ಝೀ ಸಂಸ್ಥೆಯ ಸುಭಾಷ್ ಚಂದ್ರ, ಪುತ್ರನ ವಿರುದ್ಧ ತುರ್ತು ಕ್ರಮ ಜರುಗಿಸಲು ಸೆಬಿ ಸೂಚನೆ

Date:

Advertisements

ನಿರ್ವಹಣೆ, ಹೂಡಿಕೆದಾರರು ಮತ್ತು ಇತರ ಮಧ್ಯಸ್ಥಿಕೆದಾರರನ್ನು ರಕ್ಷಿಸಲು ಬಂಡವಾಳ ತಿರುವು ಪ್ರಕರಣದಲ್ಲಿ ಭಾಗಿಯಾಗಿರುವ ಝೀ ಸಂಸ್ಥೆಯ ಮುಖ್ಯಸ್ಥ ಸುಭಾಷ್ ಚಂದ್ರ, ಪುತ್ರನ ವಿರುದ್ಧ ತುರ್ತು ಕ್ರಮ ಜರುಗಿಸುವಂತೆ ಮಾರುಕಟ್ಟೆ ನಿಯಂತ್ರಕ ಸೆಬಿ, ಷೇರು ಭದ್ರತೆಗಳು ಹಾಗೂ ಮೇಲ್ಮನವಿ ಮಂಡಳಿ (ಎಸ್‌ಎಟಿ)ಗೆ ನೀಡಿದ ಉತ್ತರದಲ್ಲಿ ತಿಳಿಸಿದೆ.

ಝೀ ಸಂಸ್ಥೆಯ ಅಧ್ಯಕ್ಷ ಸುಭಾಷ್ ಚಂದ್ರ ಮತ್ತು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸುಭಾಷ್ ಚಂದ್ರ ಅವರ ಪುತ್ರ ಪುನಿತ್ ಗೋಯೆಂಕಾ ಅವರ ಅರ್ಜಿಗಳನ್ನು ವಿಲೇವಾರಿ ಮಾಡಿದ ಸೆಬಿ ತನ್ನ ಅಫಿಡವಿಟ್‌ನಲ್ಲಿ ಎಸ್‌ಎಟಿಗೆ ಉತ್ತರ ನೀಡಿದೆ.

ಜುಲೈ 6, 2022 ರಂದು ಸಲ್ಲಿಸಿದ ಶೋಕಾಸ್ ನೋಟಿಸ್‌ನಲ್ಲಿ ಯಾವುದೇ ತುರ್ತು ಕ್ರಮ ಇರಲಿಲ್ಲ ಎಂಬ ವಿಷಯವು ಸಂಪೂರ್ಣ ತಪ್ಪು ಮತ್ತು ತಪ್ಪುದಾರಿಗೆಳೆಯುವಂತಿದೆ. ನಿಯಮ ಉಲ್ಲಂಘನೆ ಮಾತ್ರವಲ್ಲದೆ ಅನೇಕ ಸುಳ್ಳು ಮಾಹಿತಿ ಮತ್ತು ತಪ್ಪುಗಳನ್ನು ಮುಚ್ಚಿಹಾಕಲು ಝೀ ಸಂಸ್ಥೆಯು ಅನೇಕ ಹೇಳಿಕೆಗಳನ್ನು ನೀಡಿದೆ” ಎಂದು ಸೆಬಿ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಗೀತಾ ಪ್ರೆಸ್‍ಗೆ ಗಾಂಧಿ ಶಾಂತಿ ಪ್ರಶಸ್ತಿ ನೀಡುವುದು ಗೋಡ್ಸೆ, ಸಾವರ್ಕರ್‌ಗೆ ಪ್ರಶಸ್ತಿ ನೀಡಿದಂತೆ: ಕಾಂಗ್ರೆಸ್ ಟೀಕೆ

ತಕ್ಷಣಕ್ಕೆ, ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅವರು ಅನೇಕ ವಿಭಿನ್ನ ಯೋಜನೆಗಳು ಮತ್ತು ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದು, ಈ ಮೂಲಕ ಪಟ್ಟಿ ಮಾಡಲಾದ ಕಂಪನಿಗಳಿಗೆ ಸಾರ್ವಜನಿಕ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ ಎಂದು ಸೆಬಿ ಹೇಳಿದೆ.

ಅವರು ವಿವಿಧ ಯೋಜನೆಗಳು ಮತ್ತು ವಹಿವಾಟುಗಳಲ್ಲಿ ಭಾಗಿಯಾಗಿರುವ ಎಲ್ಲ ಮಾಹಿತಿ ನಮಗೆ ಲಭ್ಯವಾಗಿದೆ. ಈ ಮೂಲಕ ಪಟ್ಟಿ ಮಾಡಿದ ಕಂಪನಿಗಳಿಗೆ ಸೇರಿದ ಅಪಾರ ಪ್ರಮಾಣದ ಸಾರ್ವಜನಿಕ ಹಣವನ್ನು ಈ ವ್ಯಕ್ತಿಗಳ ಒಡೆತನದ ಮತ್ತು ಅವರ ನಿಯಂತ್ರಣದ ಖಾಸಗಿ ಘಟಕಗಳಿಗೆ ತಿರುಗಿಸಲಾಗಿದೆ ಎಂದು ಸೆಬಿ ಎಸ್‌ಎಟಿಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.

ಜೂನ್ 15 ರಂದು, ಸೆಬಿಯ ಸಲ್ಲಿಕೆಗೆ ಜೂನ್ 19 ರಂದು ಅಥವಾ ಅದಕ್ಕೂ ಮೊದಲು ಪ್ರತಿಕ್ರಿಯಿಸುವಂತೆ ಎಸ್‌ಎಟಿ ಅವರಿಗೆ ನಿರ್ದೇಶಿಸಿತ್ತು. ನ್ಯಾಯಮಂಡಳಿಯು ಅಂತಿಮ ವಿಲೇವಾರಿಗೆ ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತದೆ. ಎಸ್ಸೆಲ್ ಗ್ರೂಪ್ ಅಧ್ಯಕ್ಷ ಸುಭಾಷ್ ಚಂದ್ರ ಮತ್ತು ಝೀ ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ ಎಂಡಿ ಮತ್ತು ಸಿಇಒ ಪುನಿತ್ ಗೋಯೆಂಕಾ ಅವರು ಸೆಬಿ ಆದೇಶಕ್ಕೆ ತಡೆ ಕೋರಿ ಎಸ್‌ಎಟಿಗೆ ಮನವಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X