ಮೋದಿ ಉಪನಾಮ ಪ್ರಕರಣ; ಗುಜರಾತ್‌ ಹೈಕೋರ್ಟ್‌ಗೆ ರಾಹುಲ್‌ ಗಾಂಧಿ ಮೇಲ್ಮನವಿ

Date:

  • ಮೋದಿ ಉಪನಾಮ ಪ್ರಕರಣ; ಜೈಲು ಶಿಕ್ಷೆ ವಿಧಿಸಿದ್ದ ಗುಜರಾತ್‌ ಸೆಷನ್ಸ್ ನ್ಯಾಯಾಲಯ
  • ಮತ್ತೊಂದು ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ತಡೆಯಾಜ್ಞೆ ನೀಡಿದ್ದ ಪಾಟ್ನಾ ಹೈಕೋರ್ಟ್

ಮೋದಿ ಉಪನಾಮ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಸೂರತ್‌ ಸೆಷನ್ಸ್‌ ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆ ಗುಜರಾತ್‌ ಹೈಕೋರ್ಟ್‌ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ.

- Advertisement -

ರಾಹುಲ್‌ ಗಾಂಧಿ ಸೂರತ್‌ ಸೆಷನ್ಸ್‌ ನ್ಯಾಯಾಲಯ ವಿಧಿಸಿರುವ ಜೈಲು ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದು, ಶಿಕ್ಷೆ ರದ್ದಾದರೆ ಸಂಸದ ಸ್ಥಾನ ಮರಳಿ ಬರಲು ಸಹಾಯವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಿರುವುದರಿಂದ ರಾಹುಲ್‌ ಗಾಂಧಿ ಅವರಿಗೆ ಗರಿಷ್ಠ ಎರಡು ವರ್ಷ ಶಿಕ್ಷೆ ವಿಧಿಸಿರುವುದರಿಂದ ಕಳೆದ ತಿಂಗಳು ಅವರನ್ನು ಸಂಸದನ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ವಿಚಾರಣಾ ನ್ಯಾಯಾಲಯವು ತನ್ನನ್ನು ಕಠೋರವಾಗಿ ನಡೆಸಿಕೊಂಡಿದೆ, ಸಂಸದನ ಸ್ಥಾನಮಾನದಿಂದ ತಾವು ಸಾರ್ವಜನಿಕವಾಗಿ ಹೆಚ್ಚು ಪ್ರಭಾವಿತವಾಗಿರುವುದಾಗಿ ರಾಹುಲ್ ಗಾಂಧಿ ಸೆಷನ್ಸ್‌ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯಲ್ಲಿ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಾಟರ್ ಮೆಟ್ರೋ | ದೇಶದ ಮೊದಲ ಜಲಸಾರಿಗೆಗೆ ಪ್ರಧಾನಿ ಮೋದಿ ಇಂದು ಚಾಲನೆ ; ಏನಿದರ ವಿಶೇಷ?

ಆದಾಗ್ಯೂ, ನ್ಯಾಯಾಧೀಶ ರಾಬಿನ್ ಮೊಂಗೇರಾ ರಾಹುಲ್‌ ಗಾಂಧಿಯವರ ಮೇಲ್ಮನವಿಯನ್ನು ಒಪ್ಪಲಿಲ್ಲ. ನೀವು ಲೋಕಸಭಾ ಸದಸ್ಯರಾಗಿದ್ದವರು ಹಾಗೂ ದೇಶದ ಎರಡನೇ ಅತಿ ದೊಡ್ಡ ರಾಜಕೀಯ ಪಕ್ಷವೊಂದರ ಅಧ್ಯಕ್ಷರೂ ಆಗಿದ್ದವರು. ಹೀಗಾಗಿ, ಪದಗಳನ್ನು ಬಳಸುವಾಗ ನೀವು (ರಾಹುಲ್) ಎಚ್ಚರದಿಂದ ಇರಬೇಕಿತ್ತು. ರಾಹುಲ್ ಅವರಂತಹ ವ್ಯಕ್ತಿಯಿಂದ ಸಭ್ಯ ನಡವಳಿಕೆಗೆ ಸಂಬಂಧಿಸಿ ಅಧಿಕ ನಿರೀಕ್ಷೆ ಇರುತ್ತದೆ. ಈ ಹಿನ್ನೆಲೆ ಕಾನೂನಿನಡಿ ಅವಕಾಶವಿರುವಷ್ಟು ಪ್ರಮಾಣದ ಶಿಕ್ಷೆಯನ್ನು ವಿಚಾರಣಾ ನ್ಯಾಯಾಲಯ ವಿಧಿಸಿದೆ’ ಎಂದು ತಿಳಿಸಿದ್ದರು.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮತ್ತೊಂದು ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಪಾಟ್ನಾ ಹೈಕೋರ್ಟ್​ ಕೆಳ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...