ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸಬೇಕು, ವಿಭಜಿಸಬಾರದು: ಸಿಪಿಐಎಂ ನಾಯಕ

Date:

Advertisements

ಆರ್‌ಎಸ್‌ಎಸ್‌ ಮತ್ತು ಸಿಪಿಐಎಂ ಎರಡೂ ಒಂದೇ ಎಂಬ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇಂಡಿಯಾ ಒಕ್ಕೂಟದಲ್ಲಿ ಅಸಮಾಧಾನ ಸೃಷ್ಟಿಯಾಗಿದೆ. ರಾಹುಲ್ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸಬೇಕು, ವಿಭಜನೆಗಳನ್ನು ಸೃಷ್ಟಿಸಬಾರದು ಎಂದು ಭಾನುವಾರ, ಸಿಪಿಐ(ಎಂ) ರಾಜ್ಯಸಭೆಯ ಸದನದ ನಾಯಕ ಜಾನ್ ಬ್ರಿಟ್ಟಾಸ್ ಹೇಳಿದ್ದಾರೆ.

ಇನ್ನು ರಾಹುಲ್ ಹೇಳಿಕೆ ವಿರುದ್ಧ ಸಿಪಿಐ ನಾಯಕ ಪಿ. ಸಂದೋಷ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಹುಲ್ ಅವರ ಹೆಚ್ಚಿನ ತಂಡ ಬಿಜೆಪಿಯನ್ನು ಸೇರಿದೆ. ಹಾಗಾಗಿ ಆರ್‌ಎಸ್‌ಎಸ್ ಮತ್ತು ಬಿಜೆಪಿಗೆ ಅವರು ಕೇಡರ್‌ಗಳ ಪ್ರಮುಖ ಪೂರೈಕೆದಾರರು ಎಂದು ಪರಿಗಣಿಸಬಹುದು. ಆದ್ದರಿಂದ ಎಡ ಮತ್ತು ಆರ್‌ಎಸ್‌ಎಸ್ ಅನ್ನು ಹೋಲಿಸಬೇಡಿ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಸಿಪಿಐ(ಎಂ)ಗೆ ಎಂ ಎ ಬೇಬಿ ಸಾರಥ್ಯ; ಪಕ್ಷವನ್ನು ತಳಮಟ್ಟದಿಂದ ಕಟ್ಟುವರೇ?

Advertisements

ಕಳೆದ ಶುಕ್ರವಾರ ಕೇರಳದಲ್ಲಿ ರಾಹುಲ್ ಗಾಂಧಿ ಅವರು ಆರ್‌ಎಸ್‌ಎಸ್ ಮತ್ತು ಸಿಪಿಐ(ಎಂ) ಎರಡೂ “ಜನರ ಬಗ್ಗೆ ಯಾವುದೇ ಭಾವನೆಗಳನ್ನು ಹೊಂದಿಲ್ಲ” ಎಂದು ಹೇಳಿದ್ದರು. ಈ ಹೇಳಿಕೆಯನ್ನು ಸಿಪಿಐಎಂ ಖಂಡಿಸಿದ್ದು, ಈ ಹೇಳಿಕೆ ಅಸಂಬದ್ಧ ಎಂದಿದೆ. ಕಾಂಗ್ರೆಸ್ ಮತ್ತು ಸಿಪಿಐಎಂ ಇಂಡಿಯಾ ಬಣಕ್ಕೆ ಸೇರಿದ್ದರೂ ಕೇರಳದಲ್ಲಿ ಪರಸ್ಪರ ವಿರುದ್ದವಾಗಿ ಸ್ಪರ್ಧಿಸುತ್ತದೆ.

ರಾಹುಲ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಬ್ರಿಟ್ಟಾಸ್, “ಜಾತ್ಯತೀತ ಶಕ್ತಿಗಳ ನಡುವೆ ಗೊಂದಲ ಮತ್ತು ವಿಭಜನೆಯನ್ನು ಸೃಷ್ಟಿಸುವ ಬದಲು ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸುವುದು ಲೋಕಸಭೆ ವಿಪಕ್ಷ ನಾಯಕರ ಮುಖ್ಯ ಕೆಲಸವಾಗರಬೇಕು. ಗೋಡೆಯ ಮೇಲಿನ ಬರವಣಿಯನ್ನು ಅರ್ಥಮಾಡಿಕೊಳ್ಳುವಷ್ಟು ಅವರು ಪ್ರಬುದ್ಧರಾಗಿದ್ದಾರೆ ಎಂದು ನಾವು ಭಾವಿಸುತ್ತೇವೆ. ಕಾಂಗ್ರೆಸ್‌ನ ರಾಜ್ಯ ಘಟಕವು ವಾಸ್ತವವಾಗಿ ರಾಷ್ಟ್ರೀಯ ಕಾಂಗ್ರೆಸ್‌ನ ಭಾಗವಲ್ಲ. ಅವರು ಕೇರಳದಲ್ಲಿ ಬಿಜೆಪಿ ಮೈತ್ರಿಕೂಟದ ಭಾಗವಾಗಿದ್ದಾರೆ” ಎಂದು ದೂರಿದರು.

ಇನ್ನು ಸಿಪಿಐ ನಾಯಕ ಸಂದೋಷ್ ಕುಮಾರ್, “ರಾಹುಲ್ ಇಂಡಿಯಾ ಒಕ್ಕೂಟದ ನಾಯಕರಾಗಿರುವ ಕಾರಣ ಸ್ವಲ್ಪ ಮಟ್ಟಿಗೆ ಪ್ರಬುದ್ಧತೆಯನ್ನು ತೋರಿಸಬೇಕು. ಯಾವುದೇ ಸಂವೇದನಾಶೀಲ ವ್ಯಕ್ತಿ ಆರ್‌ಎಸ್‌ಎಸ್ ಅನ್ನು ಎಡ ಪಕ್ಷಗಳೊಂದಿಗೆ ಹೋಲಿಸಲು ಸಾಧ್ಯವಿಲ್ಲ. ರಾಹುಲ್ ಅವರು ಮಾತನಾಡುವಾಗಲೆಲ್ಲಾ ಅವರು ಯಾವಾಗಲೂ ಸ್ವಲ್ಪ ಮಟ್ಟಿಗೆ ಅಪ್ರಬುದ್ಧರು ಎಂಬುದನ್ನು ತೋರಿಸುತ್ತದೆ. ರಾಹುಲ್ ಅವರಿಗೆ ಕಾಂಗ್ರೆಸ್ ಸಲಹೆ ನೀಡಬೇಕು” ಎಂದು ಹೇಳಿದ್ದಾರೆ.

ಇನ್ನು ಎಡಪಕ್ಷ ನಾಯಕರು ಮತ್ತು ರಾಹುಲ್ ಇಂಡಿಯಾ ನಾಯಕರ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿದ್ದರೂ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ.ಬೇಬಿ ಈ ವಿಷಯವನ್ನು ಪ್ರಸ್ತಾಪಿಸಿಲ್ಲ. ಆದರೆ ಸಿಪಿಐ ನಾಯಕ ಡಿ.ರಾಜಾ ಅವರು ರಾಹುಲ್ ಹೆಸರು ಉಲ್ಲೇಖಿಸದೆಯೇ “ಯಾರೂ ಎಡ ಮತ್ತು ಆರ್‌ಎಸ್‌ಎಸ್ ಅನ್ನು ಹೋಲಿಸಬಾರದು” ಎಂದು ಹೇಳಿದ್ದಾರೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X