ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

Date:

Advertisements

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಘೋಷಿಸಿದೆ. ಆದರೆ ಈ ಬಾರಿಯೂ ಆರ್‌ಬಿಐ ರೆಪೋ ದರ ಇಳಿಕೆ ಮಾಡುವುದಾಗಿ ನಿರೀಕ್ಷಿಸಲಾಗಿತ್ತು.

ಈಗಾಗಲೇ ಸಾಲದ ಮೇಲಿನ ಕಡಿತ ಮಾಡಿರುವ ಬಡ್ಡಿ ದರ ಹಾಗೂ ಇತ್ತೀಚೆಗೆ ಕೇಂದ್ರ ಸರ್ಕಾರ ಜಿಎಸ್‌ಟಿ ತೆರಿಗೆ ಕಡಿತಗೊಳಿಸಿರುವುದು, ಜಾಗತಿಕ ವ್ಯಾಪಾರ ಅನಿಶ್ಚಿತತೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರ್‌ಬಿಐ ತಿಳಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತನ್ನ ಮೂರು ದಿನಗಳ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯನ್ನು ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ನೇತೃತ್ವದಲ್ಲಿ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ನಂತರ ಮಾತನಾಡಿದ ಸಂಜಯ್ ಮಲ್ಹೋತ್ರಾ, ಅನುಕೂಲಕರ ಮುಂಗಾರು ಮಳೆ, ಆರೋಗ್ಯಕರ ಬಿತ್ತನೆ, ಉತ್ತಮ ಜಲಾಶಯ ಮಟ್ಟಗಳು ಮತ್ತು ಸಾಕಷ್ಟು ಆಹಾರ ಧಾನ್ಯ ಸಂಗ್ರಹಗಳು ಆಹಾರ ಬೆಲೆಗಳನ್ನು ನಿಯಂತ್ರಣದಲ್ಲಿಡಲಿವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

2025ರ ಮೊದಲ ಆರು ತಿಂಗಳಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ರೆಪೋ ದರದಲ್ಲಿ ಒಟ್ಟು 100 ಬೇಸಿಸ್‌ ಪಾಯಿಂಟ್ಸ್‌ ಗಳಷ್ಟು ಇಳಿಕೆ ಮಾಡಿತ್ತು. ಆದರೆ ಆಗಸ್ಟ್‌ ತಿಂಗಳಿನ ಆರ್‌ಬಿಐನ ಹಣಕಾಸು ನೀತಿ ಸಮಿತಿ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧಾರ ತೆಗೆದುಕೊಂಡಿತ್ತು.

ಅಮೆರಿಕದಿಂದ ಹೆಚ್ಚಿನ ಸುಂಕ, ರೂಪಾಯಿ ಮೌಲ್ಯ ಕುಸಿತ ಮತ್ತು ಜಾಗತಿಕ ವ್ಯಾಪಾರದ ಅನಿಶ್ಚಿತತೆಗಳಂತಹ ಬಾಹ್ಯ ಅಪಾಯಗಳನ್ನು ಗವರ್ನರ್ ಮಲ್ಹೋತ್ರಾ ಈ ಸಂದರ್ಭದಲ್ಲಿ ಎತ್ತಿ ತೋರಿಸಿದರು. ಈ ಅಂಶಗಳು ರಫ್ತು ಮತ್ತು ಬಂಡವಾಳದ ಹರಿವಿನ ದೃಷ್ಟಿಕೋನಕ್ಕೆ ಅಪಾಯಗಳನ್ನು ತಂದಿವೆ. ಈ ಅಪಾಯಗಳ ಹೊರತಾಗಿಯೂ, ಉತ್ತಮ ದೇಶೀಯ ಬೇಡಿಕೆ, ಉತ್ತಮ ಕೃಷಿ ಮತ್ತು ಸರ್ಕಾರದ ವೆಚ್ಚದಿಂದ ದೇಶದ ಆರ್ಥಿಕತೆಯು ಆಘಾತಗಳನ್ನು ತಡೆದುಕೊಳ್ಳಲು ಸನ್ನದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

ಎಲ್ಲರ ತಾಯಿ ಸಾಯುತ್ತಾರೆ; ರಜೆ ಕೇಳಿದ್ದಕ್ಕೆ ಮೇಲಧಿಕಾರಿಯ ಉಡಾಫೆಯ ಉತ್ತರ

ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ರಜೆ ಕೇಳಿದ ಬ್ಯಾಂಕ್ ಉದ್ಯೋಗಿಗೆ, “ಎಲ್ಲರ ತಾಯಿ...

ವಿವಾದಾತ್ಮಕ ಎಸ್‌ಐಆರ್ ನಂತರ ಬಿಹಾರದ ಅಂತಿಮ ಮತದಾರರ ಪಟ್ಟಿ ಪ್ರಕಟ

ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಮಂಗಳವಾರ ಅಂತಿಮ ಮತದಾರರ...

ಕಾಂಗ್ರೆಸ್‌ನ ‘ಎಕ್ಸ್’ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್ – ಆರೋಪ; ಎಫ್‌ಐಆರ್ ದಾಖಲು

ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ನ ಅಧಿಕೃತ 'ಎಕ್ಸ್‌' ಖಾತೆಯಲ್ಲಿ ಆಕ್ಷೇಪಾರ್ಯ ಪೋಸ್ಟ್‌ ಮಾಡಲಾಗಿತ್ತು...

Download Eedina App Android / iOS

X