ಮುಸ್ಲಿಮರು ಮತ ಹಾಕದಂತೆ ತಡೆಯಲು ಯತ್ನ: ಉತ್ತರ ಪ್ರದೇಶ ಪೊಲೀಸರ ವಿರುದ್ಧ ಗಂಭೀರ ಆರೋಪ

Date:

Advertisements

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಒಟ್ಟು ದೇಶದಾದ್ಯಂತ 94 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆಯು ಮಂಗಳವಾರ ಬೆಳಗ್ಗಿನಿಂದ ಆರಂಭವಾಗಿದೆ. 94 ಕ್ಷೇತ್ರಗಳ ಪೈಕಿ ಗುಜರಾತ್‌ನ ಸೂರತ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ಅಭ್ಯರ್ಥಿಯ ಗೆಲುವನ್ನು ಘೋಷಿಸಲಾಗಿದೆ.

ಉಳಿದಂತೆ ಇಂದು ನಡೆಯುತ್ತಿರುವ 93 ಕ್ಷೇತ್ರಗಳ ಪೈಕಿ ಉತ್ತರ ಪ್ರದೇಶದ 10 ಕ್ಷೇತ್ರಗಳೂ ಕೂಡ ಒಳಗೊಂಡಿದೆ. ಉತ್ತರ ಪ್ರದೇಶದ ಕೆಲವು ಲೋಕಸಭಾ ಕೇತ್ರಗಳಲ್ಲಿರುವ ಮುಸ್ಲಿಂ ಮತದಾರರನ್ನು ಮತದಾನ ಮಾಡದಂತೆ ಪೊಲೀಸರು ತಡೆದಿರುವ ಗಂಭೀರ ಆರೋಪ ಕೇಳಿಬಂದಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾಗಳಲ್ಲಿ ಕೆಲವೊಂದು ವಿಡಿಯೋಗಳು ಹರಿದಾಡಿದ್ದು, ʼನಾವು ಮತ ಹಾಕಲೆಂದು ಮತಗಟ್ಟೆಗೆ ತೆರಳಿದಾಗ ನಮ್ಮನ್ನು ಮತ ಹಾಕದಂತೆ ಪೊಲೀಸರು ಹಾಗೂ ಕೆಲ ಮತಗಟ್ಟೆ ಅಧಿಕಾರಿಗಳು ತಡೆದಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ, ಲಾಠಿ ಏಟು ಕೊಟ್ಟು ಓಡಿಸುತ್ತಿದ್ದಾರೆʼ ಎಂದು ಮುಸ್ಲಿಮ್‌ ಮತದಾರರು ಆರೋಪಿಸಿದ್ದಾರೆ.

Advertisements

ಉತ್ತರ ಪ್ರದೇಶದ ಸಂಭಾಲ್ ಲೋಕಸಭಾ ಕ್ಷೇತ್ರದಲ್ಲಿರುವ ಮತದಾರರು ಈ ಬಗ್ಗೆ ಪೊಲೀಸರ ಮೇಲೆ ಆರೋಪಿಸುತ್ತಿರುವುದಲ್ಲದೇ, ಹೇಳಿಕೆಗಳನ್ನು ಕೂಡ ನೀಡಿದ್ದಾರೆ.

ʼಮತ ಹಾಕಲೆಂದು ಮತಗಟ್ಟೆಗೆ ತಲುಪುವ ಮುನ್ನವೇ ನಮ್ಮ ಕೈಯ್ಯಲ್ಲಿದ್ದ ಆಧಾರ್‌ ಕಾರ್ಡ್‌ಗಳನ್ನು ಕಿತ್ತುಕೊಂಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ, ಹರಿದಿದ್ದಾರೆ ಎಂದು ದೂರಿದ್ದಾರೆ. ಅಲ್ಲದೇ, ಹರಿದಿರುವ ಆಧಾರ್‌ ಕಾರ್ಡ್‌ನ ಪ್ರತಿಗಳನ್ನು ಸ್ಥಳೀಯ ಪತ್ರಕರ್ತರಿಗೆ ತೋರಿಸಿದ್ದಾರೆ.

ಕೆಲವು ಮತಗಟ್ಟೆಗಳಲ್ಲಿ, ʼನಿಮ್ಮ ಆಧಾರ್ ಕಾರ್ಡ್‌ ನಕಲಿ, ನಿಮಗೆ ಮತ ಹಾಕಲು ಆಗುವುದಿಲ್ಲʼ ಎಂದು ಹೇಳಿ ನೂರಾರು ಮುಸ್ಲಿಂ ಮಹಿಳೆಯರನ್ನು ಮತಗಟ್ಟೆ ತಲುಪದಂತೆ ತಡೆಯುತ್ತಿರುವ ಬಗ್ಗೆಯೂ ವರದಿಯಾಗಿದೆ.

