ಆರ್‌ಜಿ ಕರ್ ಅತ್ಯಾಚಾರ ಪ್ರಕರಣ: ಆರೋಪಿಗೆ ಮರಣ ದಂಡನೆ ಶಿಕ್ಷೆ ಕೋರಿ ಹೈಕೋರ್ಟ್‌ಗೆ ಪಶ್ಚಿಮ ಬಂಗಾಳ ಸರ್ಕಾರ ಅರ್ಜಿ

Date:

Advertisements

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ದೋಷಿಗೆ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರವು ಹೈಕೋರ್ಟ್ ಮೆಟ್ಟಿಲೇರಿದ್ದು, ಆತನಿಗೆ ಮರಣ ದಂಡನೆ ವಿಧಿಸಬೇಕು ಎಂದು ಮನವಿ ಮಾಡಿದೆ.

ಕೋಲ್ಕತ್ತಾ ನಗರ ಪೊಲೀಸ್ ಇಲಾಖೆಗೆ ಸ್ವಯಂ ಸೇವಕನಾಗಿ ಕೆಲಸ ಮಾಡುತ್ತಿದ್ದ ಸಂಜಯ್ ರಾಯ್‌ನನ್ನು ದೋಷಿ ಎಂದು ಘೋಷಿಸಿದ್ದ ಸೆಷನ್ಸ್ ನ್ಯಾಯಾಲಯವು, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಪ್ರಕರಣವು ಅಪರೂಪದಲ್ಲೇ ಅಪರೂಪದ ಪ್ರಕರಣವಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯ ಪಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

Advertisements

ಈ ಪ್ರಕರಣವನ್ನು ತಪ್ಪಾಗಿ ನಿಭಾಯಿಸಲಾಗುತ್ತಿದೆ ಎಂಬ ವಾಗ್ದಾಳಿಗೆ ಗುರಿಯಾಗಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವು, ನ್ಯಾಯಾಲಯದ ಈ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೋಲ್ಕತ್ತಾ ಪೊಲೀಸರು ಈ ಪ್ರಕರಣದಲ್ಲಿ ಮರಣ ದಂಡನೆಯನ್ನು ಖಾತರಿಗೊಳಿಸುತ್ತಿದ್ದರು ಎಂದು ಹೇಳಿದೆ.

ದೋಷಿ ಸಂಜಯ್ ರಾಯ್‌ಗೆ ಮರಣ ದಂಡನೆ ವಿಧಿಸಬೇಕು ಎಂದು ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ ಅವರು ನ್ಯಾ. ದೇಬಾಂಗ್ಶು ಬಸಕ್ ನೇತೃತ್ವದ ವಿಭಾಗೀಯ ನ್ಯಾಯಪೀಠದೆದುರು ಅರ್ಜಿ ಸಲ್ಲಿಸಿದ್ದಾರೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X