ಬದುಕುವ ಹಕ್ಕು ಎಲ್ಲರಿಗೂ ಇದೆ: ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ತಪರಾಕಿ

Date:

Advertisements

ವಿದೇಶಿ ಪ್ರಜೆಗಳನ್ನು ಏಕೆ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿದೆ ಹಾಗೂ ಏಕೆ ಅವರನ್ನು ಆಯಾ ದೇಶಗಳಿಗೆ ಗಡೀಪಾರು ಮಾಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್, ಅಸ್ಸಾಂ ಸರ್ಕಾರಕ್ಕೆ ಆದೇಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯ ವೇಳೆ ರಾಜ್ಯದ ಮುಖ್ಯ ಕಾರ್ಯದರ್ಶಿ ಈ ಸಂಬಂಧ ವಿವರಣೆ ನೀಡಲು ವರ್ಚುವಲ್ ವಿಧಾನದ ಮೂಲಕ ಹಾಜರಾಗುವಂತೆ ಸೂಚಿಸಿದೆ.

ಮೂಲಭೂತ ಹಕ್ಕುಗಳು ಕೇವಲ ಭಾರತೀಯ ಪ್ರಜೆಗಳಿಗೆ ಮಾತ್ರ ಸೀಮಿತವಲ್ಲ; ವಿದೇಶಿಯರು ಸೇರಿದಂತೆ ಎಲ್ಲ ಜನತೆಗೆ ಇರುವಂಥದ್ದು. ಆದ್ದರಿಂದ ಬಂಧನ ಕೇಂದ್ರಗಳಲ್ಲಿರುವವರನ್ನು ಆಯಾ ದೇಶಗಳಿಗೆ ಗಡೀಪಾರು ಮಾಡಲು ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಮೂರ್ತಿ ಅಭಯ್ ಎಸ್.ಓಕಾ ಮತ್ತು ಎನ್.ಕೋಟೀಶ್ವರ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲ್ಕತ್ತಾದ ಭೀಭತ್ಸ ರೇಪ್-ಹತ್ಯೆ ತನಿಖೆಯಲ್ಲಿ ವಿಫಲವಾಯಿತೇ ಸಿಬಿಐ?

Advertisements

ಅಸ್ಸಾಂನ ಬಂಧನ ಕೇಂದ್ರಗಳು/ ತಾತ್ಕಾಲಿಕ ಶಿಬಿರಗಳಲಿ 270 ಮಂದಿಯನ್ನು ಇರಿಸಿರುವ ಬಗೆಗಿನ ಪ್ರಕರಣದ ಬಗ್ಗೆ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.”ಅನುಸರಣಾ ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಆರು ವಾರಗಳ ಕಾಲಾವಕಾಶ ನೀಡಲಾಗಿತ್ತು. ತಾತ್ಕಾಲಿಕ ಶಿಬಿರಗಳಲ್ಲಿ 270 ಮಂದಿ ವಿದೇಶಿ ಪ್ರಜೆಗಳನ್ನು ಇರಿಸಿದ ಬಗ್ಗೆ ಸಕಾರಣಗಳನ್ನು ದಾಖಲೆ ರೂಪದಲ್ಲಿ ನೀಡುವುದನ್ನು ನಾವು ನಿರೀಕ್ಷಿಸಿದ್ದೇವೆ. ಜತೆಗೆ ಅವರನ್ನು ಆಯಾ ದೇಶಗಳಿಗೆ ಗಡೀಪಾರು ಮಾಡಲು ಕೈಗೊಳ್ಳಲಾದ ಕ್ರಮಗಳ ಬಗ್ಗೆಯೂ ವಿವರಣೆ ನೀಡಬೇಕು ಎಂದು ಸೂಚಿಸಿತ್ತು.

“ವಿದೇಶಿಯರು 10 ವರ್ಷಕ್ಕಿಂತಲೂ ಅಧಿಕ ಕಾಲದಿಂದ ಈ ಶಿಬಿರಗಳಲ್ಲಿ ಇದ್ದಾರೆ. ಅವರನ್ನು ಬಂಧನದಲ್ಲಿ ಇರಿಸಿದ ಬಗ್ಗೆ ಅಫಿಡವಿಟ್ ನಲ್ಲಿ ಯಾವ ಸಮರ್ಥನೆಯೂ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರ ಗಡೀಪಾರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ನ್ಯಾಯಾಲಯ ಆದೇಶದ ಸ್ಪಷ್ಟ ಉಲ್ಲಂಘನೆ. ಅನುಸರಣೆ ಮಾಡದ ಬಗ್ಗೆ ವಿವರಣೆ ನೀಡಲು ಮುಂದಿನ ವಿಚಾರಣೆ ದಿನಾಂಕದಂದು ಅಸ್ಸಾಂ ಮುಖ್ಯ ಕಾರ್ಯದರ್ಶಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗುವಂತೆ ನಿರ್ದೇಶಿಸುತ್ತಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X