಲ್ಯದ ಗಡಿಯಾರವನ್ನು ಹೊಂದಿದ್ದಾರೆ. ಇಷ್ಟು ಆಡಂಬರದ ಜೀವನ ನಡೆಸಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X