ಪರಿಷ್ಕೃತ ನೀಟ್-ಯುಜಿ ಫಲಿತಾಂಶ ಪ್ರಕಟ: ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆ

Date:

Advertisements

ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶುಕ್ರವಾರ ಪರಿಷ್ಕೃತ ನೀಟ್-ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಫಲಿತಾಂಶದಲ್ಲಿ ಟಾಪರ್‌ಗಳ ಸಂಖ್ಯೆಯು 61ರಿಂದ 17ಕ್ಕೆ ಇಳಿಕೆಯಾಗಿದೆ.

ಆರಂಭದಲ್ಲಿ ಟಾಪರ್‌ಗಳೆಂದು ಘೋಷಿಸಲ್ಪಟ್ಟ 67 ಅಭ್ಯರ್ಥಿಗಳಲ್ಲಿ ಒಟ್ಟಾಗಿ 44 ಅಭ್ಯರ್ಥಿಗಳು ಸಂಪೂರ್ಣ ಅಂಕವನ್ನು ಪಡೆದಿದ್ದರು. ನಿರ್ದಿಷ್ಟ ಭೌತಶಾಸ್ತ್ರ ವಿಷಯಕ್ಕೆ ಗ್ರೇಸ್ ಅಂಕ ನೀಡಿದ್ದರಿಂದ ಪೂರ್ಣ ಅಂಕಗಳನ್ನು ಈ ಅಭ್ಯರ್ಥಿಗಳು ಗಳಿಸಿದ್ದರು.

ಬಳಿಕ ಕೆಲವು ಕೇಂದ್ರಗಳಲ್ಲಿ ಸಮಯ ವ್ಯರ್ಥವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕಗಳನ್ನು ಹಿಂಪಡೆಯಲಾಗಿದ್ದು, ಟಾಪರ್‌ಗಳ ಸಂಖ್ಯೆಯು 67ರಿಂದ 61ಕ್ಕೆ ಇಳಿಕೆಯಾಗಿತ್ತು. ಇದೀಗ ಪರಿಷ್ಕೃತ ನೀಟ್-ಯುಜಿ ಫಲಿತಾಂಶ ಪ್ರಕಟವಾದ ಬಳಿಕ ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆಯಾಗಿದೆ.

Advertisements

ಇದನ್ನು ಓದಿದ್ದೀರಾ? ನೀಟ್-ಯುಜಿ ಅಂತಿಮ ಫಲಿತಾಂಶ ಎರಡು ದಿನಗಳಲ್ಲಿ ಪ್ರಕಟ: ಧರ್ಮೇಂದ್ರ ಪ್ರಧಾನ್

ಫಲಿತಾಂಶದ ಪ್ರಕಾರ ಟಾಪ್ ಸ್ಕೋರರ್‌ಗಳು 99.9992714 ಪ್ರತಿಶತದೊಂದಿಗೆ ಪರಿಪೂರ್ಣ 720 ಅಂಕಗಳನ್ನು ಸಾಧಿಸಿದ್ದಾರೆ. ಪ್ರತಿ ಪ್ರಶ್ನೆಗೆ ಒಂದೇ ಒಂದು ನಿಖರವಾದ ಉತ್ತರವನ್ನು ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನಿಂದಾಗಿ ಪರಿಷ್ಕೃತ ಫಲಿತಾಂಶದಲ್ಲಿ ಬದಲಾವಣೆ ಕಂಡುಬಂದಿದೆ.

ಇದರ ಪರಿಣಾಮವಾಗಿ ಈ ಹಿಂದೆ 720ಕ್ಕೆ 715 ಅಂಕ ಪಡೆದಿದ್ದ 44 ವಿದ್ಯಾರ್ಥಿಗಳು 720 ಅಂಕ ಪಡೆದವರ ಮತ್ತು 720ಕ್ಕೆ 716 ಅಂಕ ಪಡೆದ 70 ವಿದ್ಯಾರ್ಥಿಗಳ ನಂತರದ ಸ್ಥಾನವನ್ನು ಪಡೆದಿದ್ದಾರೆ.

ಮೇ 5ರಂದು ನಡೆಸಿದ ನೀಟ್‌-ಯುಜಿ ಪರೀಕ್ಷೆಯು 14 ಅಂತರಾಷ್ಟ್ರೀಯ ಸ್ಥಳಗಳನ್ನು ಒಳಗೊಂಡಂತೆ 571 ನಗರಗಳಲ್ಲಿ 4,750 ಕೇಂದ್ರಗಳಲ್ಲಿ ನಡೆಸಲಾಗಿದೆ. ಆದರೆ ಪರೀಕ್ಷೆಯ ವೇಳೆ ಸಮಯದ ನಿರ್ಬಂಧ ಎದುರಿಸಿದ 1,563 ಅಭ್ಯರ್ಥಿಗಳಿಗೆ ಜೂನ್ 23ರಂದು ಮರು-ಪರೀಕ್ಷೆ ಮಾಡಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X