ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಕಾರ್ಮಿಕನನ್ನು ಶಂಶೇರ್ ಸಿಂಗ್ (33) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೋಟಾ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸುಜಿತ್ ಶಂಕರ್, “ಕುಸಿದ ಸುರಂಗ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇ ಭಾಗವಾಗಿದೆ. ರಾಮಗಂಜ್ ಮಂಡಿಯ ಮೋದಕ್ ಪ್ರದೇಶದಲ್ಲಿ ಶನಿವಾರ ರಾತ್ರಿ ಸುರಂಗದ ಒಂದು ಭಾಗ ಕುಸಿದಿದೆ” ಎಂದು ಭಾನುವಾರ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ರಾಯಚೂರು | ಸರ್ಕಾರಗಳ ಗುತ್ತಿಗೆ ಪದ್ಧತಿಯಿಂದ ಕಾರ್ಮಿಕರನ್ನು ಒಕ್ಕಲೆಬ್ಬಿಸುತ್ತಿದ್ದಾರೆ: ಸೈಯದ್ ಮುಜೀಬ್
ಇನ್ನು ಸುರಂಗದಡಿ ಸಿಲುಕಿದ ಕಾರ್ಮಿಕರ ಪೈಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು ಉಳಿದ ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸುಜಿತ್ ಶಂಕರ್ ತಿಳಿಸಿದ್ದಾರೆ.
ಇನ್ನು ಈ ದುರ್ಘಟನೆ ನಡೆದ ಬಳಿಕ ಪೊಲೀಸರು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
