ಗನ್ ಪಾಯಿಂಟ್‌ನಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಸರ್ಕಾರಿ ಅಧಿಕಾರಿ ಅಮಾನತು

Date:

Advertisements

ಗನ್‌ ತೋರಿಸಿ, ಕೊಲ್ಲುವ ಬೆದರಿಕೆ ಹಾಕಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಹರಿಯಾಣದ ಸರ್ಕಾರಿ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಿ ಹರಿಯಾಣ ಸರ್ಕಾರ ಆದೇಶಿಸಿದೆ.

ಹರಿಯಾಣದ ಹಿಸಾರ್‌ ಜಿಲ್ಲೆಯ ಹಂಸಿಯಲ್ಲಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಆಗಿದ್ದ ಅಧಿಕಾರಿಯನ್ನು ಇತ್ತೀಚೆಗೆ, ಚಂಡೀಗಢದಲ್ಲಿರುವ ಮುಖ್ಯ ಕಾರ್ಯದರ್ಶಿ ಕಚೇರಿಗೆ ನಿಯೋಜಿಸಲಾಗಿತ್ತು. ಅವರನ್ನು ಇದೀಗ ಅಮಾನತು ಮಾಡಲಾಗಿದೆ. ಅಮಾನತು ಆದೇಶದಲ್ಲಿ ಕಾರಣವನ್ನು ಉಲ್ಲೇಖಿಸಲಾಗಿಲ್ಲ. ಆದರೆ, ಮುಖ್ಯ ಕಾರ್ಯದರ್ಶಿಯ ಪೂರ್ವಾನುಮತಿ ಇಲ್ಲದೆ ಕಚೇರಿಯಿಂದ ಯಾವುದೇ ಅಧಿಕಾರಿ ಹೊರಬರುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಮಸಾಜ್ ಮಾಡುವ ಸಮಯದಲ್ಲಿ ಅಧಿಕಾರಿಯು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. “ಅಧಿಕಾರಿಯು ತಮ್ಮ ಅಧಿಕೃತ ನಿವಾಸದಲ್ಲಿ ಮಸಾಜ್ ಮಾಡಲು ತಮ್ಮನ್ನು ಕರೆಸಿಕೊಳ್ಳುತ್ತಿದ್ದರು. ಅವರು ನನ್ನೊಂದಿಗೆ ಈ ಹಿಂದೆಯೇ ಅಸಭ್ಯವಾಗಿ ವರ್ತಿಸಿದ್ದಾರೆ. ನಾನು ಪ್ರತಿರೋಧ ವ್ಯಕ್ತಪಡಿಸಿದ್ದೆ. ಆದರೆ, ಇತ್ತೀಚೆಗೆ, ತನಗೆ ಬಂದೂಕು ತೋರಿಸಿ, ಬೆದರಿಕೆ ಹಾಕಿ ದೌರ್ಜನ್ಯ ಎಸಗಿದ್ದಾರೆ. ಜಾತಿ ನಿಂದನೆಯನ್ನೂ ಮಾಡಿದ್ದಾರೆ. ಸಾಕ್ಷ್ಯಕ್ಕಾಗಿ ಅವರು ದೌರ್ಜನ್ಯವನ್ನು ವಿಡಿಯೋ ಮಾಡಿಕೊಂಡಿದ್ದೇನೆ” ಎಂದು ಮಹಿಳೆ ವಿವರಿಸಿದ್ದಾರೆ.

Advertisements

ಸಂತ್ರಸ್ತೆಯು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ದೂರಿನ ಪ್ರತಿ ಮತ್ತು ವಿಡಿಯೋವನ್ನು ಚಂಡೀಗಢ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಹರಿಯಾಣ ಮುಖ್ಯಮಂತ್ರಿಗೆ ಕಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X