ಜೈಪುರ | ಹಿಂದೂ ಗುರುಗಳು ನೀಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚು: ಮೋಹನ್‌ ಭಾಗವತ್‌

Date:

  • ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮದಲ್ಲಿ ಹೇಳಿಕೆ
  • ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಗುರುಗಳ ಉಲ್ಲೇಖ

ಜಗತ್ತಿನಾದ್ಯಂತ ಆಚರಿಸುವ ಗುಡ್‌ ಫ್ರೈಡೇ (ಶುಭ ಶುಕ್ರವಾರ) ದಿನವೇ ಕ್ರೈಸ್ತ್ರ ಮಿಷನರಿಗಳ ಕುರಿತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಗಂಭೀರ ಹೇಳಿಕೆ ನೀಡಿದ್ದಾರೆ. ಮಿಷನರಿಗಳಿಗಿಂತಲೂ ಹಿಂದೂ ಗುರುಗಳು ಹೆಚ್ಚಿನ ಸೇವೆ ನೀಡಿದ್ದಾರೆ ಎಂಬುದು ಅವರ ಅಭಿಪ್ರಾಯವಾಗಿದೆ.

ಆರ್‌ಎಸ್‌ಎಸ್ ವತಿಯಿಂದ ಜೈಪುರದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದಾರೆ.

“ದೇಶದ ಬುದ್ಧಿಜೀವಿಗಳು ಮಿಷನರಿಗಳನ್ನು ಅವುಗಳ ಸೇವೆಗಾಗಿ ಗುರುತಿಸುತ್ತಾರೆ. ಆದರೆ, ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ಹಿಂದೂ ಆಧ್ಯಾತ್ಮಿಕ ಗುರುಗಳು, ಮಿಷನರಿಗಳು ನೀಡಿರುವುದಕ್ಕಿಂತಲೂ ಹೆಚ್ಚಿನ ಸೇವೆ ನೀಡಿದ್ದಾರೆ” ಎಂದು ಮೋಹನ್‌ ಭಾಗವತ್ ಪ್ರತಿಪಾದಿಸಿದ್ದಾರೆ.

“ಚೆನ್ನೈನಲ್ಲಿ ಹಿಂದೂ ಸೇವಾ ಮೇಳ ಆಯೋಜಿಸಿದ್ದ ವೇಳೆ ಕನ್ನಡ, ತೆಲುಗು, ಮಲಯಾಳಂ, ತಮಿಳು ಭಾಷೆ ಮಾತನಾಡುವ ಪ್ರಾಂತ್ಯಗಳ ಹಿಂದೂ ಮುನಿಗಳು, ಆಚಾರ್ಯರು, ಸನ್ಯಾಸಿಗಳ ಸಮಾಜ ಸೇವೆ ಮಿಷನರಿಗಳಿಂತ ಹಲವು ಪಟ್ಟು ಹೆಚ್ಚಿದೆ ಎಂಬುದು ತಿಳಿದು ಬಂದಿದೆ” ಎಂದಿದ್ದಾರೆ.

“ಆದರೆ, ಅವರು ಹೆಚ್ಚು, ಇವರು ಹೆಚ್ಚು ಎಂದು ನಾನು ಯಾವುದೇ ಸ್ಪರ್ಧೆಯ ಬಗ್ಗೆ ಮಾತನಾಡುತ್ತಿಲ್ಲ. ಇದು ಸೇವೆಯ ಅಳತೆಗೋಲಾಗದು. ಸೇವೆ ಎಂಬುದು ಸೇವೆ. ಸೇವೆ ಯಾವುದೇ ಸ್ಪರ್ಧೆಯ ವಿಷಯವಲ್ಲ. ಸೇವೆ ಎಂಬುದು ಮನುಷ್ಯನ ನೈಸರ್ಗಿಕ ಭಾವನೆಯಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣದಲ್ಲಿ ಮೋದಿ : ಕಾರ್ಯಕ್ರಮದಿಂದ ದೂರ ಉಳಿದ ಕೆಸಿಆರ್‌

