ಮಹಿಳೆ ಮೇಲೆ ನಿರಂತರ ಅತ್ಯಾಚಾರ; ಬಿಸಿ ಬೇಳೆ ಸುರಿದು ಚಿತ್ರಹಿಂಸೆ ನೀಡಿದ ವಿಕೃತ ಕಾಮುಕ

Date:

Advertisements

ಮಹಿಳೆಯ ಮೇಲೆ ಆಕೆಯ ಸ್ನೇಹಿತನೇ ಒಂದು ವಾರ ನಿರಂತರ ಅತ್ಯಾಚಾರ ಎಸಗಿ, ಆಕೆಯ ಮೇಲೆ ಬಿಸಿ ಬೇಳೆ ಸಾರು ಸುರಿದು ಚಿತ್ರಹಿಂಸೆ ನೀಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಸಂತ್ರಸ್ತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಮೂಲದವರಾಗಿದ್ದು, ನವದೆಹಲಿಯಲ್ಲಿಆರೋಪಿ ಸ್ನೇಹಿತನೊಂದಿಗೆ ಕಳೆದ ಒಂದು ತಿಂಗಳಿನಿಂದ ವಾಸಿಸುತ್ತಿದ್ದರು. ಕಳೆದ ಒಂದು ವಾರದಿಂದ ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಆರೋಪಿ ಕಾಮುಕ, ಆಕೆಗೆ ಚಿತ್ರಹಿಂಸೆ ನೀಡಿದ್ದಾನೆ. ಆಕೆಯ ದೇಹದ ಮೇಲೆ 20ಕ್ಕೂ ಹೆಚ್ಚು ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

28 ವರ್ಷದ ಆರೋಪಿ ಪರಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಅತ್ಯಾಚಾರ, ಕಿರುಕುಳ, ಹಲ್ಲೆ ಆರೋಪಗಳ ಮೇಲೆ ಐಪಿಸಿ ಸೆಕ್ಷನ್ 323, 376, ಮತ್ತು 37 ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, ಮಹಿಳೆಗೆ ಆರೋಪಿ ಪರಾಸ್‌ ನಾಲ್ಕು ತಿಂಗಳ ಹಿಂದೆ ಪರಿಚಿತನಾಗಿದ್ದ. ದಕ್ಷಿಣ ದೆಹಲಿಯ ನೆಬ್ ಸರೈ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ತಿಂಗಳಿನಿಂದ ಮಹಿಳೆ ಪರಾಸ್‌ನೊಂದಿಗೆ ವಾಸಿಸುತ್ತಿದ್ದರು.

ಜನವರಿ 30ರಂದು ತನ್ನ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಮಹಿಳೆ ನೆಬ್ ಸರೈ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಮಹಿಳೆಯನ್ನು ರಕ್ಷಿಸಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದೆ.

“ಜನವರಿ ಆರಂಭದಲ್ಲಿ ಮನೆಗೆಲಸದ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಲು ನಿರ್ಧರಿಸಿದ್ದೆ. ಉದ್ಯೋಗವನ್ನು ಹುಡುಕಲು ಪರಾಸ್‌ ನೆರವು ನೀಡಿದ್ದ. ಹೀಗಾಗಿ, ಆತನನ್ನು ಭೇಟಿಯಾಗಲು ದೆಹಲಿಗೆ ಬಂದಿದ್ದೆ. ಆತನ ದೆಹಲಿಯಲ್ಲಿಯೇ ಉಳಿಯುವಂತೆ ಒತ್ತಾಯಿಸಿದ್ದ. ಕಾಲಾನಂತರ, ನನ್ನ ಮೇಲೆ ದೈಹಿಕ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿ ಕೂಡಿ ಹಾಕಿದ್ದ” ಎಂದು ಸಂತ್ರಸ್ತೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು....

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

Download Eedina App Android / iOS

X