ಮುಂಬಡ್ತಿ ಸೇರಿ ಇತರೆ ಬೇಡಿಕೆ ಈಡೇರಿಸಲು ಆಗ್ರಹ; ಹೋಳಿ ಆಚರಣೆ ಬಹಿಷ್ಕರಿಸಿದ ರಾಜಸ್ಥಾನ ಪೊಲೀಸರು

Date:

Advertisements

ರಾಜಸ್ಥಾನದ ಹಲವು ಪೊಲೀಸರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ, ಶನಿವಾರ ಹೋಳಿ ಆಚರಣೆಯನ್ನು ಬಹಿಷ್ಕರಿಸಿದ್ದಾರೆ. ಮುಂಬಡ್ತಿ ನೀಡಬೇಕು, ವೇತನ ವ್ಯತ್ಯಾಸ ಇರಬಾರದು, ಸರಿಯಾದ ಸಮಯಕ್ಕೆ ವೇತನ ನೀಡಬೇಕು ಎಂಬುದು ರಾಜಸ್ಥಾನ ಪೊಲೀಸರ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ಪೊಲೀಸರ ಬೇಡಿಕೆಯ ಬಗ್ಗೆ ಗಮನ ಹರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ. ಇನ್ನು ಸಚಿವ ಕಿರೋಡಿ ಲಾಲ್ ಮೀನಾ ಕೂಡಾ ಪೊಲೀಸರ ಬೇಡಿಕೆಯನ್ನು ಬೆಂಬಲಿಸುವುದಾಗಿ, ಈ ವಿಚಾರವನ್ನು ಸರ್ಕಾರದ ಮುಂದೆ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಹೋಳಿ ಆಚರಿಸಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ನೀರುಪಾಲು

Advertisements

ಸಾಂಪ್ರಾದಾಯಿಕವಾಗಿ ರಾಜಸ್ಥಾನದಲ್ಲಿ ಪೊಲೀಸರು ಹೋಳಿ ಹಬ್ಬದ ದಿನ ಕರ್ತವ್ಯದಲ್ಲಿರುವ ಕಾರಣ ಮರುದಿನ ಹಬ್ಬವನ್ನು ಆಚರಿಸುತ್ತಾರೆ. ಅದಾದ ಬಳಿಕ ಪೊಲೀಸ್ ಲೇನ್‌ಗಳಲ್ಲಿ ಹೋಳಿ ಆಚರಿಸುತ್ತಾರೆ. ಈ ಸಂಪ್ರದಾಯದಂತೆ ರಾಜ್ಯಾದ್ಯಂತ ಪೊಲೀಸ್ ಲೇನ್‌ಗಳಲ್ಲಿ ಹಿರಿಯ ಅಧಿಕಾರಿಗಳು ಹೋಳಿ ಆಚರಣೆಯ ವ್ಯವಸ್ಥೆಯನ್ನು ಮಾಡಿದ್ದರು. ಆದರೆ ಜೈಪುರ, ಜೋಧಪುರ, ಉದಯಪುರ ಮತ್ತು ಇನ್ನೂ ಹಲವು ಜಿಲ್ಲೆಗಳಲ್ಲಿ ಪೊಲೀಸರು ಈ ಆಚರಣೆಯಲ್ಲಿ ಭಾಗಿಯಾಗಿಲ್ಲ. ಬಹುತೇಕ ಪೊಲೀಸ್ ಲೇನ್ ಬಿಕೋ ಎನ್ನುತ್ತಿತ್ತು ಎಂದು ವರದಿಯಾಗಿದೆ.

ಕೋಟಾ, ಭರತ್‌ಪುರ, ಪಾಳಿ ಮೊದಲಾದೆಡೆ ಪೊಲೀಸರು ಹೋಳಿ ಆಚರಿಸಿದ್ದಾರೆ. ಆದರೆ ಪೊಲೀಸರ ಸಂಖ್ಯೆ ಕಡಿಮೆಯಾಗಿತ್ತು. “ನಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ನಾವು ಹೋಳಿ ಆಚರಣೆಯನ್ನು ಬಹಿಷ್ಕರಿಸುತ್ತಿದ್ದೇವೆ” ಎಂದು ಜೈಪುರದ ಪೊಲೀಸರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X