ರಾಜಸ್ಥಾನ | ದೇವರ ನಿಂದನೆ ಆರೋಪ: ದಲಿತ ವೃದ್ಧರ ತಲೆ ಮೇಲೆ ಚಪ್ಪಲಿ ಇಟ್ಟು ಕ್ಷಮೆ ಕೇಳುವಂತೆ ಅವಮಾನಿಸಿದ ಗ್ರಾಮಸ್ಥರು

Date:

Advertisements

ಭಜನೆಯಲ್ಲಿ ಸ್ಥಳೀಯ ದೇವರನ್ನು ಅವಮಾನಿಸಿದ ಆರೋಪದ ಮೇಲೆ ಶಿಕ್ಷೆಯ ರೂಪವಾಗಿ ದಲಿತ ಸಮುದಾಯದ ವೃದ್ಧರೊಬ್ಬರಿಗೆ ಗ್ರಾಮಸ್ಥರು ತಲೆಯ ಮೇಲೆ ಪಾದರಕ್ಷೆಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಕ್ಷಮೆ ಕೇಳಿಸಿ ಅವಮಾನಿಸಿದ ಘಟನೆ ರಾಜಸ್ಥಾನದ ಚಿತ್ತೋರ್‌ಗಢ್‌ನ ದುಗರ್ ಗ್ರಾಮದಲ್ಲಿ ನಡೆದಿದೆ.

70 ವರ್ಷದ ವೃದ್ಧರಾದ ಬಗ್ದಾವತ್ ಅವರು ಭಕ್ತಿ ಗೀತೆಗಳ ಗಾಯಕರಾಗಿದ್ದು, ತಾವು ಹಾಡಿದ ಭಜನೆಯಲ್ಲಿ ಸ್ಥಳೀಯ ದೇವರನ್ನು ಅವಮಾನಿಸಿದ ಆರೋಪಕ್ಕಾಗಿ ಶಿಕ್ಷೆಯ ರೂಪವಾಗಿ ತಲೆಯ ಮೇಲೆ ಚಪ್ಪಲಿಯನ್ನು ಹೊತ್ತುಕೊಂಡು ಸುಮಾರು 60 ರಿಂದ 70 ಜನರ ಮುಂದೆ ‘ಕ್ಷಮೆ’ ಕೇಳುವಂತೆ ಸ್ಥಳೀಯ ಗ್ರಾಮಸ್ಥರು ಅವಮಾನಿಸಿದ್ದಾರೆ.

ಅಲ್ಲದೆ ಅದೇ ದಿನ ಗ್ರಾಮಸ್ಥರು ಗುರ್ಜರ್‌ಗಳ ಸಭೆಯಲ್ಲಿ ವೃದ್ಧರ ಸಹಾಯಕನಿಗೆ 1,100 ರೂ. ದಂಡವನ್ನು ವಿಧಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಕಣ್ಮರೆ: ಅಧೀರ್

ಬಗ್ದಾವತ್ ಅವರು ಹಾಡಿನ ನಿರೂಪಣೆಯ ಸಮಯದಲ್ಲಿ ಗುರ್ಜರ್ ಸಮುದಾಯದಿಂದ ಪೂಜಿಸಲ್ಪಟ್ಟ ದೇವತೆಯಾದ ಸಾದು ಮಾತೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಈ ಘಟನೆಯು ಸೆಪ್ಟೆಂಬರ್‌ 16 ರಂದು ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

“ತಾವು ಬಾಯಿ ತಪ್ಪಿ ಆಡಿದ ಮಾತಿಗೆ ಕ್ಷಮೆಯಾಚಿಸಿದ್ದೇನೆ ಆದರೂ ನನಗೆ ಇನ್ನೂ ಬೆದರಿಕೆ ಕರೆಗಳು ಬರುತ್ತಿವೆ ಎಂದು ಬಗ್ದಾವತ್ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ” ಎಂದು ಸ್ಥಳೀಯ ಡಿಎಸ್ಪಿ ಬದ್ರಿಲಾಲ್ ರಾವ್ ತಿಳಿಸಿದ್ದಾರೆ.  

ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಲ್ಲಿರುವ ವಿವಿಧ ದಲಿತ ಸಂಘಟನೆಗಳು ಅಪರಾಧಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X