ಎಸ್‌ಸಿ ಎಸ್‌ಟಿ ಕಾಯ್ದೆ ಎಂದರೆ ʼಗೂಂಡಾಗಿರಿʼ ಎಂದ ಬಿಜೆಪಿ ಶಾಸಕ: ಐಪಿಎಸ್ ಅಧಿಕಾರಿ ಸಮ್ಮುಖದಲ್ಲೇ ವಿವಾದಾತ್ಮಕ ಹೇಳಿಕೆ

Date:

Advertisements

ಎಸ್‌ಸಿ ಎಸ್‌ಟಿ ಕಾಯ್ದೆ ಎಂದರೆ ʼಗೂಂಡಾಗಿರಿʼ ಎಂದು ಹೇಳುವ ಮೂಲಕ ರಾಜಸ್ಥಾನದ ಭರತ್‌ಪುರ ಜಿಲ್ಲೆಯ ವೀರ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಹದ್ದೂರ್‌ ಸಿಂಗ್‌ ಕೋಲಿ ವಿವಾದವನ್ನು ಸೃಷ್ಟಿಸಿದ್ದಾರೆ.

ಖೇಡ್ಲಿ ಮಾಡ್ ಪೊಲೀಸ್ ಠಾಣೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ಬಹದ್ದೂರ್‌ ಸಿಂಗ್‌ ಕೋಲಿ ಭರತ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಮೃದುಲ್ ಕಚವಾ ಅವರ ಸಮ್ಮುಖದಲ್ಲೇ ಈ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ.

ಹೆಚ್ಚಿನ ಸುಳ್ಳು ಪ್ರಕರಣಗಳು ಎಸ್‌ಸಿ ಎಸ್‌ಟಿ ಕಾಯ್ದೆಯಡಿ ದಾಖಲಿಸಲಾಗಿದೆ. ಅಂತಹ ಪ್ರಕರಣಗಳನ್ನು ಎಚ್ಚರಿಕೆಯಿಂದ ಪರಿಶೀಲಿಸುವ ಅಗತ್ಯವಿದೆ. ಜನರು ಸಾಮಾನ್ಯವಾಗಿ ಮದುವೆ ಅಥವಾ ಇತರ ಕಾರ್ಯಕ್ರಮಗಳಿಗೆ ಸಾಲ ಪಡೆಯುತ್ತಾರೆ. ಸಾಲ ಕೊಟ್ಟವರು ವಾಪಾಸ್ಸು ಕೇಳಿದಾಗ ಈ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತದೆ. ಸಾಲ ಕೊಟ್ಟವನಿಗೆ ಕೊಟ್ಟ ಹಣ ಬಿಟ್ಟು ಬಿಡುವುದು ಮಾತ್ರವಲ್ಲ, ಪ್ರಕರಣದ ಇತ್ಯರ್ಥಕ್ಕೆ 5 ಲಕ್ಷದವರೆಗೆ ಕೊಡುವಂತೆ ಆಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

ಗೂಂಡಾಗಿರಿ ಏನಾದರು ಇದ್ದರೆ ಅದು ಎಸ್‌ಸಿ ಎಸ್‌ಟಿ ಕಾಯ್ದೆಯಡಿಯಾಗಿದೆ. ಈ ಕಾಯ್ದೆಯ ದುರುಪಯೋಗ ಕೊನೆಗೊಳ್ಳಬೇಕು ಎಂದು ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಾಸಕ ಬಹದ್ದೂರ್ ಸಿಂಗ್ ಕೋಲಿ ವಿವಾದಾತ್ಮಕ ಹೇಳಿಕೆ ನೀಡುವುದು ಇದು ಮೊದಲಲ್ಲ. ಈ ಹಿಂದೆ ಪಕ್ಷದ ಸಭೆಯೊಂದರಲ್ಲಿ ಬಿಜೆಪಿ ಮಹಿಳಾ ನಾಯಕಿಯೊಬ್ಬರನ್ನು ‘ಕಳ್ಳಿ’ ಎಂದು ಕರೆದು ತಮ್ಮದೇ ಪಕ್ಷದೊಳಗೆ ಸಂಚಲನ ಮೂಡಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X