ರಾಹುಲ್‌ ಇಂದೋರ್‌ ಸಮಾವೇಶಕ್ಕೆ 29 ಭದ್ರತಾ ಷರತ್ತು: ಕಾಂಗ್ರೆಸ್ ಆಕ್ರೋಶ

Date:

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ‘ಛಾತ್ರೋಂ ಕಿ ಗೂಂಜ್’ ವಿದ್ಯಾರ್ಥಿ ಸಮಾವೇಶಕ್ಕೆ ಇಂದೋರ್ ಪೊಲೀಸರು ಬರೋಬ್ಬರಿ 29 ಕಠಿಣ ಭದ್ರತಾ ಷರತ್ತುಗಳನ್ನು ವಿಧಿಸಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯ ಭದ್ರತಾ ಲೋಪಗಳ ಕುರಿತು ತನಿಖೆ ನಡೆಸಿದ್ದ ನ್ಯಾಯಮೂರ್ತಿ ಜೆ.ಎಸ್. ವರ್ಮಾ ಆಯೋಗದ ಶಿಫಾರಸುಗಳನ್ನು ಉಲ್ಲೇಖಿಸಿ ಪೊಲೀಸರು ಕಾಂಗ್ರೆಸ್ ಪಕ್ಷದಿಂದ ಸಮಗ್ರ ವಿವರಗಳನ್ನು ಕೇಳಿದ್ದಾರೆ.

- Advertisement -

​ಶನಿವಾರ ಸಂಜೆ ನಡೆಯಲಿರುವ ಈ ಬೃಹತ್ ಕಾರ್ಯಕ್ರಮಕ್ಕೆ ಮಧ್ಯಪ್ರದೇಶದಾದ್ಯಂತ ಲಕ್ಷಾಂತರ ಯುವಕರು ನೋಂದಾಯಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ. ಝಡ್-ಪ್ಲಸ್ ಭದ್ರತೆ ಹೊಂದಿರುವ ಗಣ್ಯ ವ್ಯಕ್ತಿಗಳ ರಕ್ಷಣೆಗಾಗಿ ಕೈಗೊಳ್ಳಲಾಗುವ ಸುಧಾರಿತ ಭದ್ರತಾ ಶಿಷ್ಟಾಚಾರದ (ಎಎಸ್‌ಎಲ್) ಮಾನದಂಡಗಳ ಅನ್ವಯ, ಮುನ್ನೆಚ್ಚರಿಕೆ ಕ್ರಮವಾಗಿ ಈ ವಿವರಗಳನ್ನು ಪಡೆಯಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

​ಪೊಲೀಸರ ಈ ಕ್ರಮಕ್ಕೆ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಮೊದಲು ರಾಹುಲ್ ಅವರ ಎಸ್‌ಪಿಜಿ ಭದ್ರತೆ ಹಿಂಪಡೆದಿದ್ದ ಬಿಜೆಪಿ ಸರ್ಕಾರ, ಈಗ ಅವರ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಅವರ ತಂದೆಯ ಹತ್ಯೆಯನ್ನೇ ಉಲ್ಲೇಖಿಸುತ್ತಿದೆ. ವಿದ್ಯಾರ್ಥಿ ಸಮಾವೇಶವನ್ನು ವಿಫಲಗೊಳಿಸಲು ಬಿಜೆಪಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಅವರು ಆಪಾದಿಸಿದ್ದಾರೆ.

