ಮನೆ, ಶೂಟಿಂಗ್ ಇಷ್ಟೇ ಬದುಕು: ಜೀವ ಬೆದರಿಕೆ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

Date:

Advertisements

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಜೀವ ಬೆದರಿಕೆ ಹೊಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮೊದಲ ಬಾರಿಗೆ ತನ್ನ ಮೌನ ಮುರಿದಿದ್ದಾರೆ. “ಬದುಕು ಈಗ ಮನೆಯಿಂದ ಶೂಟಿಂಗ್, ಶೂಟಿಂಗ್‌ನಿಂದ ಮನೆ ಅಷ್ಟೇ ಆಗಿದೆ. ನಾನು ದೇವರನ್ನು ನಂಬುವವನು. ನನಗೆ ಎಷ್ಟು ಜೀವಿತಾವಧಿ ಬರೆಯಲಾಗಿದೆಯೋ ಅಷ್ಟು ಕಾಲ ಬದುಕುತ್ತೇನೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ಮುಂಬೈನ ಬಾಂದ್ರಾದಲ್ಲಿರುವ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆದಿದೆ. ಹಲವು ಬಾರಿ ಜೀವ ಬೆದರಿಕೆ ಹಾಕಲಾಗಿದೆ. ಅದಾದ ಬಳಿಕ ಸಲ್ಮಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮನೆಯ ಬಾಲ್ಕನಿಯಲ್ಲಿ ಗುಂಡು ತಗುಲದಂತಹ ಗಾಜನ್ನು ಹಾಕಲಾಗಿದೆ.

ಇದನ್ನು ಓದಿದ್ದೀರಾ? ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

Advertisements

ಮುಂಬೈನಲ್ಲಿ ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಲ್ಮಾನ್ ಖಾನ್, “ದೇವರು ಮತ್ತು ಅಲ್ಲಾ ಗಮನಿಸುತ್ತಿದ್ದಾರೆ. ಎಷ್ಟು ಜೀವಿತಾವಧಿ ಇದೆಯೋ ಅಷ್ಟು ಕಾಲ ಬದುಕುತ್ತೇನೆ ಅಷ್ಟೇ” ಎಂದಿದ್ದಾರೆ. ಹಾಗೆಯೇ ತನ್ನ ಭದ್ರತೆ ಬಗ್ಗೆಯೂ ಮಾತನಾಡಿದ್ದಾರೆ. “ಕೆಲವೊಮ್ಮೆ ಇಷ್ಟೊಂದು ಜನರು ಸುತ್ತುವರೆದಿರುವುದು ಸಮಸ್ಯೆ ಅನಿಸುತ್ತದೆ” ಎಂದು ಹೇಳಿದ್ದಾರೆ.

ಬೆದರಿಕೆ ಬಳಿಕ ಸಲ್ಮಾನ್ ಈಗ ತಮ್ಮ ಮನೆ ಮತ್ತು ಶೂಟಿಂಗ್ ಸೆಟ್‌ಗೆ ನಡುವೆ ಮಾತ್ರ ಪ್ರಯಾಣಿಸುತ್ತಿರುವುದಾಗಿ ಹೇಳಿದ್ದಾರೆ. “ನಾನು ಪತ್ರಕರ್ತರೊಂದಿಗೆ ಇದ್ದಾಗ ಯಾವುದೇ ಚಿಂತೆ ಪಡುವುದಿಲ್ಲ. ಪತ್ರಕರ್ತರು ಇಲ್ಲದಾಗ ಕಷ್ಟ ಅನಿಸುತ್ತದೆ” ಎಂದೂ ತಿಳಿಸಿದ್ದಾರೆ.

1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರ ಭಾಗಿಯಾಗಿರುವ ವಿಚಾರದಲ್ಲಿ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಅವರನ್ನು ಗುರಿಯಾಗಿಸಿಕೊಂಡಿದೆ. ಈ ಪ್ರಾಣಿಯನ್ನು ಬಿಷ್ಣೋಯ್ ಸಮುದಾಯವು ಪೂಜಿಸುತ್ತದೆ.

ಮಾರ್ಚ್ 30ರಂದು ಸಲ್ಮಾನ್ ಖಾನ್ ನಟನೆಯ ಸಿಕಂದರ್ ಸಿನಿಮಾ ಬಿಡುಗಡೆಯಾಗಲಿದ್ದು, ಈ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X