‘ಹೆಲ್ತ್ ಡ್ರಿಂಕ್ಸ್‌’ ಪಟ್ಟಿಯಿಂದ ಬೋರ್ನ್‌ವಿಟಾ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಆದೇಶ

Date:

Advertisements

ಮಹತ್ವದ ಬೆಳವಣಿಗೆಯೊಂದರಲ್ಲಿ ಮಕ್ಕಳ ಪೇಯವಾಗಿ ಗುರುತಿಸಿಕೊಂಡಿದ್ದ ಕ್ಯಾಡ್‌ಬರಿ ಕಂಪನಿಯ ಬೋರ್ನ್‌ವಿಟಾ (Bourn Vita)ವನ್ನು ‘ಹೆಲ್ತ್ ಡ್ರಿಂಕ್ಸ್‌’ ಪಟ್ಟಿಯಿಂದ ತೆಗೆದು ಹಾಕುವಂತೆ ಆದೇಶ ಹೊರಡಿಸಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಈ ಸೂಚನೆ ನೀಡಿದ್ದು, ಅವರ ಪೋರ್ಟಲ್ ಮತ್ತು ಪ್ಲಾಟ್‌ಫಾರ್ಮ್‌ಗಳಲ್ಲಿ ಬೋರ್ನ್‌ವಿಟಾ ಸೇರಿದಂತೆ ಎಲ್ಲಾ ಪಾನೀಯಗಳನ್ನು ‘ಹೆಲ್ತ್ ಡ್ರಿಂಕ್ಸ್’ ವರ್ಗದಿಂದ ತೆಗೆದು ಹಾಕುವಂತೆ ನಿರ್ದೇಶಿಸಿದೆ.

ಎನ್‌ಸಿಪಿಸಿಆರ್‌ನ ತನಿಖೆಯಲ್ಲಿ ಬೋರ್ನ್‌ವಿಟಾದಲ್ಲಿ ನಿಯಮಗಳಿಗಿಂತ ಹೆಚ್ಚು ಸಕ್ಕರೆ ಮಟ್ಟವನ್ನು ಹೊಂದಿದೆ. ಇದು ಸ್ವೀಕಾರಾರ್ಹ ಮಿತಿಗಳಿಗಿಂತ ಹೆಚ್ಚು ಎಂದು ಕಂಡುಹಿಡಿದಿದೆ. ಈ ಹಿಂದೆ, ಸುರಕ್ಷತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಪೂರೈಸಲು ವಿಫಲವಾದ ಮತ್ತು ಪವರ್ ಸಪ್ಲಿಮೆಂಟ್‌ಗಳನ್ನು ‘ಆರೋಗ್ಯ ಪಾನೀಯಗಳು’ ಎಂದು ಬಿಂಬಿಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ‘ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್’ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ಗೆ ಸೂಚಿಸಿತ್ತು.

Advertisements

ಡೈರಿ ಆಧಾರಿತ ಅಥವಾ ಮಾಲ್ಟ್ ಆಧಾರಿತ ಪಾನೀಯಗಳನ್ನು ‘ಆರೋಗ್ಯ ಪಾನೀಯಗಳು’ ಎಂದು ಲೇಬಲ್ ಮಾಡುವುದರ ವಿರುದ್ಧ ಇ-ಕಾಮರ್ಸ್ ಪೋರ್ಟಲ್‌ಗಳಿಗೆ ಸೂಚನೆ ನೀಡಿತ್ತು.

ಯೂಟ್ಯೂಬರ್ ಒಬ್ಬ ತನ್ನ ವೀಡಿಯೊದಲ್ಲಿ ಪೌಡರ್ ಸಪ್ಲಿಮೆಂಟ್ ಕುರಿತು ವಿಡಿಯೋ ಮಾಡಿದಾಗ ಬೋರ್ನ್‌ವಿಟಾದ ‘ಅನಾರೋಗ್ಯಕರ’ ಸ್ವಭಾವದ ಬಗ್ಗೆ ವಿವಾದವು ಮೊದಲು ಹುಟ್ಟಿಕೊಂಡಿತ್ತು. ಆತ ತಾನು ನಡೆಸಿದ ಲ್ಯಾಬ್‌ ಟೆಸ್ಟ್‌ನಲ್ಲಿ ಬೋರ್ನ್ ವಿಟಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಅಂಶ ಇದೆ ಎಂದು ತಿಳಿಸಿದ್ದ. ಅಲ್ಲದೆ, ಅದರಲ್ಲಿರುವ ಅತಿಯಾದ ಸಕ್ಕರೆ, ಕೋಕೋ ಮತ್ತು ಹಾನಿಕಾರಕ ಕೃತಕ ಬಣ್ಣಗಳು ಕ್ಯಾನ್ಸರ್ ಸೇರಿದಂತೆ ಮಕ್ಕಳಲ್ಲಿ ಗಂಭೀರವಾದ ಆರೋಗ್ಯದ ಅಪಾಯಗಳಿಗೆ ಕಾರಣವಾಗಬಹುದು ಎಂದು ಆರೋಪಿಸಿದ್ದನು.

ಇದನ್ನು ಓದಿದ್ದೀರಾ? ದೇವೇಗೌಡರು ನಮ್ಮ ಸರ್ಕಾರದ ಅಸ್ತಿತ್ವಕ್ಕಿಂತ, ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿ ಕೆ ಶಿವಕುಮಾರ್

ಈ ವಿಡಿಯೋ ವ್ಯಾಪಕ ವೈರಲ್ ಆಗಿ ಸಂಸ್ಥೆಯ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯ ಹೆಚ್ಚಾಗಿತ್ತು. ಇದೀಗ ಬೌರ್ನ್‌ವಿಟಾ ಪೇಯವನ್ನು ‘ಆರೋಗ್ಯ ಪಾನೀಯ’ ಪಟ್ಟಿಯಿಂದ ಕೈ ಬಿಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X