ರಾಜಸ್ಥಾನ | ತೆರವು ಕಾರ್ಯಾಚರಣೆಗೆ ಬಂದ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಮಹಿಳೆ

Date:

Advertisements

ತಮ್ಮ ಆಸ್ತಿಯೆಂದು ರೈತ ಕುಟುಂಬವೊಂದು ಕೃಷಿ ಮಾಡುತ್ತಿದ್ದ ಭೂಮಿಯನ್ನು ತೆರವುಗೊಳಿಸಲು ಬಂದಿದ್ದ ಮಹಿಳಾ ಅಧಿಕಾರಿಯೊಬ್ಬರ ಕೂದಲನ್ನು ಹಿಡಿದು ಗ್ರಾಮದ ಮಹಿಳೆಯೊಬ್ಬರು ಎಳೆದಾಡಿರುವ ಘಟನೆ ರಾಜಸ್ಥಾನದ ತೋಡಭೀಮ್‌ ಜಿಲ್ಲೆಯ ಗಂಗಾಪುರ ನಗರದಲ್ಲಿ ನಡೆದಿದೆ.

ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ತೋಡಭೀಮ್‌ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸುನೀತಾ ಮೀನಾ ಮತ್ತು ಗಂಗಾಪುರ ನಗರದ ಸ್ಥಳೀಯರ ನಡುವೆ ತೀವ್ರ ಸಂಘರ್ಷ ನಡೆದಿದೆ. ಘಟನೆಯು ಗುರುವಾರ ಸಂಜೆ ನಡೆಸಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರೈತರೊಬ್ಬರು ಕೃಷಿ ಮಾಡುತ್ತಿರುವ ತಮ್ಮ ಜಮೀನಿಗೆ ಸಂಬಂಧಿಸಿದಂತೆ ಹಕ್ಕು ಹೊಂದಿದ್ದೇವೆಂದು ವಾದಿಸಿದ್ದಾರೆ. ಆದರೂ, ಆ ಭೂಮಿಯನ್ನು ತೆರವುಗೊಳಿಸಲು ಎಸ್‌ಡಿಎಂ ಸುನೀತಾ ಮೀನಾ ಬುಲ್ಡೋಜರ್‌ಗಳ ಮೂಲಕ ಸ್ಥಳಕ್ಕೆ ಬಂದಿದ್ದರು. ಈ ವೇಳೆ, ಮಹಿಳೆಯೊಬ್ಬರು ಸುನೀತಾ ಮೀನಾ ಅವರ ಕೂದಲು ಹಿಡಿದು ಎಳೆದಾಡಿ, ಹಲ್ಲೆ ನಡೆಸಿದ್ದಾರೆ.

Advertisements

ಘಟನೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷ್ಯವೂ ಕಾರಣವೆಂದು ಆರೋಪಿಸಲಾಗಿದೆ. ಹೀಗಾಗಿ, ತೋಡಭೀಮ್‌ ಪೊಲೀಸ್‌ ಠಾಣೆಯ ಪ್ರಭಾರಿ ಅಧಿಕಾರಿ ದಿಲೀಪ್ ವರ್ಮಾ ಹಾಗೂ 17 ಸಿಬ್ಬಂದಿಗಳಿಗೆ ಗಂಗಾಪುರ ನಗರ ಎಸ್‌ಪಿ ಸುಜೀತ್ ಶಂಕರ್ ನೋಟಿಸ್‌ ಜಾರಿ ಮಾಡಿದ್ದಾರೆ. ಅಲ್ಲದೆ, ಘಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದ್ದಾರೆ.

ವರದಿಗಳ ಪ್ರಕಾರ, ಸುನೀತಾ ಮೀನಾ ಅವರನ್ನು ತೋಡಭೀಮ್‌ನಿಂದ ಬೇರೆ ಸ್ಥಳಕ್ಕೆ ಕೆಲ ದಿನಗಳ ಹಿಂದೆಯೇ ವರ್ಗಾವಣೆ ಮಾಡಲಾಗಿದೆ. ತೋಡಭೀಮ್‌ಗೆ ಪೂಜಾ ಮೀನಾ ಎಂಬವರನ್ನು ನಿಯೋಜಿಸಲಾಗಿದೆ. ಆದರೂ, ಪೂಜಾ ಅವರಿಗೆ ಅಧಿಕಾರ ಹಸ್ತಾಂತರಿಸದ ಸುನೀತಾ ಅವರು ಇನ್ನೂ ತೋಡಭೀಮ್‌ನಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X