ರಾಜ್‌ಕೋಟ್ ಗೇಮ್ ಜೋನ್ ದುರಂತ: ಪೊಲೀಸ್ ಆಯುಕ್ತ ಸೇರಿ ಪ್ರಮುಖ ಅಧಿಕಾರಿಗಳ ವರ್ಗಾವಣೆ

Date:

Advertisements

ಗುಜರಾತಿನ ರಾಜ್‌ಕೋಟ್‌ ಗೇಮ್‌ ಜೋನ್‌ ದುರಂತದಲ್ಲಿ ಇಲ್ಲಿಯವರೆಗೂ 28 ಮಂದಿ ಮೃತಪಟ್ಟಿದ್ದು, ಘೋರ ಘಟನೆಯ ನಂತರ ರಾಜ್ಯ ಸರ್ಕಾರ ಹಲವು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ನಗರ ಪೊಲೀಸ್ ಆಯುಕ್ತ ರಾಜು ಭಾರ್ಗವ ಅವರನ್ನು ವರ್ಗಾವಣೆಗೊಳಿಸಿದ್ದು, ಅವರ ಸ್ಥಾನಕ್ಕೆ ಅಹಮದಾಬಾದಿನ ವಿಶೇಷ ಪೊಲೀಸ್ ಆಯುಕ್ತ ಬ್ರಜೇಶ್ ಕುಮಾರ್‌ ಝಾ ಅವರನ್ನು ನೇಮಿಸಲಾಗಿದೆ.

ನಗರ ಆಯುಕ್ತರಲ್ಲದೆ ಆಡಳಿತ, ಸಂಚಾರಿ ಹಾಗೂ ಅಪರಾಧ ವಿಭಾಗದ ಆಯುಕ್ತರನ್ನು ಕೂಡ ವರ್ಗಾವಣೆಗೊಳಿಸಲಾಗಿದೆ.

ಗುಜರಾತ್‌ ಹೈಕೋರ್ಟ್ ರಾಜ್‌ಕೋಟ್‌ ಪಾಲಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೆಲವು ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?

ಗೇಮ್‌ ಜೋನ್‌ ಸಂಸ್ಥೆ ನಗರ ಪಾಲಿಕೆಯಿಂದ ನಿರಪೇಕ್ಷಣ ಪ್ರಮಾಣ ಪತ್ರ, ಅಗ್ನಿ ಸುರಕ್ಷತೆ ಹಾಗೂ ಕಟ್ಟಡ ನಿಯಮ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳದ ಕಾರಣ ಸರ್ಕಾರ ಹಾಗೂ ಪಾಲಿಕೆ ಸಂಸ್ಥೆ ವಿರುದ್ಧ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿತ್ತು.

ಪ್ರಮುಖ ಪ್ರಮಾಣ ಪತ್ರಗಳನ್ನು ಪಡೆಯದೆ 2 ವರ್ಷಗಳಿಗೂ ಹೆಚ್ಚು ಕಾಲ ರಾಜ್‌ಕೋಟ್‌ನ ಎರಡು ಗೇಮ್‌ ಜೋನ್‌ಗಳು ಕಾರ್ಯನಿರ್ವಹಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರಿಂದ ನಿಯಂತ್ರಿಸಲ್ಪಡುತ್ತಿರುವ ರಾಜ್ಯ ಸರ್ಕಾರವನ್ನು ಇನ್ನು ಮುಂದೆ ನಂಬಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

“ಎರಡೂ ವರ್ಷಗಳಿಗೂ ಹೆಚ್ಚು ಕಾಲ ಈ ಗೇಮಿಂಗ್‌ ಜೋನ್‌ ಕಾರ್ಯ ನಿರ್ವಹಿಸುತ್ತಿದೆ. ನೀವು ಕಣ್ಣು ಮುಚ್ಚಿಕೊಂಡಿದ್ದೀರಿ ಎಂದು ನಾವು ಭಾವಿಸಬೇಕೆ? ನೀವು ನಿದ್ದೆಯ ಮಂಪರಿನಲ್ಲಿದ್ದರಾ? ನಿಮ್ಮ ಅಧಿಕಾರಿಗಳು ಏನು ಮಾಡುತ್ತಿದ್ದರು” ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

ಪ್ರಧಾನಿಯ ಪದವಿ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

ದೆಹಲಿ ವಿಶ್ವವಿದ್ಯಾಲಯವು ಪ್ರಧಾನಿ ನರೇಂದ್ರ ಮೋದಿಯ ಪದವಿ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿಲ್ಲ...

Download Eedina App Android / iOS

X