ಅತ್ಯಾಚಾರ ಪ್ರಕರಣ | ಪೆರೋಲ್ ಮೇಲೆ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್‌ ಸಿಂಗ್ ಬಿಡುಗಡೆ

Date:

Advertisements

ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭಸುತ್ತಿರುವ ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್ ಸಿಂಗ್‌ಗೆ 20 ದಿನಗಳ ‘ಪೆರೋಲ್’ ನೀಡಲಾಗಿದೆ. ಆತ, ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಗುರ್ಮೀತ್ ಸಿಂಗ್ ವಿರುದ್ಧದ ಆರೋಪ ಸಾಬೀತಾಗಿದ್ದು, ಆತನಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಆತನನ್ನು ಹರಿಯಾಣದ ರೋಹಕ್ಟ್‌ನ ಸುನಾರಿಯಾ ಜೈಲಿನಲ್ಲಿ ಇರಿಸಲಾಗಿದೆ. ಇದೀಗ, ಹರಿಯಾಣ ಸರ್ಕಾರ ಆತನಿಗೆ 20 ದಿನಗಳ ಪೆರೋಲ್ ನೀಡಿದ್ದು, ಬಿಗಿ ಭದ್ರತೆಯ ನಡುವೆ ಗುರ್ಮೀತ್ ಸಿಂಗ್ ಜೈಲಿನಿಂದ ಹೊರಬಂದಿದ್ದಾರೆ.

ಜೈಲಿನಿಂದ ಹೊರಗಿರುವ ಈ 20 ದಿನಗಳ ಅವಧಿಯಲ್ಲಿ ಯಾವುದೇ ಚುನಾವಣಾ ಚಟುವಟಿಕೆ, ಪ್ರಚಾರ, ಭಾಷಣ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ. ಗುರ್ಮೀತ್ ಸಿಂಗ್, ತಮ್ಮ ಬಿಡುಗಡೆಯ ತಾತ್ಕಾಲಿಕ ಅವಧಿಯನ್ನು ಉತ್ತರ ಪ್ರದೇಶದ ಬಾಗ್‌ಪತ್‌ನ ಬರ್ನಾವದಲ್ಲಿರುವ ಡೇರಾ ಆಶ್ರಮದಲ್ಲಿ ಕಳೆಯಲಿದ್ದಾರೆ ಎಂದು ವರದಿಯಾಗಿದೆ.

Advertisements

ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯ ಸಮಯದಲ್ಲಿ ಆತನಿಗೆ ಪೆರೋಲ್ ನೀಡಿರುವುದಕ್ಕೆ ಹರಿಯಾಣದ ಬಿಜೆಪಿ ಸರ್ಕಾರವನ್ನು ವಿಪಕ್ಷಗಳು ಟೀಕಿಸುತ್ತಿವೆ.

ಈ ಹಿಂದೆಯೂ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದ ವೇಳೆ, ಆಗಸ್ಟ್‌ನಲ್ಲಿ ಗುರ್ಮೀತ್‌ ಸಿಂಗ್‌ಗೆ 21 ದಿನಗಳ ‘ಪೆರೋಲ್’ ನೀಡಲಾಗಿತ್ತು. ಅಂದಹಾಗೆ, ದೀರ್ಘಾವಧಿ ಜೈಲು ಶಿಕ್ಷಗೆ ಗುರಿಯಾಗಿರುವವರಿಗೆ ತಾತ್ಕಾಲಿಕ ಬಿಡುಗಡೆಗೆ ಅವಕಾಶವಿರುತ್ತದೆ. ಅವರು ಪೆರೋಲ್ ಮೇಲೆ ಜೈಲಿನಿಂದ ಹೊರಬರಲು ಅವನು ಮಾಡಿಕೊಡಲಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

Download Eedina App Android / iOS

X