ಜಾರ್ಖಂಡ್ ಪೊಲೀಸ್ ಠಾಣೆಯಲ್ಲಿದ್ದ 9 ಕೆಜಿ ಗಾಂಜಾ, 10 ಕೆಜಿ ಭಾಂಗ್ ನಾಶ; ಇಲಿಗಳ ಮೇಲೆ ಆರೋಪ!

Date:

Advertisements

ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಜಪ್ತಿ ಮಾಡಿ ಇರಿಸಲಾಗಿದ್ದ 10 ಕೆಜಿ ಭಾಂಗ್ ಮತ್ತು ಒಂಬತ್ತು ಕೆಜಿ ಗಾಂಜಾವನ್ನು ನಾಶಮಾಡಿದ ಆರೋಪವನ್ನು ಇಲಿಗಳ ಮೇಲೆ ಹೊರೆಸಲಾಗಿದೆ!

ಇಲಿಗಳೇ ಗಾಂಜಾ ನಾಶ ಮಾಡಿದೆ ಎಂಬ ವಿಷಯವನ್ನು ಪೊಲೀಸರು ಜಿಲ್ಲೆಯ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಪ್ರಕರಣಕ್ಕೆ ಸಂಬಂಧಿಸಿದ ವಕೀಲರು ಭಾನುವಾರ ತಿಳಿಸಿದ್ದಾರೆ.

ಆರು ವರ್ಷಗಳ ಹಿಂದೆ ವಶಪಡಿಸಿಕೊಂಡ ಭಾಂಗ್ ಮತ್ತು ಗಾಂಜಾವನ್ನು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸುವಂತೆ ರಾಜ್‌ಗಂಜ್ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿಗೆ ನ್ಯಾಯಾಲಯ ಸೂಚಿಸಿದೆ. ಅದಾದ ಬಳಿಕ ಪೊಲೀಸರು ಈ ಕುರಿತಾಗಿ ಶನಿವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಮ್ ಶರ್ಮಾ ಅವರಿಗೆ ವರದಿಯನ್ನು ಸಲ್ಲಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?    ಬೆಂಗಳೂರು | ವಿದ್ಯುತ್ ಅವಘಡಕ್ಕೆ ಇಲಿ ಕಾರಣ; ತನಿಖೆಗೆ 4 ಸಮಿತಿ ರಚನೆ

ಪೊಲೀಸ್ ಠಾಣೆಯ ಗೋದಾಮಿನಲ್ಲಿ ಸಂಗ್ರಹವಾಗಿದ್ದ ಮಾದಕ ವಸ್ತುಗಳನ್ನು ಇಲಿಗಳು ಸಂಪೂರ್ಣವಾಗಿ ನಾಶಪಡಿಸಿವೆ ಎಂದು ಅಧಿಕಾರಿ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ವರದಿ ಕೂಡ ದಾಖಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಡಿಸೆಂಬರ್ 14, 2018 ರಂದು, ರಾಜಗಂಜ್ ಪೊಲೀಸರು 10 ಕೆಜಿ ಭಾಂಗ್ ಮತ್ತು ಒಂಬತ್ತು ಕೆಜಿ ಗಾಂಜಾದೊಂದಿಗೆ ಶಂಭು ಪ್ರಸಾದ್ ಅಗರ್ವಾಲ್ ಎಂಬ ವ್ಯಕ್ತಿ ಮತ್ತು ಆತನ ಪುತ್ರನನ್ನು ಬಂಧಿಸಿದ್ದರು. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿತ್ತು.

ವಿಚಾರಣೆ ವೇಳೆ ನ್ಯಾಯಾಲಯವು ಪ್ರಕರಣದ ತನಿಖಾಧಿಕಾರಿ ಜಯಪ್ರಕಾಶ್ ಪ್ರಸಾದ್ ಅವರಿಗೆ ಜಪ್ತಿ ಮಾಡಿದ ಭಾಂಗ್ ಮತ್ತು ಗಾಂಜಾವನ್ನು ಏಪ್ರಿಲ್ 6 ರಂದು ನ್ಯಾಯಾಲಯಕ್ಕೆ ಸಾಕ್ಷಿಯಾಗಿ ನೀಡುವಂತೆ ಆದೇಶಿಸಿತ್ತು.

ಇದನ್ನು ಓದಿದ್ದೀರಾ?  ಐಕಿಯಾ ಬೆಂಗಳೂರು: ಊಟ ಮಾಡುತ್ತಿರುವಾಗ ದಿಢೀರನೆ ತಟ್ಟೆ ಮೇಲೆ ಬಿದ್ದ ಸತ್ತ ಇಲಿ!

ಆದರೆ ವಶಪಡಿಸಿಕೊಂಡ ಎಲ್ಲಾ ವಸ್ತುಗಳನ್ನು ಇಲಿಗಳು ನಾಶಪಡಿಸಿವೆ ಎಂದು ರಾಜ್‌ಗಂಜ್ ಪೊಲೀಸ್ ಠಾಣಾಧಿಕಾರಿಯ ಅರ್ಜಿಯೊಂದಿಗೆ ಪ್ರಸಾದ್ ಶನಿವಾರ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ ಎಂದು ಪ್ರಕರಣದ ಪರ ವಕೀಲ ಅಭಯ್ ಭಟ್ ಪಿಟಿಐಗೆ ತಿಳಿಸಿದರು. ಹಾಗೆಯೇ ಪೊಲೀಸರು ವಶಪಡಿಸಿಕೊಂಡ ವಸ್ತುಗಳನ್ನು ಸಾಕ್ಷಿಯಾಗಿ ನೀಡಲು ಸಾಧ್ಯವಾಗದ ಕಾರಣ ತನ್ನ ಕಕ್ಷಿದಾರನನ್ನು ಸುಳ್ಳು ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ಭಟ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X