“ಸೇವೆಗಳ ಬಗ್ಗೆ ಮಾತನಾಡುವಾಗ, ಸಾಮಾನ್ಯ ಜನರು ಪ್ರಪಂಚದಾದ್ಯಂತ ಶಾಲೆಗಳು ಮತ್ತು ಅನೇಕ ಸಂಸ್ಥೆಗಳನ್ನು ನಡೆಸುವ ಮಿಷನರಿಗಳ ಹೆಸರನ್ನು ಉಲ್ಲೇಖಿಸುತ್ತಾರೆ. ಆದರೆ, ಹಿಂದೂ ಸಂತರು ಸಲ್ಲಿಸಿದ ಸೇವೆ ಕಡಿಮೆಯೇನಿಲ್ಲ” ಎಂದಿದ್ದಾರೆ.

“ಸೇವೆಗೆ ಯಾವುದೇ ಅಳತೆ ಇರಬಾರದು, ಇದು ಸ್ಪರ್ಧೆಯ ವಿಷಯವಲ್ಲ. ಇದು ಮನುಷ್ಯನ ಸಹಜ ಅಭಿವ್ಯಕ್ತಿಯಾಗಿದೆ. ಭಾರತವು ಬೆಳೆಯಬೇಕಾದರೆ ಭಾರತದ ಪ್ರತಿಯೊಬ್ಬ ವ್ಯಕ್ತಿಯೂ ನಗುಮೊಗದಿಂದ ಸೇವೆ ಸಲ್ಲಿಸಲು ತನ್ನನ್ನು ತಾನು ತೊಡಗಿಸಿಕೊಳ್ಳಬೇಕು” ಎಂದು ಸಲಹೆ ನೀಡಿದ್ದಾರೆ.

ಕ್ರೈಸ್ತರನ್ನು ಗುರಿಯಾಗಿಸಿ ಅವರ ಮೇಲೆ ಪದೇಪದೆ ದಾಳಿ ಮಾಡುವ ಸಂಘ ಪರಿವಾರವು, ಈಗ ಅವರ ಮಿಷನರಿಗಳ ವಿಷಯದ ಕುರಿತು ಚರ್ಚೆ ಹುಟ್ಟುಹಾಕಿದೆ. ಬಿಜೆಪಿ ಅಧಿಕಾರದಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಜಗತ್ತಿನಾದ್ಯಂತ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಾರ್ವಜನಿಕ ಸೇವೆ ನೀಡುತ್ತಿರುವ ಕ್ರೈಸ್ತ ಮಿಷನರಿಗಳ ಸೇವೆಯ ಕುರಿತು ಭಾಗವತ್ ಹೇಳಿಕೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರೊ. ಅರ್ನಾಲ್ಡ್ ಡಿಕ್ಸ್ : ಉತ್ತರಾಖಂಡ ಸುರಂಗ ರಕ್ಷಣಾ ಕಾರ್ಯಾಚರಣೆಯ ಹಿಂದಿನ ಶಕ್ತಿ

ಉತ್ತರಾಖಂಡನ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು...

ತೆಲಂಗಾಣ ಚುನಾವಣೆ | ಬೆಳಗ್ಗೆ 11ರವರೆಗೆ ಶೇ.27ರಷ್ಟು ಹಕ್ಕು ಚಲಾಯಿಸಿದ ಮತದಾರರು

ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಘಡ, ಮಿಝೋರಾಂ, ರಾಜಸ್ಥಾನ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ...

ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಪಯಣ ಕುರಿತ ಪುಸ್ತಕ ಬಿಡುಗಡೆ ಮಾಡಿದ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ರಾಜಕೀಯದಲ್ಲಿ 50 ವರ್ಷಗಳನ್ನು...

ಉತ್ತರ ಪ್ರದೇಶ : ನಲ್ಲಿ ನೀರು ಕುಡಿದಿದ್ದಕ್ಕೆ ದಲಿತ ಯುವಕನ ಹತ್ಯೆ

ಸಾರ್ವಜನಿಕ ನಲ್ಲಿ ನೀರು ಕುಡಿದ ಕಾರಣಕ್ಕಾಗಿ ದಲಿತ ಸಮುದಾಯದ ಯುವಕನೊಬ್ಬನನ್ನು ಅಮಾನುಷವಾಗಿ...