ಅದಾನಿ ಹಿಂಡನ್‌ಬರ್ಗ್ ಪ್ರಕರಣ: ನ. 8ಕ್ಕೆ ಅಂತಿಮ ದಾಖಲೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶ

Date:

Advertisements

ಅದಾನಿ ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸಂಬಂಧಿತ ಎಲ್ಲರೂ ಕೂಡ ಬುಧವಾರದೊಳಗೆ (ನ. 8) ಅಂತಿಮ ದಾಖಲೆಗಳನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದ್ದಾರೆ.

ಅದಾನಿ ಹಿಂಡನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟೂ ಬೇಗ ವಿಚಾರಣೆ ಆರಂಭಿಸುವಂತೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿದಾರರೊಬ್ಬರು ಸಲ್ಲಿಸಿದ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ರಿಜಿಸ್ಟ್ರಾರ್​ಗೆ ಇದನ್ನು ಗಮನಿಸಲು ಹೇಳುವುದಾಗಿ ತಿಳಿಸಿತು. ಹಾಗೆಯೇ, ನಾಳೆ ಇದನ್ನು ಮತ್ತೆ ಪ್ರಸ್ತಾಪಿಸುವಂತೆಯೂ ಅರ್ಜಿದಾರರಿಗೆ ಸೂಚಿಸಿತು.

ಅರ್ಜಿದಾರರ ಪರ ವಾದಿಸಿದ ಪ್ರಶಾಂತ್ ಭೂಷಣ್, ಈ ಪ್ರಕರಣವನ್ನು ಲಿಸ್ಟ್​ಗೆ ಹಾಕಿಸಲು ಅರ್ಜಿದಾರರು ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಸಾಧ್ಯವಾಗಿಲ್ಲ ಆಗಸ್ಟ್ 28ಕ್ಕೆ ವಿಚಾರಣೆ ನಡೆಯಲು ಲಿಸ್ಟ್ ಆಗಿತ್ತಾದರೂ ಅದು ಮುಂದಕ್ಕೆ ಹೋಗಿದೆ. ಈಗ ಮತ್ತೆ ಲಿಸ್ಟ್ ಆಗುತ್ತಿಲ್ಲ. ಆದಷ್ಟೂ ಬೇಗ ಪ್ರಕರಣವು ಲಿಸ್ಟ್ ಆಗಿ, ವಿಚಾರಣೆ ಶುರುವಾಗಲಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಅವರು, ಸರ್ಕಾರ ಈ ಪ್ರಕರಣದಲ್ಲಿ ಎರಡು ಪುಟಗಳ ದಾಖಲೆಯನ್ನು ಸಲ್ಲಿಸಬೇಕಿದೆ ಎಂಬ ವಿಚಾರವನ್ನು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯದಾದ್ಯಂತ ನೀರಾವರಿ ಪಂಪ್‍ಸೆಟ್‍ಗಳಿಗೆ ನಿರಂತರ ಏಳು ಗಂಟೆ ವಿದ್ಯುತ್: ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ನಿರ್ಧಾರ

ಅದಾನಿ ಸಮೂಹದ ಷೇರುಗಳ ಬೆಲೆಯನ್ನು ತಿರುಚಿದ ಆರೋಪಗಳಿಗೆ ಸಂಬಂಧಿಸಿದ ಪಿಐಎಲ್‌ಗಳ ವಿಚಾರಣೆಗೆ ಪಟ್ಟಿ ಮಾಡುವ ವಿಷಯವನ್ನು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಪರಿಶೀಲಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ತಿಳಿಸಿದೆ.

ಜುಲೈ 11 ರಂದು, ಅದಾನಿ ಸಮೂಹದಿಂದ ಷೇರುಗಳ ಬೆಲೆ ತಿರುಚಿದ ಆರೋಪಗಳ ಕುರಿತು ನಡೆಯುತ್ತಿರುವ ತನಿಖೆಯ ಸ್ಥಿತಿಯ ಬಗ್ಗೆ ತಿಳಿಸುವಂತೆ ‘ಸೆಬಿ’ಗೆ ಸುಪ್ರೀಂ ಕೋರ್ಟ್ ಕೇಳಿತ್ತು.

ಸೆಬಿಯಿಂದ ತನಿಖೆಗೆ ಆಗಸ್ಟ್ 14 ರವರೆಗೆ ಕಾಲಾವಕಾಶ ನೀಡಿದ್ದ ನ್ಯಾಯಾಲಯ, ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು ಎಂದು ಹೇಳಿತ್ತು.

ಸೆಬಿ ಈ ಪ್ರಕರಣದಲ್ಲಿ 24 ಅಂಶಗಳನ್ನು ತನಿಖೆ ಮಾಡಿದೆ. ಇದರಲ್ಲಿ 22 ತನಿಖೆಗಳು ಅಂತಿಮಗೊಂಡಿವೆ. ಇನ್ನೆರಡು ತನಿಖೆಯಲ್ಲಿ ಮಧ್ಯಂತರ ವರದಿಗಳು ಸಿದ್ಧವಾಗಿವೆ. ನವೆಂಬರ್ 8ಕ್ಕೆ ದೂರುದಾರರು, ಅದಾನಿ ಪರ ವಕೀಲರು, ಸರ್ಕಾರ ಮತ್ತು ಸೆಬಿ ಎಲ್ಲರೂ ಕೂಡ ಅಂತಿಮ ದಾಖಲೆಗಳನ್ನು ಸುಪ್ರೀಂ ನ್ಯಾಯಪೀಠಕ್ಕೆ ಸಲ್ಲಿಸಬೇಕಾಗುತ್ತದೆ. ಅದಾದ ಬಳಿಕ ಮುಂದಿನ ವಿಚಾರಣೆಗೆ ನ್ಯಾಯಪೀಠ ದಿನ ನಿಗದಿ ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತ – 18 ಮಂದಿ ದುರ್ಮರಣ

ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತಗಳು...

ವರದಕ್ಷಿಣೆ ದೌರ್ಜನ್ಯ | ಯೋಗಿ ರಾಜ್ಯದಲ್ಲಿ ಗರ್ಭಿಣಿಯನ್ನು ಹೊಡೆದು ಕೊಂದ ದುರುಳ ಕುಟುಂಬ

ರಾಮ ರಾಜ್ಯವನ್ನು ನಿರ್ಮಾಣ ಮಾಡುತ್ತೇವೆಂದು ಅಧಿಕಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ...

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆವವರೆಗೂ ಜೈಲಿನಲ್ಲಿರಲು ಸಿದ್ದ: ಸೋನಂ ವಾಂಗ್ಚುಕ್

ಇತ್ತೀಚೆಗೆ ಲಡಾಖ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರ ಹತ್ಯೆಯಾಗಿದೆ. ಆ ಹತ್ಯೆಗಳ ಕುರಿತು...

ಮುಂಬೈ | ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ರಿಯಲ್ ಎಸ್ಟೇಟ್ ಏಜೆಂಟ್ ಬಂಧನ

ಮುಂಬೈನ ಪೂರ್ವ ಅಂಧೇರಿಯ ಚಕಾಲಾ ಬಳಿಯ ವಸತಿ ಕಟ್ಟಡವೊಂದರಲ್ಲಿ ಶನಿವಾರ ಮಧ್ಯಾಹ್ನ...

Download Eedina App Android / iOS

X