ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಸ್ಮರಣಾನಂದ ಅವರಿಗೆ ಮೂತ್ರನಾಳ ಸೋಂಕು ಕಾಣಿಸಿಕೊಂಡ ಕಾರಣ ಜನವರಿ 29ರಂದು ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
2017 ರಲ್ಲಿ ರಾಮಕೃಷ್ಣ ಮಿಷನ್ನ 16 ನೇ ಅಧ್ಯಕ್ಷರಾಗಿದ್ದ ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Srimat Swami Smaranananda ji Maharaj, the revered President of Ramakrishna Math and Ramakrishna Mission dedicated his life to spirituality and service. He left an indelible mark on countless hearts and minds. His compassion and wisdom will continue to inspire generations.
I had… pic.twitter.com/lK1mYKbKQt
— Narendra Modi (@narendramodi) March 26, 2024
ಮಾರ್ಚ್ 2022ರಲ್ಲಿ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಸ್ಮರಣಾನಂದರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡ ಅವರಿಗೆ ಮತ್ತೆ ಜನವರಿಯಲ್ಲಿ ಮೂತ್ರನಾಳ ಸೋಂಕು ಕಾಣಿಸಿಕೊಂಡಿದೆ. ಇನ್ನು ಉಸಿರಾಟದ ಸಮಸ್ಯೆಯನ್ನೂ ಹೊಂದಿದ್ದ ಸ್ಮರಣಾನಂದ ಅವರನ್ನು ಮಾರ್ಚ್ 3 ರಂದು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ಸಾರ್ವಜನಿಕ ಶೌಚಾಲಯವಾಗಿದ್ದ ಗೋಡೆಗೆ ವಾರ್ಲಿ ಕಲೆಯ ಸಿಂಗಾರ
1929ರಲ್ಲಿ ತಮಿಳುನಾಡಿನ ತಾಂಜಾವೂರು ಜಿಲ್ಲೆಯ ಅಂಡಮಿ ಗ್ರಾಮದಲ್ಲಿ ಜನಿಸಿದ ಸ್ವಾಮಿ ಸ್ಮರಣಾನಂದರು ಸಣ್ಣ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡರು. ತಮ್ಮ ಶಾಲಾ ಶಿಕ್ಷಣವನ್ನು 1946ರಲ್ಲಿ ಪೂರ್ಣಗೊಳಿಸಿ ಬಳಿಕ ನಾಸಿಕ್ನಿಂದ ವಾಣಿಜ್ಯದಲ್ಲಿ ಡಿಪ್ಲೊಮಾ ಮಾಡಿದರು.
1949ರಲ್ಲಿ ಮುಂಬೈಗೆ ತೆರಳಿದ ಸ್ಮರಣಾನಂದರು ರಾಮಕೃಷ್ಣ ಮತ್ತು ಸ್ವಾಮಿ ವಿವೇಕಾನಂದರ ವಿಚಾರಧಾರೆಯಿಂದ ಪ್ರೇರಿತರಾಗಿ ಮುಂಬೈನ ರಾಮಕೃಷ್ಣ ಮಿಷನ್ಗೆ ಸೇರಿದರು. ತನ್ನ 22ನೇ ವಯಸ್ಸಿನಲ್ಲಿಯೇ ಶಂಕರಾನಂದರಿಂದ ಧೀಕ್ಷೆ ಪಡೆದು 1956ರಲ್ಲಿ ಬ್ರಹ್ಮಚರ್ಯವನ್ನು ಸ್ವೀಕರಿಸಿದರು.