ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ ‘ಫುಲೆ’ ಸಿನಿಮಾ ಬಿಡುಗಡೆ ಮಾಡಬೇಕು: ಎಎಪಿ ನಾಯಕ ಸಂಜಯ್ ಒತ್ತಾಯ

Date:

Advertisements

‘ಫುಲೆ’ ಸಿನಿಮಾದಲ್ಲಿ ಬ್ರಾಹ್ಮಣರ ಬಗ್ಗೆ ಕೆಲವು ದೃಶ್ಯಗಳ ಬಗ್ಗೆ ವಿವಾದ ಉಂಟಾದ ಬಳಿಕ ಆ ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಲಾಗಿದೆ. ಈ ನಡುವೆ ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ ಸಿನಿಮಾವನ್ನು ಬಿಡುಗಡೆ ಮಾಡುವಂತೆ ಎಎಪಿ ನಾಯಕ ಸಂಜಯ್ ಸಿಂಗ್ ಮಂಗಳವಾರ ಒತ್ತಾಯಿಸಿದ್ದಾರೆ.

ಸಿನಿಮಾ ಬಿಡುಗಡೆಗೆ ವಿರೋಧ ಮಾಡುವುದು ದಲಿತರು ಮತ್ತು ಫುಲೆ ಅವರನ್ನು ತಮ್ಮ ಮಾದರಿ ಎಂದು ಪರಿಗಣಿಸುವ ಜನರನ್ನು ಅವಮಾನಿಸಿದಂತೆ ಎಂದು ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಫುಲೆ’ ವಿವಾದ | ಬಿಜೆಪಿ-ಆರ್‌ಎಸ್‌ಎಸ್ ದಲಿತ-ಬಹುಜನ ಇತಿಹಾಸವನ್ನು ಅಳಿಸಿಹಾಕಲು ಬಯಸಿದೆ: ರಾಹುಲ್ ಗಾಂಧಿ

Advertisements

ಏಪ್ರಿಲ್ 10ರಂದು ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಅದಾದ ಬಳಿಕ ಕೆಲವು ಬ್ರಾಹ್ಮಣ ಗುಂಪುಗಳು ಸಿನಿಮಾದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಬ್ರಾಹ್ಮಣ ಸಮುದಾಯವನ್ನು ಈ ಸಿನಿಮಾದಲ್ಲಿ ಕೆಟ್ಟದಾಗಿ ಚಿತ್ರಿಸಲಾಗಿದೆ ಎಂದು ಗುಂಪು ದೂರಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಎಎಪಿ ನಾಯಕ ಸಂಜಯ್ ಸಿಂಗ್, “ದೇಶಾದ್ಯಂತ ಜನರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವಾಗ, ಜ್ಯೋತಿಬಾ ಫುಲೆ ಮತ್ತು ಅವರ ಪತ್ನಿ ಸಾವಿತ್ರಿಬಾಯಿ ಅವರ ಜೀವನ ಮತ್ತು ಕೃತಿಗಳನ್ನು ಆಧರಿಸಿದ ‘ಫುಲೆ’ ಚಲನಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ನಮಗೆಲ್ಲರಿವಗೂ ನಿರಾಶೆ ಮೂಡಿಸಿದೆ. ಇದು ದಲಿತರು, ಫುಲೆ ದಂಪತಿಗಳಿಂದ ಸ್ಫೂರ್ತಿ ಪಡೆದ ಎಲ್ಲರಿಗೂ ಮಾಡಿದ ಅವಮಾನ” ಎಂದು ಹೇಳಿದ್ದಾರೆ.

“ಬ್ರಾಹ್ಮಣರು ಎರಡು ನಿಮಿಷಗಳ ಟ್ರೇಲರ್‌ನಿಂದ ಇಡೀ ಸಿನಿಮಾದ ಬಗ್ಗೆ ತಮ್ಮದೇ ಆದ ಪೂರ್ವಗ್ರಹಕ್ಕೆ ಬಂದಿದ್ದಾರೆ. ಆದರೆ ಚಿತ್ರದಲ್ಲಿ ಆಕ್ಷೇಪಾರ್ಹ ಏನೂ ಇಲ್ಲ” ಎಂದು ಚಲನಚಿತ್ರ ನಿರ್ದೇಶಕ ಅನಂತ್ ಮಹಾದೇವನ್ ಹೇಳಿಕೊಂಡಿದ್ದಾರೆ.

ಕಳೆದ ವಾರ ಬಿಡುಗಡೆಯಾಗಲಿದ್ದ ಸಿನಿಮಾ ಏಪ್ರಿಲ್ 25 ರಂದು ತೆರೆಗೆ ಬರಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X