ಅದಾನಿ- ಹಿಂಡನ್‌ಬರ್ಗ್ ಪ್ರಕರಣ | ಸೆಬಿಗೆ ಹೆಚ್ಚುವರಿ ಆರು ತಿಂಗಳು ನೀಡದ ಸುಪ್ರೀಂ ಕೋರ್ಟ್‌

Date:

  • ಅದಾನಿ- ಹಿಂಡನ್‌ಬರ್ಗ್ ಪ್ರಕರಣ ತನಿಖೆಗೆ ಹೆಚ್ಚುವರಿ ಕಾಲಾವಕಾಶವಿಲ್ಲ
  • ಆಗಸ್ಟ್‌ವರೆಗೆ ಸಮಯಾವಕಾಶ ನೀಡಬಹುದು ಎಂದ ಸುಪ್ರೀಂಕೋರ್ಟ್‌

ಹಣಕಾಸು ದುರ್ವ್ಯವಹಾರಗಳಿಗೆ ಸಂಬಂಧಿಸಿ ಅದಾನಿ- ಹಿಂಡನ್‌ಬರ್ಗ್ ಪ್ರಕರಣದ ತನಿಖೆಗೆ ಭಾರತೀಯ ಷೇರು ವಿನಿಮಯ ಮಂಡಳಿ ಅಥವಾ ಸೆಕ್ಯುರಿಟೀಸ್ ಆಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾಗೆ (ಸೆಬಿ) ಹೆಚ್ಚುವರಿ ಆರು ತಿಂಗಳ ಕಾಲಾವಕಾಶ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

- Advertisement -

“ಈ ಹೊತ್ತಿನಲ್ಲಿ ಆರು ತಿಂಗಳ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಮಾಡುವ ಕೆಲಸದಲ್ಲಿ ಚುರುಕುತನ ಇರಬೇಕು. ತಂಡವನ್ನು ರಚಿಸಿ. ಆಗಸ್ಟ್ ಮಧ್ಯಭಾಗದವರೆಗೂ ಸಮಯ ಕೊಡಬಹುದು. ಅದರೊಳಗೆ ವರದಿ ಸಲ್ಲಿಸಿ. ಆರು ತಿಂಗಳನ್ನು ಕನಿಷ್ಠ ಸಮಯವಾಗಿ ನೀಡಲು ಸಾಧ್ಯವಿಲ್ಲ. ಸೆಬಿ ಅನಿರ್ದಿಷ್ಟಾವಧಿ ಧೀರ್ಘ ಸಮಯ ತೆಗೆದುಕೊಳ್ಳಬಾರದು ಮತ್ತು ಅವರಿಗೆ 3 ತಿಂಗಳು ಕೊಡಬಹುದು” ಎಂದು ಭಾರತೀಯ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ನ್ಯಾಯಾಲಯದ ನೋಂದಣಿ ಪ್ರಾಧಿಕಾರವು ಸುಪ್ರೀಂ ಕೋರ್ಟ್ ನೇಮಿಸಿದ ನ್ಯಾಯಮೂರ್ತಿ (ನಿವೃತ್ತ) ಎ ಎಂ ಸಪ್ರೆ ಸಮಿತಿಯಿಂದ ವರದಿಯನ್ನು ಪಡೆದುಕೊಂಡಿರುವುದನ್ನು ವಿಚಾರಣೆ ಸಂದರ್ಭ ದೃಢಪಡಿಸಿದೆ. ಸಮಿತಿಯ ವರದಿ ಪರಿಗಣಿಸಿದ ನಂತರ, ತನಿಖೆಗೆ ಅವಧಿ ವಿಸ್ತರಣೆ ಕೋರಿದ ಅರ್ಜಿ ಬಗ್ಗೆ ಮೇ 15ರಂದು ತೀರ್ಮಾನ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.  

ಅದಾನಿ ಸಮೂಹದ ಮೇಲಿನ ಹಣಕಾಸು ದುರ್ವ್ಯವಹಾರಗಳ ಆರೋಪದ ತನಿಖೆ ನಡೆಸಲು ಆರು ತಿಂಗಳ ಕಾಲ ಅವಧಿಯನ್ನು ವಿಸ್ತರಿಸಬೇಕು ಎಂದು ಸೆಬಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲ ಅವರಿದ್ದ ನ್ಯಾಯ ಪೀಠವು ಶುಕ್ರವಾರ ವಿಚಾರಣೆ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ)...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...