ಅಪರೂಪದ ಘಟನೆ | ವೃದ್ಧನ ಪಿತ್ತಕೋಶದಿಂದ 8,125 ಕಲ್ಲುಗಳನ್ನು ಹೊರತೆಗೆದ ವೈದ್ಯರು

Date:

Advertisements

ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ಬಂದಿದ್ದ 70 ವರ್ಷದ ವೃದ್ಧರೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಪಿತ್ತಕೋಶದಿಂದ ಬರೋಬ್ಬರಿ 8,000ಕ್ಕೂ ಹೆಚ್ಚು ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ. ಈ ಅಪರೂಪದ ಪ್ರಕರಣವು ದೆಹಲಿಯ ಗುರುಗ್ರಾಮದ ಪೋರ್ಟಿಸ್‌ ಸ್ಮಾರಕ ಸಂಶೋಧನಾ ಸಂಸ್ಥೆಯಲ್ಲಿ ಘಟಿಸಿದೆ.

ರೋಗಿಯು ಸುಮಾರು 5 ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ನೋಟು ತಾಳಲಾರದೆ ಗುರುಗ್ರಾಮದ ಆಸ್ಪತ್ರೆಗೆ ಬಂದಿದ್ದರು. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಅವರ ಹೊಟ್ಟೆಯಲ್ಲಿ ಕಲ್ಲುಗಳು ಇರುವುದು ಪತ್ತೆಯಾಗಿತ್ತು. ಅವರಿಗೆ ಆಂಕೊಲಾಜಿ ವಿಭಾಗದ ಹಿರಿಯ ನಿರ್ದೇಶಕ ಡಾ. ಅಮಿತ್ ಜಾವೇದ್ ಮತ್ತು ಬೇರಿಯಾಟ್ರಿಕ್ ವಿಭಾಗದ ಪ್ರಧಾನ ಸಲಹೆಗಾರ ಡಾ. ನರೋಲಾ ಯಾಂಗರ್ ನೇತೃತ್ವದಲ್ಲಿ ವೈದ್ಯರ ತಂಡವು 1 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ. ಅವರ ಪಿತ್ತಕೋಶದ ಬಳಿಯಿದ್ದ 8,125 ಕಲ್ಲುಗಳನ್ನು ಹೊರತೆಗೆದಿದೆ.

“ರೋಗಿಯ ಪಿತ್ತಕೋಶವು ಊದಿಕೊಂಡಿತ್ತು. ಅದರಲ್ಲಿ ಕಲ್ಲುಗಳು ತುಂಬಿಕೊಂಡಿದ್ದವು. ಚಿತ್ತಕೋಶವು ಹೊಡೆದು ಛಿದ್ರವಾಗುವ ಹಂತಕ್ಕೆ ಬಂದಿತ್ತು. ನಾವು ಎಚ್ಚರಿಕೆಯಿಂದ ಶಸ್ತ್ರಚಿಕಿತ್ಸೆ ನಡೆಸಿದ್ದೇವೆ. ಕಲ್ಲುಗಳನ್ನು ಹೊರತೆಗೆದಿದ್ದೇವೆ. ರೋಗಿಯ ಆರೋಗ್ಯ ಸುಧಾರಿಸುತ್ತಿದೆ” ಎಂದು ಡಾ. ಜಾವೇದ್ ಮತ್ತು ಡಾ. ಯಾಂಗರ್ ಹೇಳಿದ್ದಾರೆ.

Advertisements

“ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡ ಬಳಿಕ, ಹೊಟ್ಟೆಯ ಅಲ್ಟ್ರಾಸೌಂಡ್ ಪರೀಕ್ಷೆಗೆ ಒಳಪಡಿಸಲಾಯಿತು. ಪರೀಕ್ಷೆಯಲ್ಲಿ ಪಿತ್ತಕೋಶವು ಊದಿಕೊಂಡಿರುವುದು ಗೊತ್ತಾಯಿತು. ತಕ್ಷಣವೇ ಶಸ್ತ್ರಚಕಿತ್ಸೆ ನಡೆಸಿದ್ದೇವೆ” ಎಂದು ಡಾ. ಜಾವೇದ್ ಹೇಳಿದ್ದಾರೆ.

“ಈ ಪ್ರಕರಣ ಅಪರೂಪದ್ದಾಗಿದೆ. ಚಿಕಿತ್ಸೆ ಪಡೆಯುವುದನ್ನು ವರ್ಷಗಟ್ಟಲೆ ನಿರ್ಲಕ್ಷ್ಯಿಸಿರುವ ಕಾರಣ, ಕಲ್ಲುಗಳ ಸಂಖ್ಯೆ ಹೆಚ್ಚಾಗಿದೆ. ಶಸ್ತ್ರಚಿಕಿತ್ಸೆಯನ್ನು ಇನ್ನಷ್ಟು ವಿಳಂಬ ಮಾಡಿದ್ದರೆ, ಪಿತ್ತಕೋಶದ ಸೋಂಕು, ಹೊಟ್ಟೆ ನೋವು ಸೇರಿದಂತೆ ಗಂಭೀರ ಸಮಸ್ಯೆಗಳು ಎದುರಾಗುತ್ತಿದ್ದವು” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X