ರಿಯಾಸಿ ಉಗ್ರ ದಾಳಿ | ಸಂತ್ರಸ್ತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಉದ್ಯೋಗ ಘೋಷಿಸಿದ ರಾಜಸ್ಥಾನ ಸರ್ಕಾರ

Date:

Advertisements

ಜಮ್ಮು ಮತ್ತು ಕಾಶ್ಮೀರದಲ್ಲಿ ರಿಯಾಸಿಯಲ್ಲಿ ಭಾನುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡ ರಾಜಸ್ಥಾನದ ಎರಡು ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರವನ್ನು ರಾಜಸ್ಥಾನ ಸರ್ಕಾರ ಘೋಷಿಸಿದೆ. ಹಾಗೆಯೇ ಈ ಸಂತ್ರಸ್ತರ ಅವಲಂಬಿತರಿಗೆ ಎರಡು ಗುತ್ತಿಗೆ ಉದ್ಯೋಗಗಳು ಮತ್ತು ಡೈರಿ ಬೂತ್‌ಗಳ ಹಂಚಿಕೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ನೌಕರಿ ಹಾಗೂ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಿ ಮಂಗಳವಾರ ಚೋಮು ಪೊಲೀಸ್ ಠಾಣೆಯ ಹೊರಗೆ ಧರಣಿ ನಡೆಸಿದ ಪ್ರತಿಭಟನಾನಿರತ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಎರಡು ವರ್ಷದ ಬಾಲಕ ಸೇರಿದಂತೆ ನಾಲ್ವರ ಮೃತದೇಹಗಳನ್ನು ಮಂಗಳವಾರ ರೈಲಿನಲ್ಲಿ ರಾಜಸ್ಥಾನಕ್ಕೆ ತರಲಾಗಿದೆ. ಅದಾದ ಬಳಿಕ ಮೃತರ ಸಂಬಂಧಿಕರು ಹರ್ಮಾಡಾ ಮತ್ತು ಚೋಮುಗೆ ಕೊಂಡೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ರಿಯಾಸಿ ದಾಳಿ| ಉಗ್ರರು 20 ನಿಮಿಷಗಳ ಕಾಲ ಗುಂಡು ಹಾರಿಸಿದ್ದರು: ಮಾಜಿ ಸರಪಂಚ್

ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಉಗ್ರರ ಗುಂಡಿನ ದಾಳಿ ವೇಳೆ ಬಸ್‌ ಕಮರಿಗೆ ಉರುಳಿದ್ದು ಬಟ್ಟೆ ವ್ಯಾಪಾರಿ ರಾಜೇಂದ್ರ ಸೈನಿ (42), ಅವರ ಪತ್ನಿ ಮಮತಾ (40), ಅವರ ಸಂಬಂಧಿ ಪೂಜಾ ಸೈನಿ (30) ಮತ್ತು ಅವರ ಎರಡು ವರ್ಷದ ಮಗ ಟಿಟು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.

ರಾಜೇಂದ್ರ ಮತ್ತು ಮಮತಾ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ರಾಜೇಂದ್ರ ಕುಟುಂಬದ ಏಕೈಕ ಸಂಪಾದಿಸುವ ವ್ಯಕ್ತಿಯಾಗಿದ್ದ.

ಇನ್ನು “ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡಲು ತಮ್ಮ ಸರ್ಕಾರ ಬದ್ಧವಾಗಿದೆ” ಎಂದು ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರಾರ್ಥಿ ಬಸ್ ಮೇಲೆ ನಡೆದ ಹೇಡಿತನದ ದಾಳಿಯಲ್ಲಿ ಜೈಪುರದ ಚೌಮುನ್‌ನ ನಾಲ್ವರು ನಾಗರಿಕರ ಸಾವು ಅತ್ಯಂತ ದುಃಖಕರವಾಗಿದೆ. ಅಪಾರ ದುಃಖದ ಈ ಸಮಯದಲ್ಲಿ, ನಮ್ಮ ಸರ್ಕಾರವು ಪ್ರತಿ ಸಂತ್ರಸ್ತ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುತ್ತದೆ. ಈ ದುಃಖದ ಸಮಯದಲ್ಲಿ, ರಾಜ್ಯ ಸರ್ಕಾರವು ಮೃತರ ಕುಟುಂಬಗಳೊಂದಿಗೆ ಇದೆ ಮತ್ತು ಅವರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಬದ್ಧವಾಗಿದೆ” ಎಂದು ಭಜನಲಾಲ್ ಶರ್ಮಾ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಮಂಗಳವಾರ ಮೃತದೇಹಗಳು ಆಗಮಿಸಿದ ಚೋಮುವಿನಲ್ಲಿ ಸಂತ್ರಸ್ತ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.

ಇದನ್ನು ಓದಿದ್ದೀರಾ?  ಜಮ್ಮು-ಕಾಶ್ಮೀರ | ಉಗ್ರರ ದಾಳಿಯ ಬಳಿಕ ಕಮರಿಗೆ ಉರುಳಿದ ಬಸ್; 10 ಮಂದಿ ಮೃತ್ಯು; ಹಲವರಿಗೆ ಗಾಯ

ಬಳಿಕ “ಪ್ರತಿ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ, ಎರಡು ಗುತ್ತಿಗೆ ಉದ್ಯೋಗ ಮತ್ತು ಡೈರಿ ಬೂತ್ ಹಂಚಿಕೆಯನ್ನು ನೀಡಲು (ಮಾತುಕತೆ ನಂತರ) ಒಪ್ಪಂದಕ್ಕೆ ಬರಲಾಯಿತು. ಪ್ರತಿಭಟನೆಯನ್ನು ಕೊನೆಗೊಳಿಸಲಾಗಿದೆ ಮತ್ತು ಮೃತ ದೇಹಗಳನ್ನು ಅಂತಿಮ ವಿಧಿಗಳಿಗೆ ಹಸ್ತಾಂತರಿಸಲಾಗಿದೆ” ಎಂದು ಚೋಮು ಎಸ್‌ಡಿಎಂ ದಿಲೀಪ್ ಸಿಂಗ್ ಹೇಳಿದರು.

ಘಟನೆಯಲ್ಲಿ ಪೂಜಾ ಸೈನಿ ಅವರ ಪತಿ ಪವನ್ (32) ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜೇಂದ್ರ ಮತ್ತು ಮಮತಾ ಜೈಪುರ ಜಿಲ್ಲೆಯ ಚೋಮು ಪಟ್ಟಣದ ನಿವಾಸಿಗಳಾಗಿದ್ದರೆ, ಪೂಜಾ ಚೋಮು ರಸ್ತೆಯಲ್ಲಿರುವ ಹರ್ಮಾಡಾ ಪ್ರದೇಶದ ಅಜ್ಮೇರಾ ಕಿ ಧನಿ ನಿವಾಸಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ...

Download Eedina App Android / iOS

X