ಪುಷ್ಪಾ 2 ಕಾಲ್ತುಳಿತ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಹೈಕೋರ್ಟ್ ಮೊರೆ

Date:

Advertisements

ಪುಷ್ಪಾ 2 ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ.

ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪ್ರೀಮಿಯರ್ ಶೋ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನು ಓದಿದ್ದೀರಾ? ಹೈದರಾಬಾದ್ | ಪುಷ್ಪಾ 2 ಪ್ರೀಮಿಯರ್ ವೇಳೆ ಕಾಲ್ತುಳಿತ; ಮಹಿಳೆ ಸಾವು, ಬಾಲಕ ಗಂಭೀರ

Advertisements

ಮಧ್ಯರಾತ್ರಿ ಪುಷ್ಪಾ 2 ಪ್ರೀಮಿಯರ್ ಪ್ರದರ್ಶನವಿತ್ತು. ಈ ವೇಳೆ ಥಿಯೇಟರ್‌ಗೆ ನಟ ಅಲ್ಲು ಅರ್ಜುನ್ ಆಗಮಿಸಿದ್ದಾರೆ. ನಾಯಕನನ್ನು ನೋಡುವ ತರಾತುರಿಯಲ್ಲಿ ಜನರು ಪ್ರವೇಶ ದ್ವಾರದತ್ತ ನುಗ್ಗಿದ್ದು ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದರು. ಈ ಸಂಬಂಧ ನಟನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಎಫ್‌ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್ ಕದ ತಟ್ಟಿದ್ದಾರೆ. ಇನ್ನು ಬಂಧನ ಸೇರಿದಂತೆ ಎಲ್ಲಾ ಕಾನೂನು ಪ್ರಕ್ರಿಯೆಗಳಿಗೆ ತಡೆ ನೀಡುವಂತೆ ಅಲ್ಲು ಅರ್ಜುನ್ ತನ್ನ ಅರ್ಜಿಯಲ್ಲಿ ವಿನಂತಿಸಿದ್ದಾರೆ.

ಘಟನೆ ವೇಳೆ ನಟ ರಂಗಮಂದಿರ ಒಳಗಿದ್ದ ಕಾರಣ ನಟನಿಗೆ ಹೊರಗೆ ಏನು ನಡೆಯುತ್ತಿದೆ ಎಂದು ತಿಳಿದಿರಲಿಲ್ಲ ಎಂದು ಅಲ್ಲು ಪರ ವಕೀಲರು ವಾದಿಸಿದ್ದಾರೆ. ಹಾಗೆಯೇ ಯಾವುದೇ ಅವಘಡ ತಪ್ಪಿಸಲು ಸಿನಿಮಾ ತಂಡವು ಥಿಯೇಟರ್ ಆಡಳಿತ ಮತ್ತು ಸಹಾಯಕ ಪೊಲೀಸ್ ಆಯುಕ್ತರಿಗೆ ನಟನ ಆಗಮನದ ಬಗ್ಗೆ ಮಾಹಿತಿ ನೀಡಿತ್ತು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ‘ಪುಷ್ಪಾ-2’ ನಟನೆಗಾಗಿ ಅಲ್ಲು ಅರ್ಜುನ್‌ಗೆ 300 ಕೋಟಿ ರೂ. ಸಂಭಾವನೆ; ರಶ್ಮಿಕಾ ಪಡೆದದ್ದೆಷ್ಟು?

ಇನ್ನು ಥಿಯೇಟರ್ ಆಡಳಿತವು ಇದನ್ನು ದೃಢಪಡಿಸಿದೆ. ಹೆಚ್ಚಿನ ಜನರು ಬರುವ ಕಾರಣ ಜನರ ನಿಯಂತ್ರಣಕ್ಕಾಗಿ ಹೆಚ್ಚುವರಿ ಪೊಲೀಸರು ನಿಯೋಜಿಸುವಂತೆ ಮನವಿ ಮಾಡಲಾಗಿದೆ. ಆದರೆ ಸೀಮಿತ ಸಂಖ್ಯೆಯ ಅಧಿಕಾರಿಗಳನ್ನು ಮಾತ್ರ ನಿಯೋಜಿಸಲಾಗಿದೆ ಎಂದು ಅಲ್ಲು ಪರ ವಕೀಲರು ಹೇಳಿದ್ದಾರೆ.

ರೇವತಿ ಪತಿ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್ ಮತ್ತು ಭದ್ರತಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X