ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆಯುತ್ತಿದ್ದ ಶಿವರಾತ್ರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಷ ಉಂಟಾಗಿ 14 ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಸಚಿವ ಹೀರಾಲಾಲ್ ನಗರ್ ತಿಳಿಸಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸುದ್ದಿಸಂಸ್ಥೆಗಳ ವಿಡಿಯೋದಲ್ಲಿರುವಂತೆ ಪೋಷಕರು ತಮ್ಮ ಮಕ್ಕಳನ್ನು ಚಿಕಿತ್ಸೆಗಾಗಿ ತುರ್ತು ನಿಗಾ ಘಟಕಕ್ಕೆ ಕರೆದೊಯ್ಯುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ
“ಇದು ದುಃಖದ ಘಟನೆಯಾಗಿದೆ.ಇಬ್ಬರು ಮಕ್ಕಳಿಗೆ ಗಂಭಿರ ಗಾಯಗಳಾಗಿವೆ ಒಂದು ಮಗುವಿಗೆ ಶೇ.100 ರಷ್ಟು ಗಾಯವಾಗಿದೆ. ಎಲ್ಲ ಸಾಧ್ಯತೆಯ ಚಿಕಿತ್ಸೆ ನೀಡಲು ಒಂದು ವಿಶೇಷ ತಂಡವನ್ನು ನಿಯೋಜಿಸಲಾಗಿದೆ. ಯಾವ ರೀತಿಯ ನಿರ್ಲಕ್ಷ್ಯ ಸಂಭವಿಸಿದೆ ಎಂಬುದನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ಸಚಿವರು ತಿಳಿಸಿದರು.
ಸುದ್ದಿಸಂಸ್ಥೆಗಳ ಪ್ರಕಾರ ಹೈಟೆನ್ಷನ್ ತಂತಿಯಿಂದ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇಬ್ಬರು ಮಕ್ಕಳಿಗೆ ಶೇ.50 ರಿಂದ ಶೇ.100ರವರೆಗೆ ಸುಟ್ಟ ಗಾಯಗಳಾಗಿವೆ. ಉಳಿದ ಮಕ್ಕಳಿಗೆ ಶೇ.50ಕ್ಕಿಂತ ಒಳಗೆ ಗಾಯವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.