ರಕ್ಷಾ ಬಂಧನ | ಇಲ್ಲಿ ಗಂಡನಿಗೆ ರಾಖಿ ಕಟ್ಟುತ್ತಾರೆ ಮಹಿಳೆಯರು!

Date:

Advertisements

ಭಾರತದಲ್ಲಿ ಆಚರಿಸುವ ಸಾಂಪ್ರದಾಯಿಕ ಹಬ್ಬಗಳಲ್ಲಿ ರಕ್ಷಾ ಬಂಧನ ಕೂಡ ಒಂದು. ಅದರಲ್ಲೂ, ಶ್ರಾವಣ ಮಾಸದ ಹುಣ್ಣಿಯ ದಿನದಂದು ರಕ್ಷಾ ಬಂಧನ ಆಚರಣೆ ನಡೆಯುತ್ತದೆ. ಹೆಣ್ಣುಮಕ್ಕಳು ಮತ್ತು ಮಹಿಳೆಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ. ತಮ್ಮ ಸಹೋದರ ತಮಗೆ ರಕ್ಷಕನಾಗಿ ಜೊತೆಗಿರುತ್ತಾನೆ ಎಂಬ ನಂಬಿಕೆಯೊಂದಿಗೆ ರಕ್ಷಾ ಬಂಧನ ಆಚರಿಸಲಾಗುತ್ತದೆ. ಆದರೆ, ಮಧ್ಯಪ್ರದೇಶದ ಬುಡಕಟ್ಟು ಸಮುದಾಯವೊಂದರಲ್ಲಿ ಸಹೋದರರ ಬದಲಾಗಿ ಗಂಡನಿಗೆ ರಾಖಿ ಕಟ್ಟುವ ಮೂಲಕ ಹಬ್ಬ ಆಚರಿಸುವ ಪ್ರತೀತಿ ಇದೆ.

ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯ ಹಲವೆಡೆ ನೆಲೆಸಿರುವ ಗೊಂಡ ಬುಡಕಟ್ಟು ಸಮುದಾಯದಲ್ಲಿ ಮಹಿಳೆಯರು ಗಂಡನಿಗೆ ರಾಖಿ ಕಟ್ಟುವ ಸಂಪ್ರದಾಯವಿದೆ. ಈ ಸಮುದಾಯದ ಮಹಿಳೆಯರು ರಕ್ಷಾ ಬಂಧನದ ದಿನ ತಮ್ಮ ಸಹೋದರರಿಗೆ ರಾಖಿ ಕಟ್ಟುವುದಿಲ್ಲ. ಬದಲಾಗಿ, ತಮ್ಮ ಗಂಡನಿಗೆ ರಾಖಿ ಕಟ್ಟುತ್ತಾರೆ. ಈ ಸಂಪ್ರದಾಯ ಹಲವಾರು ದಶಕಗಳಿಂದ ನಡೆದುಬಂದಿದೆ.

ಗೊಂಡ ಸಮುದಾಯದ ಮಹಿಳೆಯರು ತಮ್ಮ ಗಂಡನೇ ತಮಗೆ ರಕ್ಷಕನೆಂದು ಭಾವಿಸುತ್ತಾರೆ. ತಮ್ಮ ಜೀವಿತಾವಧಿಯ ಕೊನೆಯವರೆಗೂ ತಮಗಾಗಿ ದುಡಿಯುವವರು, ತಮ್ಮ ರಕ್ಷಣೆಯ ಹೊಣೆ ಹೊರುವವರು ತಮ್ಮ ಗಂಡನೇ ಎಂಬುದು ಈ ಸಮುದಾಯದ ಮಹಿಳೆಯರ ನಂಬಿಕೆ. ಹೀಗಾಗಿ, ಅವರು ತಮ್ಮ ಗಂಡನಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಿಸುತ್ತಾರೆ.

Advertisements

ಈ ಲೇಖನ ಓದಿದ್ದೀರಾ?; ಯುವತಿಯ ಅಪಹರಣ- ಪ್ರತ್ಯಕ್ಷ ಸಾಕ್ಷಿಯಿಂದ ಎಸ್‌ಐಟಿಗೆ ದೂರು; ಅಲ್ಲಿದ್ದ ಆ ವ್ಯಕ್ತಿ ಯಾರು ಗೊತ್ತೇ?

“ನಮ್ಮ ಸಮುದಾಯದಲ್ಲಿ ಮಹಿಳೆಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವುದಿಲ್ಲ. ಏಕೆಂದರೆ, ಅವರು ಪತಿಯನ್ನು ತಮ್ಮ ಜೀವನದ ನಿಜವಾದ ರಕ್ಷಕನೆಂದು ಹೆಣ್ಣುಮಕ್ಕಳು ಭಾವಿಸುತ್ತಾರೆ. ಈ ಸಂಪ್ರದಾಯ ಹಿಂದಿನಿಂದಲೂ ನಡೆದುಬಂದಿದೆ. ಇತ್ತೀಚೆಗೆ, ಈ ಅಚರಣೆ ಬದಲಾಗುತ್ತಿದ್ದು, ಮಹಿಳೆಯರು ತಮ್ಮ ಸಹೋದರರಿಗೂ ರಾಖಿ ಕಟ್ಟಲು ಆರಂಭಿಸಿದ್ದಾರೆ” ಎಂದು ಗೊಂಡ ಸಮುದಾಯದ ಮುಖಂಡ ಅಂಜೆಲಾಲ್ ಗೌರ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X