ಉತ್ತರ ಪ್ರದೇಶದ ಪತ್ರಕರ್ತ ಸಚಿನ್‌ ಗುಪ್ತಾ, ಪೀಯೂಷ್‌ ರೈ ಎಂಬುವವರು ಕೆಲವೊಂದು ಬೆಳವಣಿಗೆಗಳ ಬಗ್ಗೆ  ವಿಡಿಯೋ ಹಂಚಿಕೊಂಡದ್ದು, “ಮುಸ್ಲಿಂ ಸಮುದಾಯದ ಮತದಾರರ ಆಧಾರ್‌ ಕಾರ್ಡ್‌ ಗಮನಿಸಿ ನಕಲಿ ಎಂದು ಹೇಳಿ, ಮತ ಹಾಕದಂತೆ ಹಿಂದೆ ಕಳುಹಿಸುತ್ತಿರುವ ಬಗ್ಗೆ ವರದಿಗಳು ಬರುತ್ತಿದೆ. ಸಂಭಾಲ್ ಪ್ರದೇಶದಲ್ಲಿ ಪೊಲೀಸರು ಮುಸ್ಲಿಂ ಮತದಾರರ ಗುರುತಿನ ಚೀಟಿ ಹರಿದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ” ಎಂದು ತಿಳಿಸಿದ್ದಾರೆ.

ಪೊಲೀಸರ ಮೇಲೆ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಂಬಂಧಿತ ಮತಗಟ್ಟೆಗಳಿಗೆ ತೆರಳಿರುವ ಐಪಿಎಸ್ ಅಧಿಕಾರಿ ಅನುಕೃತಿ ಶರ್ಮಾ, “ಮತಗಟ್ಟೆ ಸಿಬ್ಬಂದಿಗೆ ಮತದಾರರ ಚೀಟಿ ಪರಿಶೀಲಿಸುವ ಹಕ್ಕು ಇದೆ. ಇದು ಪೊಲೀಸರ ಕೆಲಸವಲ್ಲ. ಮತದಾರರು ಮತಗಟ್ಟೆಗೆ ಹೋಗಲಿ. ಮತ ಹಾಕಲಾಗುತ್ತದೆಯೇ ಅಥವಾ ತಿರಸ್ಕರಿಸಲಾಗುತ್ತದೆಯೇ ಎಂದು ಅವರು ನಿರ್ಧಾರ ಮಾಡುತ್ತಾರೆ” ಎಂದು ಮುಸ್ಲಿಂ ಮತದಾರರನ್ನು ಮತಗಟ್ಟೆಗೆ ತೆರಳದಂತೆ ತಡೆದ ಪೊಲೀಸ್‌ ಸಿಬ್ಬಂದಿಗಳಿಗೆ ತಿಳಿಸಿರುವುದಾಗಿ ವರದಿಯಾಗಿದೆ.

ಸಂಭಾಲ್ ಲೋಕಸಭಾ ಕ್ಷೇತ್ರದಲ್ಲಿ 12 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಯಾಗಿ ಎಸ್‌ಪಿಯಿಂದ ಝಿಯಾವುರ್‌ ರಹ್ಮಾನ್‌ ಬರ್ಕ್‌, ಬಿಜೆಪಿಯಿಂದ ಪರಮೇಶ್ವರ್‌ ಲಾಲ್‌ ಸೈನಿ, ಬಿಎಸ್‌ಪಿಯಿಂದ ಶವೂಲತ್‌ ಅಲಿ ಸ್ಪರ್ಧಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

2019ರ ಲೋಕಸಭಾ ಚುನಾವಣೆಯಲ್ಲಿ ದೇಶದ ಹಿರಿಯ ಸಂಸದ ಎನಿಸಿಕೊಂಡಿದ್ದ ಶಫೀಕುರ್ ರೆಹಮಾನ್ ಬರ್ಕ್ ಅವರು ಜಯ ಗಳಿಸಿದ್ದರು. ಅವರು ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜಯ ಗಳಿಸಿದ್ದರು. 2024ರ ಫೆ.27ರಂದು ಶಫೀಕುರ್ ರೆಹಮಾನ್ ಬರ್ಕ್ ನಿಧನರಾಗಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X