ಶರದ್ ಪವಾರ್ ಬಣಕ್ಕೆ ಹೊಸ ಹೆಸರು ಸೂಚಿಸಿದ ಸುಪ್ರೀಂ ಕೋರ್ಟ್

Date:

Advertisements

ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಶರದ್‌ ಪವಾರ್ ನೇತೃತ್ವದ ಎನ್‌ಸಿಪಿ ಅರ್ಜಿಯನ್ನು ವಿಚಾರಣೆಗೊಳಪಡಿಸಲು ಒಪ್ಪಿಗೆ ಸೂಚಿಸಿದೆ. ಇತ್ತೀಚಿಗಷ್ಟೆ ಚುನಾವಣಾ ಆಯೋಗವು ಮಹಾರಾಷ್ಟ್ರದ ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ಎನ್‌ಸಿಪಿ ಎಂದು ಘೋಷಿಸಿತ್ತು.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಕೆ ವಿ ವಿಶ್ವನಾಥನ್ ಅವರಿದ್ದ ಪೀಠವು ಮುಂದಿನ ಆದೇಶ ಬರುವವರೆಗೂ ಚುನವಣಾ ಆಯೋಗ ನೀಡಿದ ಆದೇಶಕ್ಕೆ  ಮಧ್ಯಂತರ ಆದೇಶ ನೀಡಿ ಶರದ್‌ ಪವಾರ್ ಬಣದ ಎನ್‌ಸಿಪಿ ಬಣಕ್ಕೆ ಎನ್‌ಸಿಪಿ ಶರದ್‌ ಚಂದ್ರ ಪವಾರ್ ಎಂದು ಬಳಸಲು ಅನುಮತಿಸಿದೆ.

ಅರ್ಜಿದಾರರು ಪಕ್ಷದ ಚಿಹ್ನೆಯನ್ನು ಪಡೆಯಲು ಚುನಾವಣಾ ಆಯೋಗವನ್ನು ಕೋರಲು ಸೂಚಿಸಿತಲ್ಲದೆ, ಅರ್ಜಿ ಸಲ್ಲಿಸಿದ ಒಂದು ವಾರದೊಳಗಾಗಿ ನೀಡಲಾಗುತ್ತದೆ ಎಂಬುದನ್ನು ತಿಳಿಸಿತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಅಜಿತ್ ಪವಾರ್ ಬಣಕ್ಕೆ ನೋಟಿಸ್ ನೀಡಿತು. ಕೋರ್ಟ್ ಮುಂದಿನ ವಿಚಾರಣೆಯನ್ನು ಮೂರು ವಾರಗಳ ನಂತರದ ಅವಧಿಗೆ ಮುಂದೂಡಿದೆ.

ಅರ್ಜಿದಾರ ಶರದ್‌ ಪವಾರ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ಪಕ್ಷದ ಹೆಸರು ಹಾಗೂ ಚಿಹ್ನೆಯನ್ನು ಬಳಸುವಂತೆ ಕೋರ್ಟ್‌ಗೆ ಮನವಿ ಮಾಡಿದರು.

ಕಳೆದ ವರ್ಷದ ಜುಲೈನಲ್ಲಿ ಅಜಿತ್ ಪವಾರ್ ಹಾಗೂ ಎಂಟು ಇತರ ಶಾಸಕರು ಶರದ್‌ ಪವಾರ್ ಗುಂಪಿನಿಂದ ಬೇರ್ಪಟ್ಟು ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದರು. ಫೆ.15ರಂದು ಅಜಿತ್ ಪವಾರ್‌ ಅವರ ಬಣ ನಿಜವಾದ ಎಂದು ಮಹಾರಾಷ್ಟ್ರ ಸ್ಪೀಕರ್ ಘೋಷಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಿತ್ ಪವಾರ್ ಗುಂಪು ಕೂಡ ಈಗಾಗಲೇ ಕೇವಿಯೇಟ್ ಸಲ್ಲಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X