ಸಮ್ಮತಿ ಇಲ್ಲದೆ ಫೋನ್ ರೆಕಾರ್ಡ್ ಮಾಡುವುದು ಖಾಸಗಿ ಹಕ್ಕಿನ ಉಲ್ಲಂಘನೆ; ಛತ್ತೀಸ್‌ಗಡ ಹೈಕೋರ್ಟ್

Date:

Advertisements

ಸಮ್ಮತಿಯಿಲ್ಲದೆ ಮೊಬೈಲ್ ಫೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದರೆ, ಅದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ತೀರ್ಪು ನೀಡಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 125ರ ಅಡಿಯಲ್ಲಿ ದಾಖಲಾಗಿದ್ದ ಜೀವನಾಂಶ ಪ್ರಕರಣದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಲಾದ ಗೌಪ್ಯತೆಯ ಹಕ್ಕಿನ ಕುರಿತು ಈ ಹಿಂದೆ ನೀಡಲಾಗಿರುವ ಹಲವು ತೀರ್ಪುಗಳನ್ನು ಅವಲಂಬಿಸಿರುವ ಹೈಕೋರ್ಟ್, “ಒಪ್ಪಿಗೆಯಿಲ್ಲದೆ ಫೋನ್ ಸಂಭಾಷಣೆಗಳನ್ನು ರೆಕಾರ್ಡ್ ಮಾಡುವುದು ಗೌಪ್ಯತೆಯ ಮೇಲಿನ ಆಕ್ರಮಣಕ್ಕೆ ಸಮಾನವಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

Advertisements

ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ 38 ವರ್ಷದ ಮಹಿಳೆಯೊಬ್ಬರು 2021ರ ಅಕ್ಟೋಬರ್‌ನಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಸಮ್ಮತಿಯಿಲ್ಲದೆ ಮೊಬೈಲ್ ಫೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡುವುದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ.

ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಕೆಲವು ದೂರವಾಣಿ ಸಂಭಾಷಣೆಗಳ ಆಧಾರದಲ್ಲಿ 44 ವರ್ಷದ ಪತಿ (ಪೊಲೀಸ್ ಕಾನ್‌ಸ್ಟೆಬಲ್‌) ತನ್ನ ಪತ್ನಿಯನ್ನು ಮರು ಪರೀಕ್ಷಿಸಲು ಕೌಟುಂಬಿಕ ನ್ಯಾಯಾಲಯ ಅನುಮತಿ ನೀಡಿತ್ತು.

ಮಹಿಳೆಯ ಪರ ವಕೀಲ ವೈಭವ್ ಗೋವರ್ಧನ್ ಅವರು ಸುಪ್ರೀಂ ಕೋರ್ಟ್ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ನ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ಕೌಟುಂಬಿಕ ನ್ಯಾಯಾಲಯದ ಆದೇಶವು ತನ್ನ ಕಕ್ಷಿದಾರನ ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದೆ ಎಂದಿದ್ದರು.

ಇದನ್ನೂ ಓದಿರಿ: ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿ ಟಿ ರವಿ ವ್ಯಂಗ್ಯ

ಎರಡೂ ಕಡೆಯ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶ ರಾಕೇಶ್ ಮೋಹನ್ ಪಾಂಡೆ ಅವರು, “ಪ್ರತಿವಾದಿಯು ಅರ್ಜಿದಾರರ ಸಂಭಾಷಣೆಯನ್ನು ಆಕೆಗೆ ತಿಳಿಯದಂತೆ ದಾಖಲಿಸಿದ್ದಾರೆ ಎಂದು ತೋರುತ್ತಿದೆ. ಇದು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ” ಎಂದು ತಿಳಿಸಿದ್ದಾರೆ.

“ಇದಲ್ಲದೆ, ಖಾಸಗಿತನದ ಹಕ್ಕು ಸಂವಿಧಾನದ 21 ನೇ ವಿಧಿಯಿಂದ ಕಲ್ಪಿಸಲ್ಪಟ್ಟಿರುವ ಜೀವನದ ಹಕ್ಕಿನ ಅತ್ಯಗತ್ಯ ಅಂಶವಾಗಿದೆ. ಆದ್ದರಿಂದ ಕೌಟುಂಬಿಕ ನ್ಯಾಯಾಲಯವು ಸಿಆರ್‌ಪಿಸಿಯ ಸೆಕ್ಷನ್ 311ರ ಅಡಿಯಲ್ಲಿ ಅರ್ಜಿ ಅನುಮತಿಸಿ ಲೋಪವೆಸಗಿದೆ. ಭಾರತೀಯ ಸಾಕ್ಷ್ಯ ಕಾಯಿದೆಯ ಸೆಕ್ಷನ್ 65ರ ಅಡಿಯಲ್ಲಿ ಪ್ರಮಾಣ ಪತ್ರವನ್ನು ನೀಡಿರುವುದು ತಪ್ಪು” ಎಂದಿದೆ. ಜೊತೆಗೆ ಕೌಟುಂಬಿಕ ನ್ಯಾಯಾಲಯವು ನೀಡಿದ ಆದೇಶವನ್ನು ಈ ಮೂಲಕ ರದ್ದುಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X