ರಜೆ ನೀಡಿ ಮೋದಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆದೇಶಿಸಿದ ಗೋವಾ ಸರ್ಕಾರ

Date:

Advertisements

ಪ್ರಧಾನಿ ನರೇಂದ್ರ ಮೋದಿ ಭೇಟಿ ಪ್ರಯುಕ್ತ ಇಂದು(ಫೆ.06) ಗೋವಾ ರಾಜ್ಯ ಸರ್ಕಾರ ದಕ್ಷಿಣ ಗೋವಾದ ಮಾರ್ಗೋವ್‌ ಪ್ರದೇಶಕ್ಕೆ ಅರ್ಧ ದಿನ ರಜೆ ಘೋಷಿಸಿದೆ. ಕಳೆದ ವಾರವೇ ಮಾರ್ಗೋವ್‌ ಪ್ರದೇಶದಲ್ಲಿ ಶಾಲೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಲಾಗಿತ್ತು.

ಕಾಲೇಜುಗಳ ವಿದ್ಯಾರ್ಥಿಗಳನ್ನು ಮೋದಿ ಭಾಷಣ ಕಾರ್ಯಕ್ರಮಕ್ಕೆ ಕಳಿಸುವಂತೆ ಮನವಿ ಕೂಡ ಮಾಡಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

“ಫೆ.6ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಮಾರ್ಗೋವ್‌ ಪ್ರದೇಶದ ಕಾಲೇಜುಗಳನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಚ್ಚಲಾಗುವುದು. ಈ ಸಂಬಂಧ, ಆಯಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಪ್ರಧಾನಿ ಮಂತ್ರಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಳಿಸುವಂತೆ ಪ್ರಾಂಶುಪಾಲರಿಗೆ ಕೋರಲಾಗಿದೆ”ಎಂದು ಗೋವಾದ ಉನ್ನತ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಸರ್ಕಾರದ ಈ ನಡೆಯನ್ನು ಟೀಕಿಸಿರುವ ಕಾಂಗ್ರೆಸ್‌ನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ನೌಶಾದ್ ಚೌಧರಿ, “ ನಾವು ಉನ್ನತ ಶಿಕ್ಷಣ ಇಲಾಖೆಯ ಆದೇಶವನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದೆವು. ಇದು ಸರ್ಕಾರಿ ಆಡಳಿತದ ದುರುಪಯೋಪವಾಗಿದೆ. ಸರ್ಕಾರವು ಕಡ್ಡಾಯವಾಗಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದೆ. ವಿದ್ಯಾರ್ಥಿಗಳು ಹಾಜರಾಗಲು ಸ್ವಾಗತ, ಆದರೆ ಯಾವುದೇ ಒತ್ತಾಯವಿರಬಾರದು” ಎಂದಿದ್ದಾರೆ.

ಮಾರ್ಗೋವಾದಲ್ಲಿನ ಮೋದಿ ಸಾರ್ವಜನಿಕ ಭೇಟಿಗೆ ಮೂರು ಹಳೆಯ ಮರಗಳನ್ನು ಕಡಿದಿರುವುದಕ್ಕೆ ಸ್ಥಳೀಯರಿಂದಲೂ ಆಕ್ರೋಶ ವ್ಯಕ್ತವಾಗಿದೆ. ಹಲವಾರು ದಶಕಗಳಿಂದ ಈ ಮರಗಳಿದ್ದವು.ಬಸ್‌ ನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ಜಾಗವನ್ನು ವಿಸ್ತಾರಗೊಳಿಸುವ ಸಲುವಾಗಿ ಮರಗಳನ್ನು ಕಡಿಯಲಾಗಿದೆ ಎಂದು ಸ್ಥಳೀಯರು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X