ಅತ್ಯಾಚಾರ ಆರೋಪಿಯನ್ನು ಬೆತ್ತಲೆಗೊಳಿಸಿ-ಮೆರವಣಿಗೆ ಮಾಡಿ ಹಲ್ಲೆ, ನಾಯಿ ಬಿಟ್ಟು ದಾಳಿ

Date:

Advertisements

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದ ಆರೋಪಿಯನ್ನು ಬೆತ್ತಲೆಗೊಳಿಸಿ, ಎತ್ತಿನ ಬಂಡಿಗೆ ಕಟ್ಟಿ, ಮೆರವಣಿಗೆ ಮಾಡಿ, ಹಲ್ಲೆ ನಡೆಸಿ, ನಾಯಿ ಬಿಟ್ಟು ಕಚ್ಚಿಸಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ವಿಶೇಶ್ವರಗಂಜ್ ಪ್ರದೇಶದಲ್ಲಿ ಘಟನೆ ನಡೆಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಯುವಕನ ಸಂಬಂಧಿ ಮಹಿಳೆಯೊಬ್ಬರು ದಾಖಲಿಸಿದ ದೂರಿನ ಆಧಾರದ ಮೇಲೆ ಗ್ರಾಮದ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೈರಲ್ ಆದ ವಿಡಿಯೋದಲ್ಲಿ; 22 ವರ್ಷದ ಯುವಕನನ್ನು ಬೆತ್ತಲೆಗೊಳಿಸಿ ಎತ್ತಿನ ಬಂಡಿಗೆ ಕಟ್ಟಿ ಮೆರವಣಿಗೆ ಮಾಡಿರುವುದು, ಥಳಿಸಿರುವುದ ಕಂಡುಬಂದಿದೆ. ಅಲ್ಲದೆ, ಆತನ ಮೇಲೆ ದಾಳಿ ಮಾಡುವಂತೆ ನಾಯಿಯನ್ನು ಪ್ರೇರೇಪಿಸುವುದು ಕಂಡುಬಂದಿದೆ. ಜೊತೆಗೆ, ‘ನಾಯಿಯನ್ನು ಬಿಡಿ, ಆತನ ಮೇಲೆ ದಾಳಿ ಮಾಡಲಿ, ಆತ ಸತ್ತರೆ ಸಾಯಲಿ’ ಎಂದು ಹಿಂದಿಯಲ್ಲಿ ಹೇಳುತ್ತಿರುವ ಧ್ವನಿಯೂ ಕೇಳಿಸುತ್ತದೆ.

Advertisements

ಹಲ್ಲೆಗೊಳಗಾದ ಯುವಕ ಸಂಬಂಧಿ ಮಹಿಳೆಯೊಬ್ಬರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಏಪ್ರಿಲ್ 3ರಂದು ತನ್ನ ಭಾವನನ್ನು ಹಗ್ಗಗಳಿಂದ ಕಟ್ಟಿ ಹಲ್ಲೆ ನಡೆಸಲಾಗಿದೆ. ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: Encounter | ಬಲಾಢ್ಯರು- ಪ್ರಭಾವಿಗಳ ಒಂದೇ ಒಂದು ಎನ್‌ಕೌಂಟರ್ ಆಗಿದ್ದರೆ ತೋರಿಸಿ…

“ಮಹಿಳೆಯೊಬ್ಬರ ಲಿಖಿತ ದೂರಿನ ಆಧಾರದ ಮೇಲೆ, ಬಿಎನ್‌ಎಸ್‌ ಸೆಕ್ಷನ್‌ಗಳ ಅಡಿಯಲ್ಲಿ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಪಾಂಡೆ ತಿಳಿಸಿದ್ದಾರೆ.

“ಆತನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಗೈದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಸದ್ಯ, ತನಿಖೆ ನಡೆಯುತ್ತಿದೆ” ಎಂದು ಪಾಂಡೆ ಹೇಳಿದ್ದಾರೆ.

ಸಂತ್ರಸ್ತ ಯುವಕ ಕೂಡ ಅದೇ ಗ್ರಾಮದವನಾಗಿದ್ದಾನೆ. ಆತನ ವಿರುದ್ಧ ಮತ್ತೊಂದು ಸಮುದಾಯದ ಮಹಿಳೆಯು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಆತನ ಈವರೆಗೆ ಪೊಲೀಸರಿಗೆ ಸಿಕ್ಕಿರಲಿಲ್ಲ. ಇದೀಗ, ಗ್ರಾಮಸ್ಥರು ಆತನ ಮೇಲೆ ಅಮಾನವೀಯವಾಗಿ ದಾಳಿ ನಡೆಸಿದ್ದಾರೆ. ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X