ನಿತೀಶ್ ಬಿಜೆಪಿ ಒಕ್ಕೂಟ ಸೇರಿದ ಪ್ರಮುಖ ಕಾರಣ ತಿಳಿಸಿದ ರಾಹುಲ್ ಗಾಂಧಿ

Date:

Advertisements

ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟ ಬಿಟ್ಟು ಎನ್‌ಡಿಎ ಒಕ್ಕೂಟ ಸೇರ್ಪಡೆಯಾಗಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಬಿಹಾರದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ”ನಿತೀಶ್ ಅವರು ಏಕೆ ಸಿಲುಕಿಕೊಂಡರು ಎಂಬುದು ಅರ್ಥವಾಗುತ್ತದೆ. ನಾನು ಅವರಿಗೆ ನೇರವಾಗಿ ಹೇಳುತ್ತೇನೆ. ನೀವು ಬಿಹಾರದಲ್ಲಿ ಜಾತಿ ಸಮೀಕ್ಷೆ ಕೈಗೊಂಡಿರಿ, ಆರ್‌ಜೆಡಿಯೊಂದಿಗೆ ನಾವು ಕೂಡ ಸಮೀಕ್ಷೆ ಕೈಗೊಳ್ಳುವಂತೆ ಒತ್ತಾಯಿಸಿದ್ದೆವು. ಆದರೆ ಬಿಜೆಪಿ ಭಯಕ್ಕೊಳಗಾಯಿತು. ಈ ಯೋಜನೆಗೆ ಅವರು ವಿರೋಧ ವ್ಯಕ್ತಪಡಿಸಿದರು. ನಿತೀಶ್ ಅವರು ಸಮಸ್ಯೆಗೆ ಸಿಲುಕಿ ಬಿಜೆಪಿ ಒದಗಿಸಿದ ಹಿಂಬಾಗಿಲಿನ ಮೂಲಕ ಓಡಿ ಹೋಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

Advertisements

“ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ಇಂಡಿಯಾ ಒಕ್ಕೂಟದ ಜವಾಬ್ದಾರಿಯಾಗಿದೆ. ಇದಕ್ಕಾಗಿ ನಿತೀಶ್ ಅವರ ಬೆಂಬಲ ಅಗತ್ಯವಿಲ್ಲ. ಜಾತಿ ಸಮೀಕ್ಷೆಯ ಒತ್ತಡ ವಿಪಕ್ಷಗಳಿಗೆ ಇಷ್ಟವಾಗದ ಕಾರಣ ನಿತೀಶ್ ಸ್ವಲ್ಪ ಒತ್ತಡಕ್ಕೊಳಗಾಗಿ ಪಕ್ಷಾಂತರ ಮಾಡಿದ್ದಾರೆ. ಅವರಿಗೆ ಒತ್ತಡ ಮುಖ್ಯವಾಗಿದೆ. ಆದರೆ ನಮ್ಮ ಒಕ್ಕೂಟ ಜನರ ಸಮಸ್ಯೆಗಳ ಬಗ್ಗೆ ದನಿ ಎತ್ತುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಇದೇ ಸಂದರ್ಭದಲ್ಲಿ ನಿತೀಶ್ ಅವರ ಬಗ್ಗೆ ರಾಹುಲ್ ಅವರು ಹಾಸ್ಯ ಚಟಾಕಿ ಹಾರಿಸಿದರು. ”ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಿ ರಾಜಭವನದಿಂದ ತಕ್ಷಣ ತೆರಳಿದರು. ಕಾರಿನಲ್ಲಿ ಅವರು ತಮ್ಮ ಶಾಲು ಮರೆತಿದ್ದರು ತಮ್ಮ ಚಾಲಕನಿಗೆ ಹೇಳಿ ಶಾಲನ್ನು ವಾಪಸ್ ತರಿಸಿಕೊಂಡರು. ಮತ್ತೆ ರಾಜ ಭವನಕ್ಕೆ ತೆರಳಿದಾಗ, ಏಕೆ ಇಷ್ಟು ತರಾತುರಿಯಲ್ಲಿ ವಾಪಸ್ ಬಂದಿರಿ ಎಂದು ರಾಜ್ಯಪಾಲರು ಪ್ರಶ್ನಿಸಿದರು” ಎಂದು ರಾಹುಲ್ ಹೇಳಿದರು.

ನಿತೀಶ್ ಕುಮಾರ್ ಅವರು ಭಾನುವಾರ ದಾಖಲೆಯ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಅವರು  ಡಿಸಿಎಂಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X