ಕೋವಿಡ್‌ ವೇಳೆ ಬಿಜೆಪಿಗೆ ₹52 ಕೋಟಿ ನೀಡಿದ್ದ ಸೀರಮ್ ಇನ್‌ಸ್ಟಿಟ್ಯೂಟ್ ಸಿಇಒ ಅದಾರ್‌ ಪೂನಾವಾಲ: ವರದಿ

Date:

Advertisements

ಮೊದಲ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ‘ಕೋವಿಶೀಲ್ಡ್ ಲಸಿಕೆ’ಯನ್ನು ಬಿಡುಗಡೆ ಮಾಡಿದ್ದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಅದಾರ್‌ ಪೂನಾವಾಲ ಅವರು ಬಿಜೆಪಿಗೆ ಎಲೆಕ್ಟೋರಲ್ ಬಾಂಡ್‌ನ ಮೂಲಕ ಸುಮಾರು ₹52 ಕೋಟಿ ನೀಡಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ವರದಿ ಪ್ರಕಟಿಸಿರುವ ರಾಯಿಟರ್ಸ್ ಸುದ್ದಿ ಸಂಸ್ಥೆ ಪ್ರಕಾರ, ಈ ಭಾರೀ ಮೊತ್ತದ ಹಣವನ್ನು ಬಿಜೆಪಿಗೆ ದೇಣಿಗೆ ರೂಪದಲ್ಲಿ ನೀಡಲಾಗಿದೆ. 2022ರ ಆಗಸ್ಟ್‌ನ ಒಂದೇ ತಿಂಗಳಲ್ಲಿ ಈ ಗಮನಾರ್ಹ ದೇಣಿಗೆ ನೀಡಿದೆ ಎಂದು ವರದಿಯಾಗಿದೆ. 48 ಗಂಟೆಗಳಲ್ಲಿ 50 ಕೋಟಿ ದೇಣಿಗೆ ನೀಡಿದ್ದರೆ, ಉಳಿದ ಎರಡು ಕೋಟಿ ಮೊತ್ತವನ್ನು ಮುಂದಿನ 15 ದಿನಗಳ ಅವಧಿಯಲ್ಲಿ ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಪ್ರುಡೆಂಟ್ ಎಲೆಕ್ಟೋರಲ್ ಟ್ರಸ್ಟ್ ಕಮಿಷನ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವರದಿಗಳನ್ನು ಪರಿಶೀಲಿಸಿದ ನಂತರ ಈ ಮಾಹಿತಿಯನ್ನು ರಾಯಿಟರ್ಸ್ ಬಹಿರಂಗಪಡಿಸಿದೆ.

“ಆಗಸ್ಟ್ 2022 ರಲ್ಲಿ, ಔಷಧೀಯ ಕಂಪನಿಯಾದ ಸೀರಮ್ ಮೂರು ಕಂತುಗಳಲ್ಲಿ ಒಟ್ಟು 52.5 ಕೋಟಿಯನ್ನು ಪುಡೆಂಟ್ ಟ್ರಸ್ಟ್‌ಗೆ ವರ್ಗಾಯಿಸಿತ್ತು. ಆಗಸ್ಟ್ 1 ರಂದು 40 ಕೋಟಿ, ಆಗಸ್ಟ್ 2ರಂದು 10 ಕೋಟಿ ಮತ್ತು ಆಗಸ್ಟ್ 17 ರಂದು 2.5 ಕೋಟಿಯಷ್ಟು ಮೊತ್ತವನ್ನು ಪುಡೆಂಟ್ ಟ್ರಸ್ಟ್ ಮುಖಾಂತರ ಬಿಜೆಪಿಗೆ ದೇಣಿಗೆ ರೂಪದಲ್ಲಿ ವರ್ಗಾಯಿಸಿತ್ತು” ಎಂದು ತಿಳಿಸಿದೆ.

Advertisements

ಕೋವಿಡ್‌ನ ಸಂದರ್ಭದಲ್ಲಿ ಲಸಿಕೆ ತಯಾರಿಸುವಂತೆ ಸೀರಮ್ ಇನ್‌ಸ್ಟಿಟ್ಯೂಟ್‌ಗೆ ಕೇಂದ್ರ ಸರ್ಕಾರವು ಏಕಸ್ವಾಮ್ಯ ಹಕ್ಕು ನೀಡಿತ್ತು. ಯಾವುದೇ ಇತರ ಕಂಪನಿ ಅಥವಾ ಸರ್ಕಾರಿ ಸಂಸ್ಥೆಗಳಿಗೆ ಲಸಿಕೆಗಳನ್ನು ತಯಾರಿಸಲು ಅನುಮತಿಸಿರಲಿಲ್ಲ. ಇದಕ್ಕೆ ಪ್ರತಿಯಾಗಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಕೂಡ ಬಿಜೆಪಿಗೆ ₹52 ಕೋಟಿ ದೇಣಿಗೆ ನೀಡಿರುವುದಾಗಿ ತಿಳಿದುಬಂದಿದೆ.

2011 ರಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್‌ನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಅದಾರ್ ಪೂನಾವಾಲ್ಲಾ ಅವರು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಹೆಚ್ಚು ಸುದ್ದಿಯಲ್ಲಿದ್ದರು. ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿದ್ದ ಸೀರಮ್ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸಿದರು. ಇದನ್ನು ಕೇಂದ್ರ ಸರ್ಕಾರವು ಲಕ್ಷಾಂತರ ಜನರಿಗೆ ವಿತರಿಸಿತ್ತು.

ಚುನಾವಣಾ ಬಾಂಡ್

ಫೆಬ್ರವರಿ 15ರಂದು ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್​ ಐತಿಹಾಸಿಕ ತೀರ್ಪು ನೀಡಿತ್ತು. ಮಾರ್ಚ್ 13ರೊಳಗೆ ದೇಣಿಗೆಯ ವಿವರಗಳನ್ನು ಸಾರ್ವಜನಿಕಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. 2017ರಲ್ಲಿ ನರೇಂದ್ರ ಮೋದಿ ಸರ್ಕಾರ ತಂದಿದ್ದ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಲಾಗಿದೆ.

ಸುಪ್ರೀಂ ಕೋರ್ಟ್​ ಚಾಟಿ ಬಳಿಕ ಎಚ್ಚೆತ್ತುಕೊಂಡ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಭಾರತೀಯ ಚುನಾವಣಾ ಆಯೋಗಕ್ಕೆ ಎಲ್ಲ ಚುನಾವಣಾ ಬಾಂಡ್​ಗಳ ಡೇಟಾವನ್ನು ಸಲ್ಲಿಸಿದೆ. ಭಾರತೀಯ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಮಾರ್ಚ್ 15ರಂದು ಸಾರ್ವಜನಿಕರಿಗಾಗಿ ಪ್ರಕಟಿಸುವ ನಿರೀಕ್ಷೆ ಇದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X