ಸುದ್ದಿ ವಾಹಿನಿಗಳ ಸ್ವಯಂ ನಿಯಂತ್ರಣವನ್ನು ಬಿಗಿಗೊಳಿಸಬೇಕು: ಸುಪ್ರೀಂ ಕೋರ್ಟ್‌

Date:

Advertisements

ಟಿವಿ ಸುದ್ದಿ ವಾಹಿನಿಗಳ ಸ್ವಯಂ-ನಿಯಂತ್ರಣ ಮತ್ತು ಮೇಲ್ವಿಚಾರಣೆಯ ಕಾರ್ಯವಿಧಾನವನ್ನು ಮತ್ತಷ್ಟು ‘ಬಿಗಿಗೊಳಿಸಬೇಕು’ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಅದಕ್ಕಾಗಿ, ಹೊಸ ಮಾರ್ಗಸೂಚಿಗಳನ್ನು ಸಿದ್ದಪಡಿಸಲು ನ್ಯೂಸ್ ಬ್ರಾಡ್‌ಕಾಸ್ಟರ್‌ ಅಂಡ್ ಡಿಜಿಟಲ್ ಅಸೋಸಿಯೇಷನ್‌ಗೆ (ಎನ್‌ಬಿಡಿಎ) ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಟಿವಿ ಚಾನೆಲ್‌ಗಳ ಸ್ವಯಂ ನಿಯಂತ್ರಣದ ಕುರಿತು ಅವಲೋಕನ ಮಾಡಬೇಕೆಂದು ಮಹಾರಾಷ್ಟ್ರ ಬಾಂಬೆ ಹೈಕೋರ್ಟ್‌ ಹೇಳಿತ್ತು. ಆ ಆದೇಶದ ವಿರುದ್ಧ ಎನ್‌ಬಿಡಿಎ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ.

ವಿಚಾರಣೆ ವೇಳೆ, ಹೊಸ ಮಾರ್ಗಸೂಚಿಗಳನ್ನು ರೂಪಿಸಲು ಎನ್‌ಬಿಡಿಎ ತನ್ನ ಮಾಜಿ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿಗಳಾದ ಎ.ಕೆ ಸಿಕ್ರಿ ಮತ್ತು ಆರ್.ವಿ ರವೀಂದ್ರನ್ ಅವರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂಬ ಎನ್‌ಬಿಡಿಎ ಹೇಳಿಕೆಯನ್ನು ಗಮನಿಸಿದೆ.

Advertisements

ಎಕೆ ಸಿಕ್ರಿ ಮತ್ತು ಆರ್‌ವಿ ರವೀಂದ್ರನ್ ಅವರೊಂದಿಗೆ ಎನ್‌ಬಿಡಿಎ ನಡೆಸಿದ ಸಭೆಗಳ ಬಗ್ಗೆ ಎನ್‌ಬಿಡಿಎ ಪರ ವಾದ ಮಂಡಿಸಿದ ವಕೀಲ ಅರವಿಂದ್ ದಾತರ್, “ಸಂಪೂರ್ಣ ಮಾರ್ಗಸೂಚಿಗಳನ್ನು ಮರುಪರಿಶೀಲಿಸಲಾಗುತ್ತಿದೆ” ಎಂದು ಹೇಳಿದರು.

ನಿಯಮಗಳ ಅಡಿಯಲ್ಲಿ ನೋಂದಾಯಿಸಲು ಎನ್‌ಬಿಡಿಎ ವಿಫಲವಾದ ಬಗ್ಗೆ ಕೇಂದ್ರವು ನ್ಯಾಯಾಲಯದಲ್ಲಿ ಗಮನಸೆಳೆದಿತ್ತು. ಹೀಗಾಗಿ, ನ್ಯೂಸ್ ಬ್ರಾಡ್‌ಕಾಸ್ಟರ್ ಫೆಡರೇಶನ್ ಆಫ್ ಇಂಡಿಯಾ (ಎನ್‌ಬಿಎಫ್‌ಐ) ಪರವಾಗಿ ಹಾಜರಾದ ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ, “2022ರ ನಿಯಮಗಳ ಪ್ರಕಾರ ಕೇಂದ್ರದಲ್ಲಿ ನೋಂದಾಯಿಸಲಾದ ಏಕೈಕ ನಿಯಂತ್ರಣ ಸಂಸ್ಥೆ ಎನ್‌ಬಿಡಿಎ” ಎಂದು ಹೇಳಿದರು.

ವಾದವನ್ನು ಆಲಿಸಿದ ನ್ಯಾಯಾಲಯ, ಪೂರ್ಣ ಪ್ರಮಾಣದ ಹೊಸ ಮಾರ್ಗಸೂಚಿಗಳನ್ನು ರಚಿಸಲು ನಾಲ್ಕು ವಾರಗಳ ಅವಕಾಶ ನೀಡಿದ್ದು, ವಿಚಾರಣೆಯಲ್ಲಿ ಮುಂದೂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X