​ಕಾಂಗ್ರೆಸ್ ಆರೋಪವನ್ನು ತಿರಸ್ಕರಿಸಿರುವ ರಾಜ್ಯ ಬಿಜೆಪಿ ವಕ್ತಾರ ರಾಕೇಶ್ ಸಿಂಗ್ ಯಾದವ್, ಸಭೆಗೆ ಸೇರುವ ಜನರ ಸಂಖ್ಯೆಯ ಕುರಿತು ಕಾಂಗ್ರೆಸ್ ನಿಖರ ಮಾಹಿತಿ ನೀಡುತ್ತಿಲ್ಲ ಎಂದಿದ್ದಾರೆ. ಈ ಮಧ್ಯೆ, ಸಮಾವೇಶಕ್ಕೆ ಕನಿಷ್ಠ 500 ಮಹಿಳೆಯರು ಸೇರಿದಂತೆ 1,500 ಸ್ವಯಂಸೇವಕರನ್ನು ನಿಯೋಜಿಸಬೇಕು ಹಾಗೂ ಯಾವುದೇ ಪ್ರಚೋದನಕಾರಿ ಪೋಸ್ಟರ್ ಅಥವಾ ಧಾರ್ಮಿಕ ಭಾವನೆ ಕೆರಳಿಸುವ ಹೇಳಿಕೆಗಳಿಗೆ ಅವಕಾಶವಿಲ್ಲ ಎಂದು ಪೊಲೀಸರು ಕಟ್ಟಪ್ಪಣೆ ಮಾಡಿದ್ದಾರೆ.

​ಕಾಂಗ್ರೆಸ್ ನಾಯಕ ಪವನ್ ಖೇರಾ ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, “ಮೊದಲು ರಾಜೀವ್ ಗಾಂಧಿ ಹತ್ಯೆ ಹೆಸರಲ್ಲಿ ರಾಹುಲ್ ಗಾಂಧಿಯನ್ನು ಬೆದರಿಸಲು ನೋಡಿದರು. ಈಗ ಕಾರ್ಯಕ್ರಮಕ್ಕೆ ಬರುವ ವಿದ್ಯಾರ್ಥಿಗಳ ಸುರಕ್ಷತೆಯ ಜವಾಬ್ದಾರಿ ಹೊರಬೇಕೆಂದು ಇಂದೋರ್‌ನ ಕೋಚಿಂಗ್ ಸೆಂಟರ್ ಮತ್ತು ಹಾಸ್ಟೆಲ್ ಮಾಲೀಕರಿಗೆ ಬೆದರಿಸಿ ಮುಚ್ಚಳಿಕೆ ಬರೆಸಿಕೊಳ್ಳಲಾಗುತ್ತಿದೆ. ಇದು ಸುರಕ್ಷತೆಯಲ್ಲ, ಬದಲಿಗೆ ದಬ್ಬಾಳಿಕೆ” ಎಂದು ಕಿಡಿಕಾರಿದ್ದಾರೆ.

​ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗಣ್ಯರಷ್ಟೇ ಅಲ್ಲದೆ ಪ್ರತಿಯೊಬ್ಬ ಪ್ರಜೆಯ ಸುರಕ್ಷತೆಯನ್ನು ಖಚಿತಪಡಿಸುವುದು ಆಡಳಿತದ ಮೂಲಭೂತ ಕರ್ತವ್ಯವಾಗಿದೆ ಎಂದು ಖೇರಾ ಹೇಳಿದ್ದಾರೆ. ಜನರನ್ನು ರಕ್ಷಿಸುವ ಬದಲು ಬೆದರಿಸುವ ಸರ್ಕಾರ ತನ್ನ ಆಡಳಿತ ವೈಫಲ್ಯವನ್ನು ತಾನೇ ಸಾಬೀತುಪಡಿಸುತ್ತಿದೆ ಎಂದು ಅವರು ಟೀಕಿಸಿದ್ದು, ಇಂದೋರ್ ಡಿಸಿಪಿ ಎನ್.ಎಸ್. ರಾವತ್ ಅವರು ಈ 29 ಅಂಶಗಳ ಷರತ್ತಿನ ಪತ್ರವನ್ನು ಕಾಂಗ್ರೆಸ್ ಮುಖಂಡರಿಗೆ ಹಸ್ತಾಂತರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವಾಗ 'ಚಾಟ್ ಜಿಪಿಟಿ' (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ...

ಕಲಬುರಗಿ | ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು...

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ...

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...