ಪಿಎಸ್‌ಐ ಪರೀಕ್ಷೆಯಲ್ಲಿ ಫೇಲ್; ಎರಡು ವರ್ಷ ಸಬ್‌ ಇನ್‌​ಸ್ಪೆಕ್ಟರ್ ಆಗಿ ನಟಿಸಿದ್ದ ರಾಜಸ್ಥಾನದ ಮೂಲಿ ದೇವಿ ಬಂಧನ

Date:

Advertisements

ರಾಜಸ್ಥಾನ ಪೊಲೀಸ್ ಅಕಾಡೆಮಿಯಲ್ಲಿ(ಆರ್‌ಪಿಎ) ಸುಮಾರು ಎರಡು ವರ್ಷಗಳ ಕಾಲ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಆಗಿ ನಟಿಸಿದ ರಾಜಸ್ಥಾನದ ‘ಮೂಲಿ ದೇವಿ’ ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ಮೋನಾ ಬುಗಾಲಿಯಾ ಅಲಿಯಾಸ್ ಮೂಲಿ ದೇವಿ ವಿರುದ್ಧ ಜೈಪುರದಲ್ಲಿ ದೂರು ದಾಖಲಾಗಿದ್ದು, 2003ರಿಂದ ಆಕೆ ತಲೆಮರೆಸಿಕೊಂಡಿದ್ದಳು.

ನಕಲಿ ದಾಖಲೆಗಳ ಮೂಲಕ ‘ಮೂಲಿ ದೇವಿ’ ಎಂದು ಹೇಳಿಕೊಂಡು ಪೊಲೀಸ್ ಅಕಾಡೆಮಿಗೆ ಪ್ರವೇಶಿಸಿದ ಈ ಮಹಿಳೆ ತರಬೇತಿಗಳಿಗೆ ಹಾಜರಾಗಿದ್ದಾಳೆ. ಅಲ್ಲದೆ ಸುಮಾರು ಎರಡು ವರ್ಷಗಳ ಕಾಲ ನಿಜವಾದ ಅಧಿಕಾರಿಗಳೊಂದಿಗೆ ಫೋಟೋಗಳನ್ನು ತೆಗೆದುಕೊಂಡಿದ್ದಾಳೆ. ಆಕೆಯ ಬಾಡಿಗೆ ಮನೆಯಲ್ಲಿ ಪೊಲೀಸರು ಶೋಧ ನಡೆಸಿದ್ದು, 7 ಲಕ್ಷ ರೂಪಾಯಿ ನಗದು, ಮೂರು ವಿಭಿನ್ನ ಪೊಲೀಸ್ ಸಮವಸ್ತ್ರಗಳು ಮತ್ತು ಪರೀಕ್ಷಾ ದಾಖಲೆಗಳು ಕಂಡುಬಂದಿದೆ. ಮಹಿಳೆ ನೀಡಿದ ನಕಲಿ ಗುರುತು ದಾಖಲೆಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ!

Advertisements

ರಾಜಸ್ಥಾನದ ನಾಗೌರಂದ್‌ನ ನಿಂಬಾ ಕೆ ಬಾಸ್ ಗ್ರಾಮದವಳಾದ ಮೂಲಿಯ ತಂದೆ ಟ್ರಕ್ ಚಾಲಕರು. ಅಧಿಕೃತ ದಾಖಲೆಗಳ ಪ್ರಕಾರ, 2021ರಲ್ಲಿ ರಾಜಸ್ಥಾನ ಸಬ್‌ ಇನ್‌ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಮೂಲಿ ಅನುತ್ತೀರ್ಣರಾಗಿದ್ದು, ಬಳಿಕ ‘ಮೂಲಿ ದೇವಿ’ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾಳೆ. ಹಾಗೆಯೇ ಸಾಮಾಜಿಕ ಮಾಧ್ಯಮದಲ್ಲಿ ತಾನು ಸಬ್‌ ಇನ್‌ಸ್ಪೆಕ್ಟರ್ ಆಗಿ ಆಯ್ಕೆಯಾಗಿದ್ದೇನೆ ಎಂದು ಸುಳ್ಳು ಮಾಹಿತಿ ಹರಡಿದ್ದಾಳೆ.

ನೇಮಕಾತಿಗೊಂಡ ಸಬ್‌ ಇನ್‌ಸ್ಪೆಕ್ಟರ್‌ಗಳ ವಾಟ್ಸಾಪ್‌ ಗುಂಪಿನಲ್ಲೂ ಬುಗಾಲಿಯಾ ಇದ್ದು ಕ್ರೀಡಾ ಕೋಟಾದ ಮೂಲಕ ದಾಖಲಾದ ರಾಜಸ್ಥಾನ ಪೊಲೀಸ್ ಅಕಾಡೆಮಿಯ ಈ ಹಿಂದಿನ ಬ್ಯಾಚ್‌ನ ಅಭ್ಯರ್ಥಿ ಎಂದು ತನ್ನನ್ನು ತಾನು ಪರಿಚಯಿಸಿಕೊಂಡಿದ್ದಳು ಎಂದು ಹೇಳಲಾಗಿದೆ.

ಬುಗಾಲಿಯಾ ಆರ್‌ಪಿಎ ಪೆರೇಡ್ ಮೈದಾನದಲ್ಲಿ ಹೆಚ್ಚಾಗಿ ಪೂರ್ಣ ಸಮವಸ್ತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೂಲಿ ಔಟ್‌ಡೋರ್‌ ಡ್ರಿಲ್‌ಗಳಲ್ಲೂ ಭಾಗಿಯಾಗುತ್ತಿದ್ದಳು. ಹಲವು ಅಧಿಕಾರಿಗಳೊಂದಿಗೆ ಫೋಟೋ ತೆಗೆಸಿಕೊಂಡಿದ್ದು ಯುವ ಆಕಾಂಕ್ಷಿಗಳಿಗೆ ಸಲಹೆ ನೀಡುವ ಕಾರ್ಯಗಳನ್ನು ಮಾಡಿದ್ದಳು. ತರಬೇತಿ ಪಡೆಯುತ್ತಿದ್ದ ಸಬ್‌ ಇನ್‌ಸ್ಪೆಕ್ಟರ್‌ಗಳು ಅನುಮಾನ ವ್ಯಕ್ತಪಡಿಸಿದ ಬಳಿಕ ವಂಚನೆ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಎಲ್ಲ ಆಪಾದನೆಯನ್ನು ಬುಗಾಲಿಯಾ ಒಪ್ಪಿಕೊಂಡಿದ್ದಾಳೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X