6 ತಿಂಗಳು ಕಳೆದರೂ ಆರ್‌ಜಿ ಕರ್ ಸಂತ್ರಸ್ತೆಯ ಪೋಷಕರಿಗೆ ಲಭಿಸಿಲ್ಲ ಮರಣ ಪ್ರಮಾಣಪತ್ರ

Date:

Advertisements

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದು ಆರು ತಿಂಗಳು ಕಳೆದರೂ ಕೂಡಾ ಸಂತ್ರಸ್ತೆಯ ಪೋಷಕರಿಗೆ ಇನ್ನೂ ಕೂಡಾ ಆಕೆಯ ಮರಣ ಪ್ರಮಾಣಪತ್ರದ ಪ್ರತಿ ಲಭಿಸಿಲ್ಲ ಎಂದು ವರದಿಯಾಗಿದೆ.

ಕಳೆದ ವರ್ಷ ಆಗಸ್ಟ್ 9ರಂದು ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಆವರಣದಲ್ಲಿರುವ ಸೆಮಿನಾರ್ ಹಾಲ್‌ನಲ್ಲಿ ಸಂತ್ರಸ್ತೆಯ ಶವ ಪತ್ತೆಯಾಗಿದೆ. ಆದರೆ ಈವರೆಗೂ ಕುಟುಂಬಕ್ಕೆ ಮರಣ ಪ್ರಮಾಣಪತ್ರ ಲಭಿಸಿಲ್ಲ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಆರ್‌ಜಿ ಕರ್ ಅತ್ಯಾಚಾರ ಪ್ರಕರಣ: ಆರೋಪಿಗೆ ಮರಣ ದಂಡನೆ ಶಿಕ್ಷೆ ಕೋರಿ ಹೈಕೋರ್ಟ್‌ಗೆ ಪಶ್ಚಿಮ ಬಂಗಾಳ ಸರ್ಕಾರ ಅರ್ಜಿ

Advertisements

ಆರ್‌ಜಿ ಕರ್ ಮತ್ತು ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಅಧಿಕಾರಿಗಳು ಪರಸ್ಪರ ಜವಾಬ್ದಾರಿಯನ್ನು ವರ್ಗಾಯಿಸುತ್ತಿರುವುದರಿಂದ ಇಲ್ಲಿಯವರೆಗೆ ಮರಣ ಪ್ರಮಾಣಪತ್ರವನ್ನು ಪಡೆಯಲು ಸಾಧ್ಯವಾಗಿಲ್ಲ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.

ಸಾವು ನಡೆದ ಸ್ಥಳ ಆರ್‌ಜಿ ಕರ್ ಆಗಿರುವುದರಿಂದ, ಮರಣ ಪ್ರಮಾಣಪತ್ರವನ್ನು ಒದಗಿಸುವುದು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಕೆಎಂಸಿ ಅಧಿಕಾರಿಗಳು ಹೇಳುತ್ತಿದ್ದಾರೆ. ಮತ್ತೊಂದೆಡೆ, ಆಸ್ಪತ್ರೆ ಆವರಣದೊಳಗೆ ರೋಗಿ ಸತ್ತರೆ ಮರಣ ಪ್ರಮಾಣಪತ್ರವನ್ನು ಕೆಎಂಸಿ ಅಧಿಕಾರಿಗಳು ಒದಗಿಸಬೇಕಾಗುತ್ತದೆ ಎಂದು ಆರ್‌ಜಿ ಕರ್ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಆರ್‌ಜಿ ಕರ್ ​ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಸಂಜಯ್‌ ರಾಯ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

ಆರ್‌ಜಿ ಕರ್‌ಗೆ ಲಗತ್ತಿಸಲಾದ ವೈದ್ಯಕೀಯ ಅಧಿಕಾರಿಯ ಹೇಳಿಕೆಯ ಪ್ರಕಾರ, ಮರಣ ಪ್ರಮಾಣಪತ್ರದ ಪ್ರತಿಯನ್ನು ನ್ಯಾಯಾಲಯದ ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ. ನ್ಯಾಯಾಲಯದ ದಾಖಲೆಗಳಲ್ಲಿ ಮರಣ ಪ್ರಮಾಣಪತ್ರವನ್ನು ಉಲ್ಲೇಖಿಸಿದ್ದರೆ, ನಮಗೆ ಈವರೆಗೂ ಯಾಕೆ ನೀಡಲಾಗಿಲ್ಲ ಎಂದು ಸಂತ್ರಸ್ತೆಯ ಪೋಷಕರು ಪ್ರಶ್ನಿಸಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ಅವರನ್ನು ಅಪರಾಧಿ ಎಂದು ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಫೆಬ್ರವರಿ 24ರಂದು ಈ ಪ್ರಕರಣದ ತನಿಖೆಯ ಕುರಿತು ಹೊಸ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ಸೂಚಿಸಿದೆ.

ವಿಶೇಷ ನ್ಯಾಯಾಲಯವು ಈಗಾಗಲೇ ಅತ್ಯಾಚಾರ ಮತ್ತು ಕೊಲೆಯ ಪ್ರಮುಖ ಅಪರಾಧಿಗೆ ಶಿಕ್ಷೆಯನ್ನು ಘೋಷಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X