ಲೈಂಗಿಕ ದೌರ್ಜನ್ಯ ಆರೋಪ | ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಎಫ್ಐಆರ್

Date:

Advertisements

ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ (ಕೊರಿಯೋಗ್ರಾಫರ್) ಜಾನಿ ಮಾಸ್ಟರ್ ವಿರುದ್ಧ ಅವರ ಮಾಜಿ ಸಹೋದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ತಮಗೆ ಜಾನಿ ಮಾಸ್ಟರ್‌ ಹಲವಾರು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ ಜಾನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ತಾನು ಅಪ್ರಾಪ್ತೆಯಾಗಿದ್ದಾಗಲೇ ತನಗೆ ಲೈಂಗಿಕ ಕಿರುಕುಳ ನೀಡಲು ಜಾನಿ ಮಾಸ್ಟರ್ ಆರಂಭಿಸಿದ್ದರು. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ದೂರುದಾರ ಮಹಿಳೆ ಆರೋಪಿಸಿದ್ದಾರೆ.

“ನಾನು ಜಾನಿ ಮಾಸ್ಟರ್‌ಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದೆ. ಆಗ, ವಿವಿಧ ನಗರಗಳಲ್ಲಿ ತಮ್ಮ ಚಿತ್ರೀಕರಣಕ್ಕೆ ತೆರಳಿದ್ದಾಗ ಅನೇಕ ಬಾರಿ ತನ್ನ ಮೇಲೆ ಜಾನಿ ಮಾಸ್ಟರ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜೀವ ಬೆದರಿಕೆಯನ್ನೂ ಹಾಕಿದ್ದಾರೆ. ಮಾತ್ರವಲ್ಲದೆ, ಬೇರೆಲ್ಲಿಯೂ ಉದ್ಯೋಗಾವಕಾಶ ಸಿಗದಂತೆ ಮಾಡುತ್ತೇನೆಂದು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ” ಎಂದೂ ಮಹಿಳೆ ದೂರಿದ್ದಾರೆ.

Advertisements

ಜಾನಿ ಮಾಸ್ಟರ್‌ ವಿರುದ್ಧ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಂತ್ರಸ್ತೆ ಮೊದಲು ದೂರು ನೀಡಿದ್ದರು. ಮಂಡಳಿಯು ಚಿತ್ರರಂಗದಲ್ಲಿ ನಡೆಯುವ ಲೈಂಗಿಕ ಕಿರುಕುಳ ಪ್ರಕರಣಗಳನ್ನು ತನಿಖೆ ನಡೆಸಲು ಸಮಿತಿಯನ್ನು ರಚನೆ ಮಾಡಿದೆ. ಸಮಿತಿಯ ಅಧ್ಯಕ್ಷೆ, ನಟಿ ಝಾನ್ಸಿ ಅವರು ಮಹಿಳೆಯ ದೂರಿನ ಬಗ್ಗೆ ಪ್ರತಿಕ್ರಿಯಿಸಿದ್ದು, “ದೂರುದಾರೆ ಮೇಲೆ ಲೈಂಗಿಕ ಕಿರುಕುಳ ಎಸಗಲು ಆರಂಭವಾದಾಗ ಆಕೆ ಅಪ್ರಾಪ್ತರಾಗಿದ್ದರು. ಹೀಗಾಗಿ, ಪೋಕ್ಸೋ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು. ಆದ್ದರಿಂದ, ಮಹಿಳೆಯ ದೂರನ್ನು ಸ್ವೀಕರಿಸಿದ ಸಮಿತಿ, ಆಕೆಗೆ ಪೊಲೀಸರಿಗೆ ದೂರು ನೀಡುವಂತೆ ಸಲಹೆ ನೀಡಲಾಗಿತ್ತು” ಎಂದು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ತಮಿಳು ಚಿತ್ರನಿರ್ದೇಶಕ ನನ್ನ ಜನನಾಂಗಕ್ಕೆ ‘ರಾಡ್’ ತುರುಕಿಸಿದ್ದರು : ನಟಿ ಸೌಮ್ಯ ಗಂಭೀರ ಆರೋಪ

ಜಾನಿ ಮಾಸ್ಟರ್ ಅಧ್ಯಕ್ಷರಾಗಿರುವ ತೆಲುಗು ನೃತ್ಯ ನಿರ್ದೇಶಕರ ಸಂಸ್ಥೆಗೆ ಯಾವುದೇ ಕಾರ್ಯಕ್ರಮವನ್ನು ನಿರ್ವಹಿಸಲು ಅವಕಾಶ ನೀಡದಂತೆ ಚಲನಚಿತ್ರ ಮಂಡಳಿಯನ್ನು ಸಮಿತಿ ಒತ್ತಾಯಿಸಿದೆ ಎಂದೂ ಅವರು ಹೇಳಿದ್ದಾರೆ.

ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ. ಜಾನಿ ಮಾಸ್ಟರ್ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಜಾನಿ ಮಾಸ್ಟರ್ ಅವರು ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಪಕ್ಷದ ಸದಸ್ಯರಾಗಿದ್ದಾರೆ. ಜನಸೇನೆ, ಪ್ರಸ್ತುತ ಆಂಧ್ರಪ್ರದೇಶದಲ್ಲಿ ಸರ್ಕಾರ ರಚಿಸಿರುವ ಮೈತ್ರಿಕೂಟದ ಭಾಗವಾಗಿದೆ. ಪಕ್ಷದ ಕಾರ್ಯಕ್ರಮಗಳಿಂದ ದೂರ ಇರುವಂತೆ ಜಾನಿ ಮಾಸ್ಟರ್‌ಗೆ ತಿಳಿಸಲಾಗಿದೆ ಎಂದು ಜನಸೇನೆ ಹೇಳಿಕೊಂಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X